<p><strong>ನವದೆಹಲಿ</strong>: ಬಾಂಗ್ಲಾದೇಶದಲ್ಲಿ ಚುಟುಕು ಮತ್ತು ಏಕದಿನ ಕ್ರಿಕೆಟ್ ಸರಣಿಗಾಗಿ ಈ ವರ್ಷದ ಆಗಸ್ಟ್ನಲ್ಲಿ ನಿಗದಿಯಾಗಿದ್ದ ಭಾರತ ತಂಡದ ಪ್ರವಾಸ 2026ರ ಸೆಪ್ಟೆಂಬರ್ಗೆ ಮುಂದೂಡಿಕೆಯಾಗಿದೆ.</p>.<p>ಈ ಸಂಬಂಧ, ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾಗೂ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ(ಬಿಸಿಬಿ) ಶನಿವಾರ ಒಪ್ಪಂದ ಮಾಡಿಕೊಂಡಿವೆ. ಭಾರತ ತಂಡವು ಆಗಸ್ಟ್ 17ರಿಂದ 31ರ ವರೆಗಿನ ಪ್ರವಾಸದಲ್ಲಿ ತಲಾ ಮೂರು ಟಿ20 ಹಾಗೂ ಏಕದಿನ ಪಂದ್ಯಗಳನ್ನು ಆಡಬೇಕಾಗಿತ್ತು.</p>.<p>ಈಗಾಗಲೇ ನಿಗದಿಯಾಗಿರುವ ಅಂತರರಾಷ್ಟ್ರೀಯ ಸರಣಿಗಳ ವೇಳಾಪಟ್ಟಿಯನ್ನು ಅವಲೋಕಿಸಿ, ಎರಡೂ ತಂಡಗಳಿಗೆ ಅನುಕೂಲವಾಗುವಂತೆ ಸರಣಿಯನ್ನು 2026ರ ಸೆಪ್ಟೆಂಬರ್ನಲ್ಲಿ ಮರುನಿಗದಿ ಮಾಡಲಾಗಿದೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಪರಿಷ್ಕೃತ ವೇಳಾಪಟ್ಟಿಯನ್ನು ಶೀಘ್ರವೇ ಪ್ರಕಟ ಮಾಡಲಾಗುವುದು ಎಂದು ಬಿಸಿಬಿ ತಿಳಿಸಿದೆ.</p>.<p>ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಪದಚ್ಯುತಿಯ ನಂತರ ಅಲ್ಲಿ ತಲೆದೋರಿದ್ದ ಆಂತರಿಕ ಸಂಘರ್ಷ ಇನ್ನೂ ಶಮನ ಆಗದಿರುವ ಬಗ್ಗೆ ಬಿಸಿಸಿಐ ಕಳವಳ ವ್ಯಕ್ತಪಡಿಸಿದೆ. ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆದು, ಸ್ಥಿರ ಸರ್ಕಾರ ರಚನೆಯಾಗುವವರೆಗೆ ಪ್ರವಾಸ ಕೈಗೊಳ್ಳದಿರಲು ನಿರ್ಧರಿಸಿದೆ ಎಂಬುದಾಗಿ ವರದಿಯಾಗಿತ್ತು.</p>.<p>ಬಾಂಗ್ಲಾದಲ್ಲಿ ಮುಂದಿನ ವರ್ಷದ ಆರಂಭದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಾಂಗ್ಲಾದೇಶದಲ್ಲಿ ಚುಟುಕು ಮತ್ತು ಏಕದಿನ ಕ್ರಿಕೆಟ್ ಸರಣಿಗಾಗಿ ಈ ವರ್ಷದ ಆಗಸ್ಟ್ನಲ್ಲಿ ನಿಗದಿಯಾಗಿದ್ದ ಭಾರತ ತಂಡದ ಪ್ರವಾಸ 2026ರ ಸೆಪ್ಟೆಂಬರ್ಗೆ ಮುಂದೂಡಿಕೆಯಾಗಿದೆ.</p>.<p>ಈ ಸಂಬಂಧ, ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾಗೂ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ(ಬಿಸಿಬಿ) ಶನಿವಾರ ಒಪ್ಪಂದ ಮಾಡಿಕೊಂಡಿವೆ. ಭಾರತ ತಂಡವು ಆಗಸ್ಟ್ 17ರಿಂದ 31ರ ವರೆಗಿನ ಪ್ರವಾಸದಲ್ಲಿ ತಲಾ ಮೂರು ಟಿ20 ಹಾಗೂ ಏಕದಿನ ಪಂದ್ಯಗಳನ್ನು ಆಡಬೇಕಾಗಿತ್ತು.</p>.<p>ಈಗಾಗಲೇ ನಿಗದಿಯಾಗಿರುವ ಅಂತರರಾಷ್ಟ್ರೀಯ ಸರಣಿಗಳ ವೇಳಾಪಟ್ಟಿಯನ್ನು ಅವಲೋಕಿಸಿ, ಎರಡೂ ತಂಡಗಳಿಗೆ ಅನುಕೂಲವಾಗುವಂತೆ ಸರಣಿಯನ್ನು 2026ರ ಸೆಪ್ಟೆಂಬರ್ನಲ್ಲಿ ಮರುನಿಗದಿ ಮಾಡಲಾಗಿದೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಪರಿಷ್ಕೃತ ವೇಳಾಪಟ್ಟಿಯನ್ನು ಶೀಘ್ರವೇ ಪ್ರಕಟ ಮಾಡಲಾಗುವುದು ಎಂದು ಬಿಸಿಬಿ ತಿಳಿಸಿದೆ.</p>.<p>ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಪದಚ್ಯುತಿಯ ನಂತರ ಅಲ್ಲಿ ತಲೆದೋರಿದ್ದ ಆಂತರಿಕ ಸಂಘರ್ಷ ಇನ್ನೂ ಶಮನ ಆಗದಿರುವ ಬಗ್ಗೆ ಬಿಸಿಸಿಐ ಕಳವಳ ವ್ಯಕ್ತಪಡಿಸಿದೆ. ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆದು, ಸ್ಥಿರ ಸರ್ಕಾರ ರಚನೆಯಾಗುವವರೆಗೆ ಪ್ರವಾಸ ಕೈಗೊಳ್ಳದಿರಲು ನಿರ್ಧರಿಸಿದೆ ಎಂಬುದಾಗಿ ವರದಿಯಾಗಿತ್ತು.</p>.<p>ಬಾಂಗ್ಲಾದಲ್ಲಿ ಮುಂದಿನ ವರ್ಷದ ಆರಂಭದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>