<p><strong>ನವದೆಹಲಿ:</strong> ಮುಂದಿನ ತಿಂಗಳು ಜಿಂಬಾಬ್ವೆ ವಿರುದ್ಧ ನಡೆಯಲಿರುವ ಮೂರು ಏಕದಿನ ಪಂದ್ಯಗಳ ಕ್ರಿಕೆಟ್ ಸರಣಿಗೆ ಬಿಸಿಸಿಐ ಶನಿವಾರ ತಂಡ ಪ್ರಕಟಿಸಿದೆ. ಶಿಖರ್ ಧವನ್ಗೆ ನಾಯಕತ್ವವನ್ನು ವಹಿಸಲಾಗಿದೆ.</p>.<p>ಹಲವು ಕಾರಣಗಳಿಂದಾಗಿ ಈ ಸರಣಿಯಿಂದ ಕೆ.ಎಲ್ ರಾಹುಲ್ ಅವರನ್ನು ಕೈಬಿಡಲಾಗಿದೆ. ಈ ಬೆಳವಣಿಗೆಯು ಟಿ20 ವಿಶ್ವಕಪ್ನಲ್ಲಿ ಆಡುವ ಅವರ ಅವಕಾಶಗಳಿಗೆ ಅಪಾಯವನ್ನುಂಟುಮಾಡುವ ಸಾಧ್ಯತೆಗಳಿವೆ ಎಂದು ವಿಶ್ಲೇಷಿಸಲಾಗುತ್ತಿದೆ.</p>.<p>ಮತ್ತೊಂದುಕಡೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬೂಮ್ರಾ, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ ಮತ್ತು ಇತರ ಅಗ್ರ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.</p>.<p>ಆಗಸ್ಟ್ 18, 20 ಮತ್ತು 22 ರಂದು ಜಿಂಬಾಬ್ವೆಯಲ್ಲಿ ಭಾರತ 3 ಏಕದಿನ ಪಂದ್ಯಗಳನ್ನು ಆಡಲಿದೆ. ಹರಾರೆಯಲ್ಲಿ ಮೊದಲ ಪಂದ್ಯ ನಡೆಯಲಿದೆ.</p>.<p><strong>ತಂಡ: </strong>ಶಿಖರ್ ಧವನ್ (ನಾಯಕ), ಋತುರಾಜ್ ಗಾಯಕವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್-ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್ ಪಟೇಲ್, ಅವೆಶ್ ಖಾನ್, ಪ್ರಸಿದ್ಧ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್.</p>.<p><strong>ಇದನ್ನೂ ಓದಿ:</strong><a href="https://www.prajavani.net/sports/cricket/rahul-issues-clarification-for-fans-after-not-being-included-in-india-squad-959129.html" target="_blank">ಜಿಂಬಾಬ್ವೆ ಸರಣಿಗೆ ಆಯ್ಕೆಯಾಗದಿರುವುದಕ್ಕೆ ಸ್ಪಷ್ಟನೆ ನೀಡಿದ ಕೆ.ಎಲ್ ರಾಹುಲ್</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮುಂದಿನ ತಿಂಗಳು ಜಿಂಬಾಬ್ವೆ ವಿರುದ್ಧ ನಡೆಯಲಿರುವ ಮೂರು ಏಕದಿನ ಪಂದ್ಯಗಳ ಕ್ರಿಕೆಟ್ ಸರಣಿಗೆ ಬಿಸಿಸಿಐ ಶನಿವಾರ ತಂಡ ಪ್ರಕಟಿಸಿದೆ. ಶಿಖರ್ ಧವನ್ಗೆ ನಾಯಕತ್ವವನ್ನು ವಹಿಸಲಾಗಿದೆ.</p>.<p>ಹಲವು ಕಾರಣಗಳಿಂದಾಗಿ ಈ ಸರಣಿಯಿಂದ ಕೆ.ಎಲ್ ರಾಹುಲ್ ಅವರನ್ನು ಕೈಬಿಡಲಾಗಿದೆ. ಈ ಬೆಳವಣಿಗೆಯು ಟಿ20 ವಿಶ್ವಕಪ್ನಲ್ಲಿ ಆಡುವ ಅವರ ಅವಕಾಶಗಳಿಗೆ ಅಪಾಯವನ್ನುಂಟುಮಾಡುವ ಸಾಧ್ಯತೆಗಳಿವೆ ಎಂದು ವಿಶ್ಲೇಷಿಸಲಾಗುತ್ತಿದೆ.</p>.<p>ಮತ್ತೊಂದುಕಡೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬೂಮ್ರಾ, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ ಮತ್ತು ಇತರ ಅಗ್ರ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.</p>.<p>ಆಗಸ್ಟ್ 18, 20 ಮತ್ತು 22 ರಂದು ಜಿಂಬಾಬ್ವೆಯಲ್ಲಿ ಭಾರತ 3 ಏಕದಿನ ಪಂದ್ಯಗಳನ್ನು ಆಡಲಿದೆ. ಹರಾರೆಯಲ್ಲಿ ಮೊದಲ ಪಂದ್ಯ ನಡೆಯಲಿದೆ.</p>.<p><strong>ತಂಡ: </strong>ಶಿಖರ್ ಧವನ್ (ನಾಯಕ), ಋತುರಾಜ್ ಗಾಯಕವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್-ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್ ಪಟೇಲ್, ಅವೆಶ್ ಖಾನ್, ಪ್ರಸಿದ್ಧ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್.</p>.<p><strong>ಇದನ್ನೂ ಓದಿ:</strong><a href="https://www.prajavani.net/sports/cricket/rahul-issues-clarification-for-fans-after-not-being-included-in-india-squad-959129.html" target="_blank">ಜಿಂಬಾಬ್ವೆ ಸರಣಿಗೆ ಆಯ್ಕೆಯಾಗದಿರುವುದಕ್ಕೆ ಸ್ಪಷ್ಟನೆ ನೀಡಿದ ಕೆ.ಎಲ್ ರಾಹುಲ್</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>