<p><strong>ಕೋಲ್ಕತ್ತ:</strong> ಕುತ್ತಿಗೆ ನೋವಿನಿಂದ ಬಳಲುತ್ತಿರುವ ಭಾರತ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ಶುಭಮನ್ ಗಿಲ್, ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಟೆಸ್ಟ್ನಲ್ಲಿ ಆಡುವುದು ಅನುಮಾನವೆನಿಸಿದೆ. </p><p>ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕಾಗಿ ಟೀಮ್ ಇಂಡಿಯಾದ ಆಟಗಾರರು ಬುಧವಾರ ಗುವಾಹಟಿಗೆ ಪ್ರಯಾಣ ಬೆಳೆಸಲಿದ್ದಾರೆ. ಆದರೆ ತಂಡದ ಸಹ ಆಟಗಾರರೊಂದಿಗೆ ಗಿಲ್ ಪ್ರಯಾಣ ಬೆಳೆಸುವುದಿಲ್ಲ ಎಂದು ಬಂಗಾಳ ಕ್ರಿಕೆಟ್ ಸಂಸ್ಥೆಯ ಮೂಲಗಳು ತಿಳಿಸಿವೆ. </p><p>'ತೀವ್ರ ಕುತ್ತಿಗೆ ನೋವಿನಿಂದ ಗಿಲ್ ಬಳಲುತ್ತಿದ್ದು, ನೆಕ್ ಕಾಲರ್ ಧರಿಸಿದ್ದಾರೆ. ಅವರಿಗೆ ಮೂರು-ನಾಲ್ಕು ದಿನಗಳ ವಿಶ್ರಾಂತಿ ಸೂಚಿಸಲಾಗಿದೆ. ಈ ಸಮಯದಲ್ಲಿ ಪ್ರಯಾಣಿಸದಂತೆ ಸಲಹೆ ನೀಡಲಾಗಿದೆ. ಗಿಲ್ ಅವರ ಗಾಯದ ಬಗ್ಗೆ ಅವಲೋಕಿಸಲಾಗುತ್ತಿದೆ. ಮಂಗಳವಾರದ ವೇಳೆ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ' ಎಂದು ಹೇಳಿದೆ. </p><p>ಮಂಗಳವಾರದಂದು ಆಟಗಾರರಿಗೆ ಐಚ್ಛಿಕ ಅಭ್ಯಾಸದ ಅವಧಿ ಇರಲಿದೆ. </p><p>ಒಂದು ವೇಳೆ ಗಿಲ್ ಅಲಭ್ಯವಾದರೆ ಸಾಯಿ ಸುದರ್ಶನ್ ಅಥವಾ ಕರ್ನಾಟಕದ ದೇವದತ್ತ ಪಡಿಕ್ಕಲ್ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. </p><p>ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಅಂತಿಮ ಟೆಸ್ಟ್ ಶನಿವಾರದಿಂದ (ನ.22) ಆರಂಭವಾಗಲಿದೆ. ಗಿಲ್ ಅನುಪಸ್ಥಿತಿಯಲ್ಲಿ ತಂಡವನ್ನು ರಿಷಭ್ ಪಂತ್ ಮುನ್ನಡೆಸಿದ್ದರು. </p><p>ಕೋಲ್ಕತ್ತದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 30 ರನ್ ಅಂತರದ ಸೋಲಿಗೆ ಶರಣಾಗಿತ್ತು. ಆ ಮೂಲಕ ಸರಣಿಯಲ್ಲಿ 0-1 ಅಂತರದ ಹಿನ್ನಡೆಗೊಳಗಾಗಿದೆ.</p><p>ಈ ಪಂದ್ಯವು ಕೇವಲ ಮೂರು ದಿನಗಳಲ್ಲೇ ಮುಕ್ತಾಯಗೊಂಡಿರುವುದು ಹಾಗೂ ಅಂತಿಮ ಇನಿಂಗ್ಸ್ನಲ್ಲಿ 124 ರನ್ ಬೆನ್ನಟ್ಟುವಲ್ಲಿ ಟೀಮ್ ಇಂಡಿಯಾ ವಿಫಲವಾಗಿರುವುದು ತೀವ್ರ ಟೀಕೆಗೆ ಕಾರಣವಾಗಿದೆ. </p>.ಕೂಚ್ ಬಿಹಾರಿ ಟ್ರೋಫಿ| ರೋಹಿತ್ ಶತಕ: ಕರ್ನಾಟಕಕ್ಕೆ ಇನಿಂಗ್ಸ್ ಮುನ್ನಡೆ.ಭಾರತದಲ್ಲಿ ಟೆಸ್ಟ್ ಗೆದ್ದ ಆಫ್ರಿಕಾ: ಉರುಳಿದ ಆತಿಥೇಯರು; ಅರಳಿದ ಪ್ರವಾಸಿಗರು!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಕುತ್ತಿಗೆ ನೋವಿನಿಂದ ಬಳಲುತ್ತಿರುವ ಭಾರತ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ಶುಭಮನ್ ಗಿಲ್, ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಟೆಸ್ಟ್ನಲ್ಲಿ ಆಡುವುದು ಅನುಮಾನವೆನಿಸಿದೆ. </p><p>ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕಾಗಿ ಟೀಮ್ ಇಂಡಿಯಾದ ಆಟಗಾರರು ಬುಧವಾರ ಗುವಾಹಟಿಗೆ ಪ್ರಯಾಣ ಬೆಳೆಸಲಿದ್ದಾರೆ. ಆದರೆ ತಂಡದ ಸಹ ಆಟಗಾರರೊಂದಿಗೆ ಗಿಲ್ ಪ್ರಯಾಣ ಬೆಳೆಸುವುದಿಲ್ಲ ಎಂದು ಬಂಗಾಳ ಕ್ರಿಕೆಟ್ ಸಂಸ್ಥೆಯ ಮೂಲಗಳು ತಿಳಿಸಿವೆ. </p><p>'ತೀವ್ರ ಕುತ್ತಿಗೆ ನೋವಿನಿಂದ ಗಿಲ್ ಬಳಲುತ್ತಿದ್ದು, ನೆಕ್ ಕಾಲರ್ ಧರಿಸಿದ್ದಾರೆ. ಅವರಿಗೆ ಮೂರು-ನಾಲ್ಕು ದಿನಗಳ ವಿಶ್ರಾಂತಿ ಸೂಚಿಸಲಾಗಿದೆ. ಈ ಸಮಯದಲ್ಲಿ ಪ್ರಯಾಣಿಸದಂತೆ ಸಲಹೆ ನೀಡಲಾಗಿದೆ. ಗಿಲ್ ಅವರ ಗಾಯದ ಬಗ್ಗೆ ಅವಲೋಕಿಸಲಾಗುತ್ತಿದೆ. ಮಂಗಳವಾರದ ವೇಳೆ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ' ಎಂದು ಹೇಳಿದೆ. </p><p>ಮಂಗಳವಾರದಂದು ಆಟಗಾರರಿಗೆ ಐಚ್ಛಿಕ ಅಭ್ಯಾಸದ ಅವಧಿ ಇರಲಿದೆ. </p><p>ಒಂದು ವೇಳೆ ಗಿಲ್ ಅಲಭ್ಯವಾದರೆ ಸಾಯಿ ಸುದರ್ಶನ್ ಅಥವಾ ಕರ್ನಾಟಕದ ದೇವದತ್ತ ಪಡಿಕ್ಕಲ್ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. </p><p>ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಅಂತಿಮ ಟೆಸ್ಟ್ ಶನಿವಾರದಿಂದ (ನ.22) ಆರಂಭವಾಗಲಿದೆ. ಗಿಲ್ ಅನುಪಸ್ಥಿತಿಯಲ್ಲಿ ತಂಡವನ್ನು ರಿಷಭ್ ಪಂತ್ ಮುನ್ನಡೆಸಿದ್ದರು. </p><p>ಕೋಲ್ಕತ್ತದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 30 ರನ್ ಅಂತರದ ಸೋಲಿಗೆ ಶರಣಾಗಿತ್ತು. ಆ ಮೂಲಕ ಸರಣಿಯಲ್ಲಿ 0-1 ಅಂತರದ ಹಿನ್ನಡೆಗೊಳಗಾಗಿದೆ.</p><p>ಈ ಪಂದ್ಯವು ಕೇವಲ ಮೂರು ದಿನಗಳಲ್ಲೇ ಮುಕ್ತಾಯಗೊಂಡಿರುವುದು ಹಾಗೂ ಅಂತಿಮ ಇನಿಂಗ್ಸ್ನಲ್ಲಿ 124 ರನ್ ಬೆನ್ನಟ್ಟುವಲ್ಲಿ ಟೀಮ್ ಇಂಡಿಯಾ ವಿಫಲವಾಗಿರುವುದು ತೀವ್ರ ಟೀಕೆಗೆ ಕಾರಣವಾಗಿದೆ. </p>.ಕೂಚ್ ಬಿಹಾರಿ ಟ್ರೋಫಿ| ರೋಹಿತ್ ಶತಕ: ಕರ್ನಾಟಕಕ್ಕೆ ಇನಿಂಗ್ಸ್ ಮುನ್ನಡೆ.ಭಾರತದಲ್ಲಿ ಟೆಸ್ಟ್ ಗೆದ್ದ ಆಫ್ರಿಕಾ: ಉರುಳಿದ ಆತಿಥೇಯರು; ಅರಳಿದ ಪ್ರವಾಸಿಗರು!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>