ಬೆಳಿಗ್ಗೆ 9.30ಕ್ಕೆ ಶುರುವಾಗಬೇಕಿದ್ದ ಪಂದ್ಯವು ಕ್ರೀಡಾಂಗಣದಲ್ಲಿ ತೇವಾಂಶ ಹೆಚ್ಚಿದ್ದ ಕಾರಣ ಬೆಳಿಗ್ಗೆ 10.30ಕ್ಕೆ ಆರಂಭಗೊಂಡಿತು.
ಕರ್ನಾಟಕದ ಆಟಗಾರ ಪ್ರಸಿದ್ಧ ಕೃಷ್ಣ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿರುವ ಮಹಾರಾಷ್ಟ್ರದ ಆಟಗಾರ ಶಾರ್ದೂಲ್ ಠಾಕೂರ್, ಅಂತಿಮ 11ರ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಗುರುವಾರ ಆರಂಭವಾಗಿದ್ದ ಪಂದ್ಯದ ಮೊದಲ ದಿನದಾಟವು ಕ್ರೀಡಾಂಗಣದ ತೇವ ಆರದ ಕಾರಣ ರದ್ದುಗೊಳಿಸಲಾಗಿತ್ತು.