<p><strong>ಕಾರ್ಡಿಫ್: </strong>ನ್ಯೂಜಿಲೆಂಡ್ ಎದುರಿನ ಮೊದಲ ಹೋರಾಟದಲ್ಲೇ ಮುಗ್ಗರಿಸಿರುವ ಭಾರತ ತಂಡ ಈಗ ಮತ್ತೊಂದು ಪೈಪೋಟಿಗೆ ಸಜ್ಜಾಗಿದೆ.</p>.<p>ವಿಶ್ವಕಪ್ ಕ್ರಿಕೆಟ್ ಟೂರ್ನಿಯ ತನ್ನ ಎರಡನೇ ಅಭ್ಯಾಸ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬಳಗವು ಬಾಂಗ್ಲಾದೇಶದ ಸವಾಲು ಎದುರಿಸಲಿದೆ.</p>.<p>ಸೋಫಿಯಾ ಗಾರ್ಡನ್ಸ್ನಲ್ಲಿ ಮಂಗಳವಾರ ನಡೆಯುವ ಪಂದ್ಯದಲ್ಲಿ ‘ಬಾಂಗ್ಲಾ ಹುಲಿ’ಗಳ ಬೇಟೆಯಾಡಿ ವಿಶ್ವಾಸ ಮರಳಿ ಪಡೆಯಲು ಕೊಹ್ಲಿ ಪಡೆ ಕಾತರವಾಗಿದೆ.</p>.<p>ನ್ಯೂಜಿಲೆಂಡ್ ಎದುರಿನ ಪಂದ್ಯದಲ್ಲಿ ಭಾರತವು ಬ್ಯಾಟಿಂಗ್ನಲ್ಲಿ ವೈಫಲ್ಯ ಕಂಡಿತ್ತು. ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಒಂದಂಕಿ ಮೊತ್ತಕ್ಕೆ ಔಟಾಗಿದ್ದರು. ಕೆ.ಎಲ್.ರಾಹುಲ್ ಹಾಗೂ ದಿನೇಶ್ ಕಾರ್ತಿಕ್ ಕೂಡಾ ಬೇಗನೆ ವಿಕೆಟ್ ಒಪ್ಪಿಸಿದ್ದರು.</p>.<p>ನಾಯಕ ಕೊಹ್ಲಿ ಮತ್ತು ಅನುಭವಿ ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ ಅವರೂ ಕಿವೀಸ್ ದಾಳಿಗೆ ತತ್ತರಿಸಿದ್ದರು. ಹೀಗಾಗಿ ಭಾರತವು 91ರನ್ಗಳಿಗೆ ಏಳು ವಿಕೆಟ್ ಕಳೆದುಕೊಂಡಿತ್ತು.</p>.<p>ಆಲ್ರೌಂಡರ್ಗಳಾದ ಹಾರ್ದಿಕ್ ಪಾಂಡ್ಯ (30) ಮತ್ತು ರವೀಂದ್ರ ಜಡೇಜ (54) ಕೆಚ್ಚೆದೆಯಿಂದ ಹೋರಾಡಿದ್ದರಿಂದ ತಂಡದ ಮೊತ್ತವು ಶತಕದ ಗಡಿ ದಾಟಿತ್ತು.</p>.<p>ಜೂನ್ 5ರಂದು ಭಾರತ ತಂಡವು ಬಲಿಷ್ಠ ದಕ್ಷಿಣ ಆಫ್ರಿಕಾ ಎದುರು ಸೆಣಸಲಿದೆ. ಈ ಹೋರಾಟಕ್ಕೂ ಮುನ್ನ ಲಯ ಕಂಡುಕೊಳ್ಳಲು ವಿರಾಟ್ ಬಳಗದ ಬ್ಯಾಟ್ಸ್ಮನ್ಗಳಿಗೆ ಬಾಂಗ್ಲಾ ಎದುರಿನ ಪಂದ್ಯ ವೇದಿಕೆಯಾಗಿದೆ. ಈ ಅವಕಾಶವನ್ನು ಆಟಗಾರರು ಹೇಗೆ ಬಳಸಿಕೊಳ್ಳುತ್ತಾರೆ ಎಂಬುದು ಸದ್ಯದ ಕುತೂಹಲ.</p>.<p>ಜಸ್ಪ್ರೀತ್ ಬೂಮ್ರಾ, ವೇಗದ ಬೌಲಿಂಗ್ ವಿಭಾಗದ ಶಕ್ತಿಯಾಗಿದ್ದಾರೆ. ನ್ಯೂಜಿಲೆಂಡ್ ಎದುರು ನಾಲ್ಕು ಓವರ್ ಬೌಲ್ ಮಾಡಿದ್ದ ಅವರು ಕೇವಲ ಎರಡು ರನ್ ನೀಡಿ ಒಂದು ವಿಕೆಟ್ ಉರುಳಿಸಿದ್ದರು. ಹೀಗಾಗಿ ಅವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.</p>.<p>ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ ಮತ್ತು ಹಾರ್ದಿಕ್ ಪಾಂಡ್ಯ ಅವರಿಂದ ಬೂಮ್ರಾಗೆ ಸೂಕ್ತ ಬೆಂಬಲ ಸಿಗಬೇಕಿದೆ.</p>.<p>ಸ್ಪಿನ್ನರ್ಗಳಾದ ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್ ಮತ್ತು ರವೀಂದ್ರ ಜಡೇಜ ಕೂಡಾ ಕೈಚಳಕ ತೋರಬೇಕಿದೆ.</p>.<p>ಮಷ್ರಫೆ ಮೊರ್ತಜಾ ಸಾರಥ್ಯದ ಬಾಂಗ್ಲಾ ಕೂಡಾ ಗೆಲುವಿನ ತವಕದಲ್ಲಿದೆ. ಈ ತಂಡ ಪಾಕಿಸ್ತಾನ ಎದುರು ಮೊದಲ ಅಭ್ಯಾಸ ಪಂದ್ಯ ಆಡಬೇಕಿತ್ತು. ಭಾನುವಾರದ ಈ ಹೋರಾಟ ಮಳೆಯಿಂದಾಗಿ ರದ್ದಾಗಿತ್ತು.</p>.<p>ಶಕೀಬ್ ಅಲ್ ಹಸನ್, ಮುಷ್ಫಿಕರ್ ರಹೀಮ್, ಮಹಮದುಲ್ಲಾ, ಮೊಹಮ್ಮದ್ ಮಿಥುನ್ ಮತ್ತು ಲಿಟನ್ ದಾಸ್ ಈ ತಂಡದ ಆಧಾರಸ್ಥಂಭಗಳಾಗಿದ್ದಾರೆ.</p>.<p>ಅಬು ಜಾಯೆದ್ ಮತ್ತು ತಮೀಮ್ ಇಕ್ಬಾಲ್ ಕೂಡಾ ಭಾರತದ ಬೌಲರ್ಗಳನ್ನು ಕಾಡಬಲ್ಲರು.</p>.<p>ಮುಷ್ತಾಫಿಜುರ್ ರೆಹಮಾನ್, ಸೌಮ್ಯ ಸರ್ಕಾರ್, ರುಬೆಲ್ ಹೊಸೇನ್ ಅವರ ಬೌಲಿಂಗ್ ಬಲವೂ ಈ ತಂಡಕ್ಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಡಿಫ್: </strong>ನ್ಯೂಜಿಲೆಂಡ್ ಎದುರಿನ ಮೊದಲ ಹೋರಾಟದಲ್ಲೇ ಮುಗ್ಗರಿಸಿರುವ ಭಾರತ ತಂಡ ಈಗ ಮತ್ತೊಂದು ಪೈಪೋಟಿಗೆ ಸಜ್ಜಾಗಿದೆ.</p>.<p>ವಿಶ್ವಕಪ್ ಕ್ರಿಕೆಟ್ ಟೂರ್ನಿಯ ತನ್ನ ಎರಡನೇ ಅಭ್ಯಾಸ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬಳಗವು ಬಾಂಗ್ಲಾದೇಶದ ಸವಾಲು ಎದುರಿಸಲಿದೆ.</p>.<p>ಸೋಫಿಯಾ ಗಾರ್ಡನ್ಸ್ನಲ್ಲಿ ಮಂಗಳವಾರ ನಡೆಯುವ ಪಂದ್ಯದಲ್ಲಿ ‘ಬಾಂಗ್ಲಾ ಹುಲಿ’ಗಳ ಬೇಟೆಯಾಡಿ ವಿಶ್ವಾಸ ಮರಳಿ ಪಡೆಯಲು ಕೊಹ್ಲಿ ಪಡೆ ಕಾತರವಾಗಿದೆ.</p>.<p>ನ್ಯೂಜಿಲೆಂಡ್ ಎದುರಿನ ಪಂದ್ಯದಲ್ಲಿ ಭಾರತವು ಬ್ಯಾಟಿಂಗ್ನಲ್ಲಿ ವೈಫಲ್ಯ ಕಂಡಿತ್ತು. ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಒಂದಂಕಿ ಮೊತ್ತಕ್ಕೆ ಔಟಾಗಿದ್ದರು. ಕೆ.ಎಲ್.ರಾಹುಲ್ ಹಾಗೂ ದಿನೇಶ್ ಕಾರ್ತಿಕ್ ಕೂಡಾ ಬೇಗನೆ ವಿಕೆಟ್ ಒಪ್ಪಿಸಿದ್ದರು.</p>.<p>ನಾಯಕ ಕೊಹ್ಲಿ ಮತ್ತು ಅನುಭವಿ ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ ಅವರೂ ಕಿವೀಸ್ ದಾಳಿಗೆ ತತ್ತರಿಸಿದ್ದರು. ಹೀಗಾಗಿ ಭಾರತವು 91ರನ್ಗಳಿಗೆ ಏಳು ವಿಕೆಟ್ ಕಳೆದುಕೊಂಡಿತ್ತು.</p>.<p>ಆಲ್ರೌಂಡರ್ಗಳಾದ ಹಾರ್ದಿಕ್ ಪಾಂಡ್ಯ (30) ಮತ್ತು ರವೀಂದ್ರ ಜಡೇಜ (54) ಕೆಚ್ಚೆದೆಯಿಂದ ಹೋರಾಡಿದ್ದರಿಂದ ತಂಡದ ಮೊತ್ತವು ಶತಕದ ಗಡಿ ದಾಟಿತ್ತು.</p>.<p>ಜೂನ್ 5ರಂದು ಭಾರತ ತಂಡವು ಬಲಿಷ್ಠ ದಕ್ಷಿಣ ಆಫ್ರಿಕಾ ಎದುರು ಸೆಣಸಲಿದೆ. ಈ ಹೋರಾಟಕ್ಕೂ ಮುನ್ನ ಲಯ ಕಂಡುಕೊಳ್ಳಲು ವಿರಾಟ್ ಬಳಗದ ಬ್ಯಾಟ್ಸ್ಮನ್ಗಳಿಗೆ ಬಾಂಗ್ಲಾ ಎದುರಿನ ಪಂದ್ಯ ವೇದಿಕೆಯಾಗಿದೆ. ಈ ಅವಕಾಶವನ್ನು ಆಟಗಾರರು ಹೇಗೆ ಬಳಸಿಕೊಳ್ಳುತ್ತಾರೆ ಎಂಬುದು ಸದ್ಯದ ಕುತೂಹಲ.</p>.<p>ಜಸ್ಪ್ರೀತ್ ಬೂಮ್ರಾ, ವೇಗದ ಬೌಲಿಂಗ್ ವಿಭಾಗದ ಶಕ್ತಿಯಾಗಿದ್ದಾರೆ. ನ್ಯೂಜಿಲೆಂಡ್ ಎದುರು ನಾಲ್ಕು ಓವರ್ ಬೌಲ್ ಮಾಡಿದ್ದ ಅವರು ಕೇವಲ ಎರಡು ರನ್ ನೀಡಿ ಒಂದು ವಿಕೆಟ್ ಉರುಳಿಸಿದ್ದರು. ಹೀಗಾಗಿ ಅವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.</p>.<p>ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ ಮತ್ತು ಹಾರ್ದಿಕ್ ಪಾಂಡ್ಯ ಅವರಿಂದ ಬೂಮ್ರಾಗೆ ಸೂಕ್ತ ಬೆಂಬಲ ಸಿಗಬೇಕಿದೆ.</p>.<p>ಸ್ಪಿನ್ನರ್ಗಳಾದ ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್ ಮತ್ತು ರವೀಂದ್ರ ಜಡೇಜ ಕೂಡಾ ಕೈಚಳಕ ತೋರಬೇಕಿದೆ.</p>.<p>ಮಷ್ರಫೆ ಮೊರ್ತಜಾ ಸಾರಥ್ಯದ ಬಾಂಗ್ಲಾ ಕೂಡಾ ಗೆಲುವಿನ ತವಕದಲ್ಲಿದೆ. ಈ ತಂಡ ಪಾಕಿಸ್ತಾನ ಎದುರು ಮೊದಲ ಅಭ್ಯಾಸ ಪಂದ್ಯ ಆಡಬೇಕಿತ್ತು. ಭಾನುವಾರದ ಈ ಹೋರಾಟ ಮಳೆಯಿಂದಾಗಿ ರದ್ದಾಗಿತ್ತು.</p>.<p>ಶಕೀಬ್ ಅಲ್ ಹಸನ್, ಮುಷ್ಫಿಕರ್ ರಹೀಮ್, ಮಹಮದುಲ್ಲಾ, ಮೊಹಮ್ಮದ್ ಮಿಥುನ್ ಮತ್ತು ಲಿಟನ್ ದಾಸ್ ಈ ತಂಡದ ಆಧಾರಸ್ಥಂಭಗಳಾಗಿದ್ದಾರೆ.</p>.<p>ಅಬು ಜಾಯೆದ್ ಮತ್ತು ತಮೀಮ್ ಇಕ್ಬಾಲ್ ಕೂಡಾ ಭಾರತದ ಬೌಲರ್ಗಳನ್ನು ಕಾಡಬಲ್ಲರು.</p>.<p>ಮುಷ್ತಾಫಿಜುರ್ ರೆಹಮಾನ್, ಸೌಮ್ಯ ಸರ್ಕಾರ್, ರುಬೆಲ್ ಹೊಸೇನ್ ಅವರ ಬೌಲಿಂಗ್ ಬಲವೂ ಈ ತಂಡಕ್ಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>