ಕೊಲಂಬೊ: ಇಲ್ಲಿನ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯುತ್ತಿರುವ 3ನೇ ಏಕದಿನ ಪಂದ್ಯದಲ್ಲಿ ಮಳೆ ಅಡ್ಡಿ ಪಡಿಸಿದ್ದ 50 ಸೀಮಿತ ಓವರ್ಗಳನ್ನು47ಕ್ಕೆ ಇಳಿಸಲಾಗಿದೆ.ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ಬ್ಯಾಟಿಂಗ್ ಮಾಡಿದ ಭಾರತ 225 ರನ್ಗಳಿಗೆ ಆಲೌಟ್ ಆಗಿದೆ.
ಭಾರತ 3 ವಿಕೆಟ್ಗೆ 147 ರನ್ ಗಳಿಸಿದ್ದಾಗ ಮಳೆಯ ಅಡಚಣೆಯಿಂದ ಪಂದ್ಯವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು. ನಂತರ ಬ್ಯಾಟಿಂಗ್ ಮುಂದುವರಿಸಿದ ಭಾರತ ಅಲ್ಪ ಮೊತ್ತಕ್ಕೆ ಒಂದೊಂದಾಗಿ ವಿಕೆಟ್ ಚೆಲ್ಲಿದೆ. 43.1 ಓವರ್ ಗಳಿಗೆ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡ ಟೀಮ್ ಇಂಡಿಯಾ 226 ರನ್ಗಳ ಗುರಿಯನ್ನು ಶ್ರೀಲಂಕಾಗೆ ನೀಡಿದೆ.
ಮೂರು ಪಂದ್ಯಗಳ ಸರಣಿಯಲ್ಲಿ ಎರಡು ಪಂದ್ಯಗಳನ್ನು ಈಗಾಗಲೇ ಜಯಿಸುವ ಮೂಲಕ ಭಾರತವು ಸರಣಿ ತನ್ನದಾಗಿಸಿಕೊಂಡಿದೆ.
ಸರಣಿಯ ಮೊದಲ ಪಂದ್ಯದಲ್ಲಿ ನಾಯಕ ಶಿಖರ್ ಧವನ್ ಆಕರ್ಷಕ ಅರ್ಧ ಶತಕ ಸಿಡಿಸಿದ್ದರೆ, ಎರಡನೇ ಪಂದ್ಯದಲ್ಲಿ ಬೌಲಿಂಗ್ ಹಾಗೂ ಬ್ಯಾಟಿಂಗ್ನಲ್ಲಿ ಮಿಂಚಿದ ದೀಪಕ್ ಚಾಹರ್ (ಅಜೇಯ 69 ರನ್ ಹಾಗೂ 2 ವಿಕೆಟ್) ಭಾರತದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.