<p><strong>ಕೊಲಂಬೊ:</strong> ಮುಂಬರುವ ಟ್ವೆಂಟಿ-20 ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಟೀಮ್ ಇಂಡಿಯಾದ ಕಾಯಂ ನಾಯಕ ವಿರಾಟ್ ಕೊಹ್ಲಿ ಹಾಗೂ ಮುಖ್ಯ ಕೋಚ್ ರವಿಶಾಸ್ತ್ರಿ ಬಯಸಿದ್ದಲ್ಲಿ, ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಯಾವುದೇ ನಿರ್ದಿಷ್ಟ ಆಟಗಾರರಿಗೆ ಅವಕಾಶ ನೀಡಲು ಸಿದ್ಧವಿರುವುದಾಗಿ ನಾಯಕ ಶಿಖರ್ ಧವನ್ ಅಭಿಪ್ರಾಯಪಟ್ಟಿದ್ದಾರೆ.</p>.<p>ವಿರಾಟ್ ಕೊಹ್ಲಿ ನೇತೃತ್ವದ ತಂಡವು ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ಪ್ರವಾಸ ಕೈಗೊಂಡಿದೆ. ಇನ್ನೊಂದೆಡೆ ಧವನ್ ನೇತೃತ್ವದಲ್ಲಿ ಯುವ ತಂಡವು ಶ್ರೀಲಂಕಾ ವಿರುದ್ಧ ಸೀಮಿತ ಓವರ್ಗಳ ಸರಣಿಯಲ್ಲಿ ಭಾಗವಹಿಸುತ್ತಿದೆ. ಮೊದಲ ಏಕದಿನ ಪಂದ್ಯವು ಇಂದು (ಭಾನುವಾರ) ನಡೆಯಲಿದೆ.</p>.<p>ಇದನ್ನೂ ಓದಿ:<a href="https://www.prajavani.net/sports/cricket/rookie-roster-indias-white-ball-newbies-start-lankan-audition-for-vacant-t20-wc-slots-849173.html" itemprop="url">India vs Sri Lanka – ಪದಾರ್ಪಣೆಯ ಕನಸಿನಲ್ಲಿ ಯುವ ಆಟಗಾರರು </a></p>.<p>ಮಾಜಿ ನಾಯಕ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಯುವ ಪಡೆಯು ಅತ್ಯುತ್ತಮ ಪ್ರದರ್ಶನ ನೀಡುವ ಗುರಿ ಹೊಂದಿದೆ. ಮುಂಬರುವ ಟಿ20 ವಿಶ್ವಕಪ್ ಹಿನ್ನೆಲೆಯಲ್ಲಿ ಯುವ ಆಟಗಾರರಿಗೆ ತಮ್ಮ ಸಾಮರ್ಥ್ಯ ಸಾಬೀತು ಮಾಡಲು ಉತ್ತಮ ಅವಕಾಶ ಒದಗಿ ಬಂದಿದೆ.</p>.<p>'ಈ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಅಥವಾ ಕೋಚ್ ರವಿಶಾಸ್ತ್ರಿ ಜೊತೆ ನಾನು ಯಾವುದೇ ನಿರ್ದಿಷ್ಟ ಚರ್ಚೆಯನ್ನು ನಡೆಸಿಲ್ಲ. ಆದರೆ ಅವರು ಕೋಚ್ ರಾಹುಲ್ ದ್ರಾವಿಡ್ ಹಾಗೂ ಆಯ್ಕೆದಾರರದೊಂದಿಗೆ ಚರ್ಚೆ ನಡೆಸಿರಬಹುದು ಎಂಬುದರ ಬಗ್ಗೆ ನನಗೆ ಖಾತ್ರಿಯಿದೆ' ಎಂದು ಧವನ್ ತಿಳಿಸಿದರು.</p>.<p>'ಈ ಸರಣಿಯನ್ನುವಿಶ್ವಕಪ್ ಗಮನದಲ್ಲಿಟ್ಟುಕೊಂಡು ಆಡಲಾಗುವುದು. ಒಂದು ವೇಳೆ ಆಯ್ಕೆದಾರರು, ರವಿ ಹಾಗೂ ವಿರಾಟ್, ಕೆಲವು ಆಟಗಾರರನ್ನು ಪರೀಕ್ಷಿಸಲು ಬಯಸಿದ್ದಲ್ಲಿಅದಕ್ಕೆ ಅವಕಾಶ ಕಲ್ಪಿಸಲಾಗುವುದು. ಏಕೆಂದರೆ ಇದು ವಿಶ್ವಕಪ್ಗೂ ಮೊದಲು ನಮ್ಮ ಮುಂದಿರುವ ಏಕೈಕ ಸರಣಿಯಾಗಿದೆ' ಎಂದಿದ್ದಾರೆ.</p>.<p>ಆದರೂ ಆಡುವ ಬಳಗದಲ್ಲಿ ಯಾವೆಲ್ಲ ಆಟಗಾರರು ಕಾಣಿಸಿಕೊಳ್ಳಲಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿಲ್ಲ. ಧವನ್ ಮುಂದಾಳತ್ವದ ಭಾರತ ತಂಡದಲ್ಲಿ ಆರು ಮಂದಿ ಆಟಗಾರರು ಇನ್ನಷ್ಟೇ ಪದಾರ್ಪಣೆ ಮಾಡಬೇಕಿದೆ.</p>.<p>ಹಾಗಿದ್ದರೂ ಸರಣಿ ಗೆಲುವೇ ತಂಡದ ಪ್ರಮುಖ ಗುರಿ ಎಂಬುದನ್ನು ಧವನ್ ಸ್ಪಷ್ಟಪಡಿಸಿದರು. ಇದಕ್ಕಾಗಿ ಪ್ರಯೋಗದ ಹೆಸರಲ್ಲಿ ಯಾವ ರಾಜಿಗೂ ಸಿದ್ಧವಿಲ್ಲ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ:</strong> ಮುಂಬರುವ ಟ್ವೆಂಟಿ-20 ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಟೀಮ್ ಇಂಡಿಯಾದ ಕಾಯಂ ನಾಯಕ ವಿರಾಟ್ ಕೊಹ್ಲಿ ಹಾಗೂ ಮುಖ್ಯ ಕೋಚ್ ರವಿಶಾಸ್ತ್ರಿ ಬಯಸಿದ್ದಲ್ಲಿ, ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಯಾವುದೇ ನಿರ್ದಿಷ್ಟ ಆಟಗಾರರಿಗೆ ಅವಕಾಶ ನೀಡಲು ಸಿದ್ಧವಿರುವುದಾಗಿ ನಾಯಕ ಶಿಖರ್ ಧವನ್ ಅಭಿಪ್ರಾಯಪಟ್ಟಿದ್ದಾರೆ.</p>.<p>ವಿರಾಟ್ ಕೊಹ್ಲಿ ನೇತೃತ್ವದ ತಂಡವು ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ಪ್ರವಾಸ ಕೈಗೊಂಡಿದೆ. ಇನ್ನೊಂದೆಡೆ ಧವನ್ ನೇತೃತ್ವದಲ್ಲಿ ಯುವ ತಂಡವು ಶ್ರೀಲಂಕಾ ವಿರುದ್ಧ ಸೀಮಿತ ಓವರ್ಗಳ ಸರಣಿಯಲ್ಲಿ ಭಾಗವಹಿಸುತ್ತಿದೆ. ಮೊದಲ ಏಕದಿನ ಪಂದ್ಯವು ಇಂದು (ಭಾನುವಾರ) ನಡೆಯಲಿದೆ.</p>.<p>ಇದನ್ನೂ ಓದಿ:<a href="https://www.prajavani.net/sports/cricket/rookie-roster-indias-white-ball-newbies-start-lankan-audition-for-vacant-t20-wc-slots-849173.html" itemprop="url">India vs Sri Lanka – ಪದಾರ್ಪಣೆಯ ಕನಸಿನಲ್ಲಿ ಯುವ ಆಟಗಾರರು </a></p>.<p>ಮಾಜಿ ನಾಯಕ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಯುವ ಪಡೆಯು ಅತ್ಯುತ್ತಮ ಪ್ರದರ್ಶನ ನೀಡುವ ಗುರಿ ಹೊಂದಿದೆ. ಮುಂಬರುವ ಟಿ20 ವಿಶ್ವಕಪ್ ಹಿನ್ನೆಲೆಯಲ್ಲಿ ಯುವ ಆಟಗಾರರಿಗೆ ತಮ್ಮ ಸಾಮರ್ಥ್ಯ ಸಾಬೀತು ಮಾಡಲು ಉತ್ತಮ ಅವಕಾಶ ಒದಗಿ ಬಂದಿದೆ.</p>.<p>'ಈ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಅಥವಾ ಕೋಚ್ ರವಿಶಾಸ್ತ್ರಿ ಜೊತೆ ನಾನು ಯಾವುದೇ ನಿರ್ದಿಷ್ಟ ಚರ್ಚೆಯನ್ನು ನಡೆಸಿಲ್ಲ. ಆದರೆ ಅವರು ಕೋಚ್ ರಾಹುಲ್ ದ್ರಾವಿಡ್ ಹಾಗೂ ಆಯ್ಕೆದಾರರದೊಂದಿಗೆ ಚರ್ಚೆ ನಡೆಸಿರಬಹುದು ಎಂಬುದರ ಬಗ್ಗೆ ನನಗೆ ಖಾತ್ರಿಯಿದೆ' ಎಂದು ಧವನ್ ತಿಳಿಸಿದರು.</p>.<p>'ಈ ಸರಣಿಯನ್ನುವಿಶ್ವಕಪ್ ಗಮನದಲ್ಲಿಟ್ಟುಕೊಂಡು ಆಡಲಾಗುವುದು. ಒಂದು ವೇಳೆ ಆಯ್ಕೆದಾರರು, ರವಿ ಹಾಗೂ ವಿರಾಟ್, ಕೆಲವು ಆಟಗಾರರನ್ನು ಪರೀಕ್ಷಿಸಲು ಬಯಸಿದ್ದಲ್ಲಿಅದಕ್ಕೆ ಅವಕಾಶ ಕಲ್ಪಿಸಲಾಗುವುದು. ಏಕೆಂದರೆ ಇದು ವಿಶ್ವಕಪ್ಗೂ ಮೊದಲು ನಮ್ಮ ಮುಂದಿರುವ ಏಕೈಕ ಸರಣಿಯಾಗಿದೆ' ಎಂದಿದ್ದಾರೆ.</p>.<p>ಆದರೂ ಆಡುವ ಬಳಗದಲ್ಲಿ ಯಾವೆಲ್ಲ ಆಟಗಾರರು ಕಾಣಿಸಿಕೊಳ್ಳಲಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿಲ್ಲ. ಧವನ್ ಮುಂದಾಳತ್ವದ ಭಾರತ ತಂಡದಲ್ಲಿ ಆರು ಮಂದಿ ಆಟಗಾರರು ಇನ್ನಷ್ಟೇ ಪದಾರ್ಪಣೆ ಮಾಡಬೇಕಿದೆ.</p>.<p>ಹಾಗಿದ್ದರೂ ಸರಣಿ ಗೆಲುವೇ ತಂಡದ ಪ್ರಮುಖ ಗುರಿ ಎಂಬುದನ್ನು ಧವನ್ ಸ್ಪಷ್ಟಪಡಿಸಿದರು. ಇದಕ್ಕಾಗಿ ಪ್ರಯೋಗದ ಹೆಸರಲ್ಲಿ ಯಾವ ರಾಜಿಗೂ ಸಿದ್ಧವಿಲ್ಲ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>