<p><strong>ನವದೆಹಲಿ:</strong> ದಕ್ಷಿಣ ಆಫ್ರಿಕಾ ಎದುರಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ನಡೆಯಲಿರುವ ಗುವಾಹಟಿಗೆ ಭಾರತ ತಂಡದೊಂದಿಗೆ ನಾಯಕ ಶುಭಮನ್ ಗಿಲ್ ಬುಧವಾರ ಬಂದಿಳಿದರು. </p><p>26 ವರ್ಷದ ಗಿಲ್ ಅವರು ಕೋಲ್ಕತ್ತದಲ್ಲಿ ನಡೆದಿದ್ದ ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವಾಗ ಕುತ್ತಿಗೆಯ ಸ್ನಾಯು ಸೆಳೆತಕ್ಕೊಳಗಾಗಿದ್ದರು. ಅದರಿಂದಾಗಿ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿತ್ತು. ಆ ಪಂದ್ಯದ ಎರಡನೇ ಇನಿಂಗ್ಸ್ನಲ್ಲಿ ಆಡಿರಲಿಲ್ಲ. ಇದೇ 22ರಂದು ಸರಣಿಯ ಎರಡನೇ ಪಂದ್ಯವು ಗುವಾಹಟಿಯಲ್ಲಿ ಆರಂಭವಾಗಲಿದೆ. </p><p>‘ಶುಭಮನ್ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಅವರು ಗುವಾಹಟಿಗೆ ತಂಡದೊಂದಿಗೆ ಹೋಗಿದ್ದಾರೆ’ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜೀತ್ ಸೈಕಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p><p>ಆದರೆ ಗಿಲ್ ಅವರು ಆಡುವ ಬಗ್ಗೆ ಇನ್ನೂ ಖಚಿತ ಮಾಹಿತಿ ಇಲ್ಲ. ಅವರ ಬದಲಿಗೆ ಆಲ್ರೌಂಡರ್ ನಿತೀಶ್ ರೆಡ್ಡಿ ಅವರು ಅವಕಾಶ ಪಡೆಯುವುದು ಖಚಿತವಾಗಿದೆ. ರಾಜ್ಕೋಟ್ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ಎ ತಂಡದ ಎದುರಿನ ಸರಣಿಯಲ್ಲಿ ಭಾರತ ಎ ತಂಡದಲ್ಲಿ ಆಡಲಿದ್ದ ನಿತೀಶ್ ಅವರನ್ನು ಕೋಲ್ಕತ್ತಕ್ಕೆ ಕರೆಸಿಕೊಳ್ಳಲಾಗಿದೆ. ಮಂಗಳವಾರ ಅವರು ಅಭ್ಯಾಸದಲ್ಲಿ ಭಾಗವಹಿಸಿದ್ದರು. </p><p>ಭಾರತ ತಂಡವು ಮೊದಲ ಟೆಸ್ಟ್ ಪಂದ್ಯದಲ್ಲಿ ಸೋತಿತ್ತು. </p>.ಕುತ್ತಿಗೆಗೆ ಗಾಯ: ಮೊದಲ ಟೆಸ್ಟ್ ಪಂದ್ಯದಿಂದ ಹೊರಬಿದ್ದ ಶುಭಮನ್ ಗಿಲ್.ಕುತ್ತಿಗೆ ನೋವು | ಅಂತಿಮ ಪಂದ್ಯದಲ್ಲಿ ಗಿಲ್ ಆಡುವುದು ಅನುಮಾನ; ದೇವದತ್ತಗೆ ಅವಕಾಶ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದಕ್ಷಿಣ ಆಫ್ರಿಕಾ ಎದುರಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ನಡೆಯಲಿರುವ ಗುವಾಹಟಿಗೆ ಭಾರತ ತಂಡದೊಂದಿಗೆ ನಾಯಕ ಶುಭಮನ್ ಗಿಲ್ ಬುಧವಾರ ಬಂದಿಳಿದರು. </p><p>26 ವರ್ಷದ ಗಿಲ್ ಅವರು ಕೋಲ್ಕತ್ತದಲ್ಲಿ ನಡೆದಿದ್ದ ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವಾಗ ಕುತ್ತಿಗೆಯ ಸ್ನಾಯು ಸೆಳೆತಕ್ಕೊಳಗಾಗಿದ್ದರು. ಅದರಿಂದಾಗಿ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿತ್ತು. ಆ ಪಂದ್ಯದ ಎರಡನೇ ಇನಿಂಗ್ಸ್ನಲ್ಲಿ ಆಡಿರಲಿಲ್ಲ. ಇದೇ 22ರಂದು ಸರಣಿಯ ಎರಡನೇ ಪಂದ್ಯವು ಗುವಾಹಟಿಯಲ್ಲಿ ಆರಂಭವಾಗಲಿದೆ. </p><p>‘ಶುಭಮನ್ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಅವರು ಗುವಾಹಟಿಗೆ ತಂಡದೊಂದಿಗೆ ಹೋಗಿದ್ದಾರೆ’ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜೀತ್ ಸೈಕಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p><p>ಆದರೆ ಗಿಲ್ ಅವರು ಆಡುವ ಬಗ್ಗೆ ಇನ್ನೂ ಖಚಿತ ಮಾಹಿತಿ ಇಲ್ಲ. ಅವರ ಬದಲಿಗೆ ಆಲ್ರೌಂಡರ್ ನಿತೀಶ್ ರೆಡ್ಡಿ ಅವರು ಅವಕಾಶ ಪಡೆಯುವುದು ಖಚಿತವಾಗಿದೆ. ರಾಜ್ಕೋಟ್ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ಎ ತಂಡದ ಎದುರಿನ ಸರಣಿಯಲ್ಲಿ ಭಾರತ ಎ ತಂಡದಲ್ಲಿ ಆಡಲಿದ್ದ ನಿತೀಶ್ ಅವರನ್ನು ಕೋಲ್ಕತ್ತಕ್ಕೆ ಕರೆಸಿಕೊಳ್ಳಲಾಗಿದೆ. ಮಂಗಳವಾರ ಅವರು ಅಭ್ಯಾಸದಲ್ಲಿ ಭಾಗವಹಿಸಿದ್ದರು. </p><p>ಭಾರತ ತಂಡವು ಮೊದಲ ಟೆಸ್ಟ್ ಪಂದ್ಯದಲ್ಲಿ ಸೋತಿತ್ತು. </p>.ಕುತ್ತಿಗೆಗೆ ಗಾಯ: ಮೊದಲ ಟೆಸ್ಟ್ ಪಂದ್ಯದಿಂದ ಹೊರಬಿದ್ದ ಶುಭಮನ್ ಗಿಲ್.ಕುತ್ತಿಗೆ ನೋವು | ಅಂತಿಮ ಪಂದ್ಯದಲ್ಲಿ ಗಿಲ್ ಆಡುವುದು ಅನುಮಾನ; ದೇವದತ್ತಗೆ ಅವಕಾಶ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>