<p><strong>ರಾಯಪುರ:</strong> ಇಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ 4 ವಿಕೆಟ್ಗಳಿಂದ ಸೋಲು ಅನುಭವಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಋತುರಾಜ್ ಗಾಯಕವಾಡ್ ಮತ್ತು ವಿರಾಟ್ ಕೊಹ್ಲಿಯವರ ಅದ್ಭುತ ಶತಕಗಳ ನೆರವಿನಿಂದ 358 ರನ್ ಕಲೆಹಾಕಿತ್ತು. ಆದರೆ, ಈ ದೊಡ್ಡ ಮೊತ್ತವನ್ನು ಕಾಪಾಡಿಕೊಳ್ಳುವಲ್ಲಿ ಭಾರತೀಯ ಬೌಲರ್ಗಳು ವಿಫಲರಾದರು.</p><p>ಇಷ್ಟು ದೊಡ್ಡ ಮೊತ್ತ ಇದ್ದರೂ ಅದನ್ನು ಕಾಪಾಡಿಕೊಳ್ಳಲು ವಿಫಲವಾಗಿರುವ ಭಾರತೀಯ ಬೌಲರ್ಗಳ ಕುರಿತು ಕ್ರಿಕೆಟ್ ಪಂಡಿತರು ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ತಂಡದ ನಾಯಕ ಕೆ. ಎಲ್. ರಾಹುಲ್ ಮಾತ್ರ ಸೋಲಿಗೆ ಬೌಲರ್ಗಳು ಮಾತ್ರ ಕಾರಣರಲ್ಲ ಎಂದು ತಿಳಿಸಿದ್ದಾರೆ. </p><h2><strong>ರಾಹುಲ್ ಪ್ರಕಾರ ಸೋಲಿಗೆ ಕಾರಣವೇನು?</strong></h2><p>ಪಂದ್ಯದ ಬಳಕ ಮಾತನಡಿದ ತಂಡದ ನಾಯಕನೂ ಆಗಿರುವ ಕನ್ನಡಿಗ ಕೆ.ಎಲ್. ರಾಹುಲ್, ‘ಈ ಸೋಲನ್ನು ಸಹಿಸಿಕೊಳ್ಳುವುದು ಕಠಿಣ. ನಾವು ನಿರಂತರವಾಗಿ ಟಾಸ್ ಸೋಲುತ್ತಿರುವುದು ನಮ್ಮ ದುರದೃಷ್ಟ. ಸತತ ಎರಡು ಟಾಸ್ಗ ಸೋತಿರುವುದಕ್ಕೆ, ನನ್ನನ್ನೇ ನಾನು ದೂಷಿಸಿಕೊಳ್ಳುತ್ತೇನೆ’ ಎಂದರು. </p><p>‘ಇಬ್ಬನಿ ಹೆಚ್ಚಾಗಿರುವುದರಿಂದ ಎರಡನೇ ಇನಿಂಗ್ಸ್ನಲ್ಲಿ ಬೌಲಿಂಗ್ ಮಾಡುವುದು ಕಷ್ಟವಾಗುತ್ತೆ ಮತ್ತು ಬೌಲರ್ಗಳು ಒದ್ದೆಯಾದ ಚೆಂಡಿನಿಂದ ಬೌಲ್ ಮಾಡುವಾಗ ಎದುರಿಸುವ ತೊಂದರೆಗಳೇನು ಎಂಬುದನ್ನು ಈ ಪಂದ್ಯದ ಮೂಲಕ ಮತ್ತೊಮ್ಮೆ ಸಾಬೀತಾಗಿದೆ ಎಂದು ಸೋಲಿಗೆ ಟಾಸ್ ಹಾಗೂ ಇಬ್ಬನಿ ಕಾರಣ ಎಂದು ತಿಳಿಸಿದರು. </p>.ನಾಯಕತ್ವ, ಪ್ರಬುದ್ಧ ಬ್ಯಾಟಿಂಗ್: ಆ ಒಂದು ಸಿಕ್ಸರ್ಗೆ ರಾಹುಲ್ ಅಭಿಮಾನಿಗಳು ಫಿದಾ.<p>ಬೌಲರ್ಗಳು ತಮ್ಮ ಶಕ್ತಿ ಮೀರಿ ಪ್ರಯತ್ನಿಸಿದರು. ಆದರೆ, ಫೀಲ್ಡಿಂಗ್ನಲ್ಲಿ ನಾವು ಮಾಡಿದ ಕೆಲವು ತಪ್ಪುಗಳು ನಮ್ಮ ಸೋಲಿಗೆ ಕಾರಣವಾಯಿತು ಎಂದರು.</p>.IND vs SA: ಭಾರತ ಏಕದಿನ ತಂಡದ ನಾಯಕನಾಗಿ ಕೆ.ಎಲ್. ರಾಹುಲ್ ದಾಖಲೆ ಹೀಗಿದೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಪುರ:</strong> ಇಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ 4 ವಿಕೆಟ್ಗಳಿಂದ ಸೋಲು ಅನುಭವಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಋತುರಾಜ್ ಗಾಯಕವಾಡ್ ಮತ್ತು ವಿರಾಟ್ ಕೊಹ್ಲಿಯವರ ಅದ್ಭುತ ಶತಕಗಳ ನೆರವಿನಿಂದ 358 ರನ್ ಕಲೆಹಾಕಿತ್ತು. ಆದರೆ, ಈ ದೊಡ್ಡ ಮೊತ್ತವನ್ನು ಕಾಪಾಡಿಕೊಳ್ಳುವಲ್ಲಿ ಭಾರತೀಯ ಬೌಲರ್ಗಳು ವಿಫಲರಾದರು.</p><p>ಇಷ್ಟು ದೊಡ್ಡ ಮೊತ್ತ ಇದ್ದರೂ ಅದನ್ನು ಕಾಪಾಡಿಕೊಳ್ಳಲು ವಿಫಲವಾಗಿರುವ ಭಾರತೀಯ ಬೌಲರ್ಗಳ ಕುರಿತು ಕ್ರಿಕೆಟ್ ಪಂಡಿತರು ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ತಂಡದ ನಾಯಕ ಕೆ. ಎಲ್. ರಾಹುಲ್ ಮಾತ್ರ ಸೋಲಿಗೆ ಬೌಲರ್ಗಳು ಮಾತ್ರ ಕಾರಣರಲ್ಲ ಎಂದು ತಿಳಿಸಿದ್ದಾರೆ. </p><h2><strong>ರಾಹುಲ್ ಪ್ರಕಾರ ಸೋಲಿಗೆ ಕಾರಣವೇನು?</strong></h2><p>ಪಂದ್ಯದ ಬಳಕ ಮಾತನಡಿದ ತಂಡದ ನಾಯಕನೂ ಆಗಿರುವ ಕನ್ನಡಿಗ ಕೆ.ಎಲ್. ರಾಹುಲ್, ‘ಈ ಸೋಲನ್ನು ಸಹಿಸಿಕೊಳ್ಳುವುದು ಕಠಿಣ. ನಾವು ನಿರಂತರವಾಗಿ ಟಾಸ್ ಸೋಲುತ್ತಿರುವುದು ನಮ್ಮ ದುರದೃಷ್ಟ. ಸತತ ಎರಡು ಟಾಸ್ಗ ಸೋತಿರುವುದಕ್ಕೆ, ನನ್ನನ್ನೇ ನಾನು ದೂಷಿಸಿಕೊಳ್ಳುತ್ತೇನೆ’ ಎಂದರು. </p><p>‘ಇಬ್ಬನಿ ಹೆಚ್ಚಾಗಿರುವುದರಿಂದ ಎರಡನೇ ಇನಿಂಗ್ಸ್ನಲ್ಲಿ ಬೌಲಿಂಗ್ ಮಾಡುವುದು ಕಷ್ಟವಾಗುತ್ತೆ ಮತ್ತು ಬೌಲರ್ಗಳು ಒದ್ದೆಯಾದ ಚೆಂಡಿನಿಂದ ಬೌಲ್ ಮಾಡುವಾಗ ಎದುರಿಸುವ ತೊಂದರೆಗಳೇನು ಎಂಬುದನ್ನು ಈ ಪಂದ್ಯದ ಮೂಲಕ ಮತ್ತೊಮ್ಮೆ ಸಾಬೀತಾಗಿದೆ ಎಂದು ಸೋಲಿಗೆ ಟಾಸ್ ಹಾಗೂ ಇಬ್ಬನಿ ಕಾರಣ ಎಂದು ತಿಳಿಸಿದರು. </p>.ನಾಯಕತ್ವ, ಪ್ರಬುದ್ಧ ಬ್ಯಾಟಿಂಗ್: ಆ ಒಂದು ಸಿಕ್ಸರ್ಗೆ ರಾಹುಲ್ ಅಭಿಮಾನಿಗಳು ಫಿದಾ.<p>ಬೌಲರ್ಗಳು ತಮ್ಮ ಶಕ್ತಿ ಮೀರಿ ಪ್ರಯತ್ನಿಸಿದರು. ಆದರೆ, ಫೀಲ್ಡಿಂಗ್ನಲ್ಲಿ ನಾವು ಮಾಡಿದ ಕೆಲವು ತಪ್ಪುಗಳು ನಮ್ಮ ಸೋಲಿಗೆ ಕಾರಣವಾಯಿತು ಎಂದರು.</p>.IND vs SA: ಭಾರತ ಏಕದಿನ ತಂಡದ ನಾಯಕನಾಗಿ ಕೆ.ಎಲ್. ರಾಹುಲ್ ದಾಖಲೆ ಹೀಗಿದೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>