<p><strong>ನವದೆಹಲಿ:</strong> ಭಾರತ ಮತ್ತು ಬಾಂಗ್ಲಾದೇಶ ನಡುವಣ ಹಳಸಿರುವ ಸಂಬಂಧ ಕ್ರಿಕೆಟ್ ಮೈದಾನದಲ್ಲೂ ಪ್ರತಿಧ್ವನಿಸಿತು. ಶನಿವಾರ ನಡೆದ 19 ವರ್ಷದೊಳಗಿನವರ ಏಕದಿನ ವಿಶ್ವಕಪ್ ‘ಎ’ ಗುಂಪಿನ ಪಂದ್ಯದಲ್ಲಿ ಉಭಯ ತಂಡಗಳ ನಾಯಕರು ಹಸ್ತಲಾಘವಕ್ಕೆ ಮುಂದಾಗಲಿಲ್ಲ.</p>.<p>ಮಳೆಯಿಂದ ತಡವಾದ ಟಾಸ್ಗೆ ಭಾರತ ತಂಡದ ನಾಯಕ ಆಯುಷ್ ಮ್ಹಾತ್ರೆ ಮತ್ತು ಬಾಂಗ್ಲಾದೇಶ ತಂಡದ ನಾಯಕ ಝವಾದ್ ಅಬ್ರಾರ್ ಹಾಜರಿದ್ದರು. ಆದರೆ ಟಾಸ್ಗೆ ಮೊದಲಾಗಲಿ, ನಂತರವಾಗಲಿ ಆತ್ಮೀಯತೆ ಕಾಣಲಿಲ್ಲ.</p>.<p>ಮುಸ್ತಫಿಝುರ್ ರೆಹಮಾನ್ ಅವರನ್ನು ಕೋಲ್ಕತ್ತ ನೈಟ್ ರೈಡರ್ಸ್, ಐಪಿಎಲ್ ತಂಡದಿಂದ ಕೈಬಿಟ್ಟ ಬಳಿಕ ಕ್ರಿಕೆಟ್ ಬಾಂಧವ್ಯವೂ ಹದಗೆಡುತ್ತಿದೆ. ಬಾಂಗ್ಲಾದೇಶ, ಭಾರತದಲ್ಲಿ ನಿಗದಿಯಾಗಿರುವ ತನ್ನ ಟಿ20 ವಿಶ್ವಕಪ್ ಪಂದ್ಯಗಳನ್ನು ಸ್ಥಳಾಂತರಿಸುವಂತೆ ಐಸಿಸಿಗೆ ಒತ್ತಾಯಿಸಿದೆ.</p>.<p>2025ರಲ್ಲಿ ಏಷ್ಯಾ ಕಪ್ ವೇಳೆ, ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಣ ಪಂದ್ಯಗಳ ವೇಳೆಯೂ ಭಾರತದ ಆಟಗಾರರು ಹಸ್ತಲಾಘವಕ್ಕೆ ನಿರಾಕರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತ ಮತ್ತು ಬಾಂಗ್ಲಾದೇಶ ನಡುವಣ ಹಳಸಿರುವ ಸಂಬಂಧ ಕ್ರಿಕೆಟ್ ಮೈದಾನದಲ್ಲೂ ಪ್ರತಿಧ್ವನಿಸಿತು. ಶನಿವಾರ ನಡೆದ 19 ವರ್ಷದೊಳಗಿನವರ ಏಕದಿನ ವಿಶ್ವಕಪ್ ‘ಎ’ ಗುಂಪಿನ ಪಂದ್ಯದಲ್ಲಿ ಉಭಯ ತಂಡಗಳ ನಾಯಕರು ಹಸ್ತಲಾಘವಕ್ಕೆ ಮುಂದಾಗಲಿಲ್ಲ.</p>.<p>ಮಳೆಯಿಂದ ತಡವಾದ ಟಾಸ್ಗೆ ಭಾರತ ತಂಡದ ನಾಯಕ ಆಯುಷ್ ಮ್ಹಾತ್ರೆ ಮತ್ತು ಬಾಂಗ್ಲಾದೇಶ ತಂಡದ ನಾಯಕ ಝವಾದ್ ಅಬ್ರಾರ್ ಹಾಜರಿದ್ದರು. ಆದರೆ ಟಾಸ್ಗೆ ಮೊದಲಾಗಲಿ, ನಂತರವಾಗಲಿ ಆತ್ಮೀಯತೆ ಕಾಣಲಿಲ್ಲ.</p>.<p>ಮುಸ್ತಫಿಝುರ್ ರೆಹಮಾನ್ ಅವರನ್ನು ಕೋಲ್ಕತ್ತ ನೈಟ್ ರೈಡರ್ಸ್, ಐಪಿಎಲ್ ತಂಡದಿಂದ ಕೈಬಿಟ್ಟ ಬಳಿಕ ಕ್ರಿಕೆಟ್ ಬಾಂಧವ್ಯವೂ ಹದಗೆಡುತ್ತಿದೆ. ಬಾಂಗ್ಲಾದೇಶ, ಭಾರತದಲ್ಲಿ ನಿಗದಿಯಾಗಿರುವ ತನ್ನ ಟಿ20 ವಿಶ್ವಕಪ್ ಪಂದ್ಯಗಳನ್ನು ಸ್ಥಳಾಂತರಿಸುವಂತೆ ಐಸಿಸಿಗೆ ಒತ್ತಾಯಿಸಿದೆ.</p>.<p>2025ರಲ್ಲಿ ಏಷ್ಯಾ ಕಪ್ ವೇಳೆ, ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಣ ಪಂದ್ಯಗಳ ವೇಳೆಯೂ ಭಾರತದ ಆಟಗಾರರು ಹಸ್ತಲಾಘವಕ್ಕೆ ನಿರಾಕರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>