<p><strong>ಬರ್ಮಿಂಗ್ಹ್ಯಾಮ್:</strong> ವಿಶ್ವ ಲೆಜೆಂಡ್ಸ್ ಚಾಂಪಿಯನ್ಷಿಪ್ (ಡಬ್ಲ್ಯುಸಿಎಲ್) ಸೆಮಿಫೈನಲ್ನಲ್ಲಿ ಪಾಕಿಸ್ತಾನ ಚಾಂಪಿಯನ್ಸ್ ವಿರುದ್ಧ ಆಡಲು ಇಂಡಿಯಾ ಚಾಂಪಿಯನ್ಸ್ ಆಟಗಾರರು ನಿರಾಕರಿಸಿದ್ದಾರೆ. ಇದರೊಂದಿಗೆ ಟೂರ್ನಿಯಲ್ಲಿ ಅನಿಶ್ಚಿತತೆ ಮುಂದುವರಿದಿದೆ. </p><p>ಡಬ್ಲ್ಯುಸಿಎಲ್ ಟೂರ್ನಿಯ ಲೀಗ್ ಹಂತದಲ್ಲೂ ಪಾಕಿಸ್ತಾನ ವಿರುದ್ದ ಆಡಲು ಇಂಡಿಯಾ ಚಾಂಪಿಯನ್ಸ್ ತಂಡದ ಆಟಗಾರರು ನಿರಾಕರಿಸಿದ್ದರಿಂದ ಪಂದ್ಯ ರದ್ದುಗೊಂಡಿತ್ತು. </p><p>ಈಗ ಭಾರತೀಯರ ಭಾವನೆಗಳಿಗೆ ಸ್ಪಂದಿಸಿ ಸೆಮಿಫೈನಲ್ನಲ್ಲೂ ಆಡಲು ಆಟಗಾರರು ಹಿಂದೇಟು ಹಾಕಿದ್ದಾರೆ. </p><p>ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದಲ್ಲಿ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಭಾರತ 'ಆಪರೇಷನ್ ಸಿಂಧೂರ' ಕಾರ್ಯಾಚರಣೆ ನಡೆಸಿತ್ತು. ಇದರ ಬೆನ್ನಲ್ಲೇ ಉಭಯ ದೇಶಗಳ ನಡುವೆ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿತ್ತಲ್ಲದೆ ಯುದ್ಧದ ವಾತಾವರಣ ನಿರ್ಮಾಣವಾಗಿತ್ತು. </p><p>ಎಜ್ಬಾಸ್ಟನ್ನಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಣ ಸೆಮಿಫೈನಲ್ ಪಂದ್ಯ ಗುರುವಾರ ನಿಗದಿಯಾಗಿತ್ತು. ಪಾಕಿಸ್ತಾನ ವಿರುದ್ಧ ಆಡುವುದಿಲ್ಲವೆಂದು ಶಿಖರ್ ಧವನ್, ಇರ್ಫಾನ್ ಪಠಾಣ್, ಹರಭಜನ್ ಸಿಂಗ್, ಯುವರಾಜ್ ಸಿಂಗ್ ಮತ್ತು ಸುರೇಶ್ ರೈನಾ ಸೇರಿದಂತೆ ಭಾರತೀಯ ಆಟಗಾರರು ಈಗಾಗಲೇ ಪ್ರಕಟಿಸಿದ್ದಾರೆ. </p><p>ಏತನ್ಮಧ್ಯೆ ಟೂರ್ನಿಗೆ ಮುಖ್ಯ ಪ್ರಾಯೋಜಕರಾದ 'ಈಸ್ಮೈಟ್ರಿಪ್' ಕೂಡ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯಕ್ಕೆ ಪ್ರಾಯೋಜಕತ್ವವನ್ನು ವಹಿಸುವುದಿಲ್ಲ ಎಂದು ಹೇಳಿದೆ. </p><p>ಈ ಕುರಿತು ಈಸ್ಮೈಟ್ರಿಪ್ನ ಸಹ ಸ್ಥಾಪಕರಾದ ನಿಶಾಂತ್ ಪಿಟ್ಟಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, 'ಕ್ರಿಕೆಟ್ ಹಾಗೂ ಭಯೋತ್ಪಾದನೆ ಒಂದಾಗಿ ಸಾಗಲು ಸಾಧ್ಯವಿಲ್ಲ. ನಾವು ಭಾರತೀಯರೊಂದಿಗೆ ನಿಲ್ಲುತ್ತೇವೆ. ಕೆಲವು ವಿಷಯಗಳು ಕ್ರೀಡೆಗಿಂತಲೂ ಮಿಗಿಲಾಗಿವೆ. ವ್ಯಾಪಾರಕ್ಕಿಂತ ದೇಶ ಮೊದಲು' ಎಂದು ಹೇಳಿದ್ದಾರೆ. </p>.IND vs ENG: ಗಾಯಾಳು ಬೆನ್ ಸ್ಟೋಕ್ಸ್ ಹೊರಕ್ಕೆ; ಆಂಗ್ಲರಿಗೆ ಹೊಸ ನಾಯಕ.IND vs ENG | ಗೆಲ್ಲಲೇಬೇಕಾದ ಪಂದ್ಯದಲ್ಲಿ ನಂ.1 ವೇಗಿ ಬೂಮ್ರಾ ಆಡುವುದು ಅನುಮಾನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬರ್ಮಿಂಗ್ಹ್ಯಾಮ್:</strong> ವಿಶ್ವ ಲೆಜೆಂಡ್ಸ್ ಚಾಂಪಿಯನ್ಷಿಪ್ (ಡಬ್ಲ್ಯುಸಿಎಲ್) ಸೆಮಿಫೈನಲ್ನಲ್ಲಿ ಪಾಕಿಸ್ತಾನ ಚಾಂಪಿಯನ್ಸ್ ವಿರುದ್ಧ ಆಡಲು ಇಂಡಿಯಾ ಚಾಂಪಿಯನ್ಸ್ ಆಟಗಾರರು ನಿರಾಕರಿಸಿದ್ದಾರೆ. ಇದರೊಂದಿಗೆ ಟೂರ್ನಿಯಲ್ಲಿ ಅನಿಶ್ಚಿತತೆ ಮುಂದುವರಿದಿದೆ. </p><p>ಡಬ್ಲ್ಯುಸಿಎಲ್ ಟೂರ್ನಿಯ ಲೀಗ್ ಹಂತದಲ್ಲೂ ಪಾಕಿಸ್ತಾನ ವಿರುದ್ದ ಆಡಲು ಇಂಡಿಯಾ ಚಾಂಪಿಯನ್ಸ್ ತಂಡದ ಆಟಗಾರರು ನಿರಾಕರಿಸಿದ್ದರಿಂದ ಪಂದ್ಯ ರದ್ದುಗೊಂಡಿತ್ತು. </p><p>ಈಗ ಭಾರತೀಯರ ಭಾವನೆಗಳಿಗೆ ಸ್ಪಂದಿಸಿ ಸೆಮಿಫೈನಲ್ನಲ್ಲೂ ಆಡಲು ಆಟಗಾರರು ಹಿಂದೇಟು ಹಾಕಿದ್ದಾರೆ. </p><p>ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದಲ್ಲಿ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಭಾರತ 'ಆಪರೇಷನ್ ಸಿಂಧೂರ' ಕಾರ್ಯಾಚರಣೆ ನಡೆಸಿತ್ತು. ಇದರ ಬೆನ್ನಲ್ಲೇ ಉಭಯ ದೇಶಗಳ ನಡುವೆ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿತ್ತಲ್ಲದೆ ಯುದ್ಧದ ವಾತಾವರಣ ನಿರ್ಮಾಣವಾಗಿತ್ತು. </p><p>ಎಜ್ಬಾಸ್ಟನ್ನಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಣ ಸೆಮಿಫೈನಲ್ ಪಂದ್ಯ ಗುರುವಾರ ನಿಗದಿಯಾಗಿತ್ತು. ಪಾಕಿಸ್ತಾನ ವಿರುದ್ಧ ಆಡುವುದಿಲ್ಲವೆಂದು ಶಿಖರ್ ಧವನ್, ಇರ್ಫಾನ್ ಪಠಾಣ್, ಹರಭಜನ್ ಸಿಂಗ್, ಯುವರಾಜ್ ಸಿಂಗ್ ಮತ್ತು ಸುರೇಶ್ ರೈನಾ ಸೇರಿದಂತೆ ಭಾರತೀಯ ಆಟಗಾರರು ಈಗಾಗಲೇ ಪ್ರಕಟಿಸಿದ್ದಾರೆ. </p><p>ಏತನ್ಮಧ್ಯೆ ಟೂರ್ನಿಗೆ ಮುಖ್ಯ ಪ್ರಾಯೋಜಕರಾದ 'ಈಸ್ಮೈಟ್ರಿಪ್' ಕೂಡ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯಕ್ಕೆ ಪ್ರಾಯೋಜಕತ್ವವನ್ನು ವಹಿಸುವುದಿಲ್ಲ ಎಂದು ಹೇಳಿದೆ. </p><p>ಈ ಕುರಿತು ಈಸ್ಮೈಟ್ರಿಪ್ನ ಸಹ ಸ್ಥಾಪಕರಾದ ನಿಶಾಂತ್ ಪಿಟ್ಟಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, 'ಕ್ರಿಕೆಟ್ ಹಾಗೂ ಭಯೋತ್ಪಾದನೆ ಒಂದಾಗಿ ಸಾಗಲು ಸಾಧ್ಯವಿಲ್ಲ. ನಾವು ಭಾರತೀಯರೊಂದಿಗೆ ನಿಲ್ಲುತ್ತೇವೆ. ಕೆಲವು ವಿಷಯಗಳು ಕ್ರೀಡೆಗಿಂತಲೂ ಮಿಗಿಲಾಗಿವೆ. ವ್ಯಾಪಾರಕ್ಕಿಂತ ದೇಶ ಮೊದಲು' ಎಂದು ಹೇಳಿದ್ದಾರೆ. </p>.IND vs ENG: ಗಾಯಾಳು ಬೆನ್ ಸ್ಟೋಕ್ಸ್ ಹೊರಕ್ಕೆ; ಆಂಗ್ಲರಿಗೆ ಹೊಸ ನಾಯಕ.IND vs ENG | ಗೆಲ್ಲಲೇಬೇಕಾದ ಪಂದ್ಯದಲ್ಲಿ ನಂ.1 ವೇಗಿ ಬೂಮ್ರಾ ಆಡುವುದು ಅನುಮಾನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>