<p><strong>ಕೇಪ್ ಟೌನ್: </strong>ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಸೋಲು ‘ನಮ್ಮ ಕಣ್ತೆರೆಸಿದೆ’ ಎಂದು ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದಾರೆ. ಆದರೆ, ಮುಂದಿನ ವರ್ಷ ನಡೆಯಲಿರುವ ಏಕದಿನ ವಿಶ್ವಕಪ್ಗೆ ಮೊದಲು ನಮ್ಮ ತಂಡವು ಸುಧಾರಿಸುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>ಕೇಪ್ ಟೌನ್ನಲ್ಲಿ ನಡೆದ ಮೂರನೇ ಏಕದಿನ ಅಂತರರಾಷ್ಟ್ರೀಯ ಪಂದ್ಯದ ಬಳಿಕ ಮಾತನಾಡಿದ ಅವರು, ‘ಕಳೆದ ವಿಶ್ವಕಪ್ ಬಳಿಕ ನಾವು ಹೆಚ್ಚು ಏಕದಿನ ಕ್ರಿಕೆಟ್ ಆಡಿಲ್ಲ’ಎಂದು ಹೇಳಿದರು.</p>.<p>ಆದರೆ ಮುಂದಿನ ದಿನಗಳಲ್ಲಿ ಭಾರತ ಸಾಕಷ್ಟು ವೈಟ್ ಬಾಲ್ ಕ್ರಿಕೆಟ್ ಆಡಲು ಸಜ್ಜಾಗಿದೆ ಎಂದು ದ್ರಾವಿಡ್ ಹೇಳಿದ್ದಾರೆ.</p>.<p>‘ವಿಶ್ವಕಪ್ಗೆ ಮೊದಲು ನಮಗೆ ಸಾಕಷ್ಟು ಸಮಯವಿದೆ. ಇದು ಕಲಿಯುವಿಕೆಗೆ ಉತ್ತಮ ಸಮಯ ಎಂದು ನಾನು ಭಾವಿಸುತ್ತೇನೆ. ನಾವು ಉತ್ತಮಗೊಳ್ಳುತ್ತೇವೆ ಮತ್ತು ಸುಧಾರಿಸುತ್ತೇವೆ’ ಎಂದು ಹೇಳಿದ್ದಾರೆ.</p>.<p>ಇತ್ತೀಚೆಗೆ ನೇಮಕಗೊಂಡ ನಾಯಕ ರೋಹಿತ್ ಶರ್ಮಾ ಮತ್ತು ಕೆಲ ಆಲ್ರೌಂಡರ್ಗಳು ಸೇರಿದಂತೆ ಹಲವು ಪ್ರಮುಖ ಆಟಗಾರರು ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಲಭ್ಯವಿಲ್ಲ ಎಂಬುದನ್ನು ದ್ರಾವಿಡ್ ಒತ್ತಿ ಹೇಳಿದರು.</p>.<p>ಇದೇವೇಳೆ, ಏಳನೇ ಕ್ರಮಾಂಕದಲ್ಲಿ 54 ರನ್ ಸಿಡಿಸಿ ಉತ್ತಮ ಬ್ಯಾಟಿಂಗ್ ಮಾಡಿದ ದೀಪಕ್ ಚಾಹರ್ ಅವರನ್ನು ಶ್ಲಾಘಿಸಿದರು.</p>.<p>ಗಾಯದ ಕಾರಣ ರೋಹಿತ್ ಶರ್ಮಾ ಹಿಂದೆ ಸರಿದ ನಂತರ ನಾಯಕತ್ವ ವಹಿಸಿಕೊಂಡ ಕೆಎಲ್ ರಾಹುಲ್ ಅವರ ನಿರ್ವಹಣೆಯನ್ನು ದ್ರಾವಿಡ್ ಶ್ಲಾಘಿಸಿದರು.</p>.<p>‘ಅವರು(ಕೆ.ಎಲ್. ರಾಹುಲ್) ಉತ್ತಮವಾಗಿ ತಂಡವನ್ನು ನಿರ್ವಹಿಸಿದ್ದಾರೆ ಎಂದು ನಾನು ಭಾವಿಸಿದ್ದೇನೆ’ಎಂದು ದ್ರಾವಿಡ್ ಹೇಳಿದರು. ‘ಸೋಲುತ್ತಿದ್ದ ತಂಡವನ್ನು ಮುನ್ನಡೆಸುವುದು ಸುಲಭವಲ್ಲ. ಅವರು ನಾಯಕನಾಗಿ ತಮ್ಮ ಪ್ರಯಾಣವನ್ನು ಪ್ರಾರಂಭಿಸುತ್ತಿದ್ದಾರೆ’ ಎಂದು ಹೇಳಿದರು.</p>.<p>‘ನಾಯಕತ್ವದ ಬಹುಪಾಲು ಭಾಗವು ನಿಮ್ಮ ಆಟಗಾರರ ಕೌಶಲ್ಯ ಮತ್ತು ಗುಣಮಟ್ಟವನ್ನು ಕಾರ್ಯಗತಗೊಳಿಸುವುದು. ಏಕದಿನ ತಂಡವಾಗಿ ನಾವು ಸ್ವಲ್ಪ ಹಿನ್ನಡೆ ಅನುಭವಿಸಿದ್ದೇವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೇಪ್ ಟೌನ್: </strong>ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಸೋಲು ‘ನಮ್ಮ ಕಣ್ತೆರೆಸಿದೆ’ ಎಂದು ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದಾರೆ. ಆದರೆ, ಮುಂದಿನ ವರ್ಷ ನಡೆಯಲಿರುವ ಏಕದಿನ ವಿಶ್ವಕಪ್ಗೆ ಮೊದಲು ನಮ್ಮ ತಂಡವು ಸುಧಾರಿಸುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>ಕೇಪ್ ಟೌನ್ನಲ್ಲಿ ನಡೆದ ಮೂರನೇ ಏಕದಿನ ಅಂತರರಾಷ್ಟ್ರೀಯ ಪಂದ್ಯದ ಬಳಿಕ ಮಾತನಾಡಿದ ಅವರು, ‘ಕಳೆದ ವಿಶ್ವಕಪ್ ಬಳಿಕ ನಾವು ಹೆಚ್ಚು ಏಕದಿನ ಕ್ರಿಕೆಟ್ ಆಡಿಲ್ಲ’ಎಂದು ಹೇಳಿದರು.</p>.<p>ಆದರೆ ಮುಂದಿನ ದಿನಗಳಲ್ಲಿ ಭಾರತ ಸಾಕಷ್ಟು ವೈಟ್ ಬಾಲ್ ಕ್ರಿಕೆಟ್ ಆಡಲು ಸಜ್ಜಾಗಿದೆ ಎಂದು ದ್ರಾವಿಡ್ ಹೇಳಿದ್ದಾರೆ.</p>.<p>‘ವಿಶ್ವಕಪ್ಗೆ ಮೊದಲು ನಮಗೆ ಸಾಕಷ್ಟು ಸಮಯವಿದೆ. ಇದು ಕಲಿಯುವಿಕೆಗೆ ಉತ್ತಮ ಸಮಯ ಎಂದು ನಾನು ಭಾವಿಸುತ್ತೇನೆ. ನಾವು ಉತ್ತಮಗೊಳ್ಳುತ್ತೇವೆ ಮತ್ತು ಸುಧಾರಿಸುತ್ತೇವೆ’ ಎಂದು ಹೇಳಿದ್ದಾರೆ.</p>.<p>ಇತ್ತೀಚೆಗೆ ನೇಮಕಗೊಂಡ ನಾಯಕ ರೋಹಿತ್ ಶರ್ಮಾ ಮತ್ತು ಕೆಲ ಆಲ್ರೌಂಡರ್ಗಳು ಸೇರಿದಂತೆ ಹಲವು ಪ್ರಮುಖ ಆಟಗಾರರು ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಲಭ್ಯವಿಲ್ಲ ಎಂಬುದನ್ನು ದ್ರಾವಿಡ್ ಒತ್ತಿ ಹೇಳಿದರು.</p>.<p>ಇದೇವೇಳೆ, ಏಳನೇ ಕ್ರಮಾಂಕದಲ್ಲಿ 54 ರನ್ ಸಿಡಿಸಿ ಉತ್ತಮ ಬ್ಯಾಟಿಂಗ್ ಮಾಡಿದ ದೀಪಕ್ ಚಾಹರ್ ಅವರನ್ನು ಶ್ಲಾಘಿಸಿದರು.</p>.<p>ಗಾಯದ ಕಾರಣ ರೋಹಿತ್ ಶರ್ಮಾ ಹಿಂದೆ ಸರಿದ ನಂತರ ನಾಯಕತ್ವ ವಹಿಸಿಕೊಂಡ ಕೆಎಲ್ ರಾಹುಲ್ ಅವರ ನಿರ್ವಹಣೆಯನ್ನು ದ್ರಾವಿಡ್ ಶ್ಲಾಘಿಸಿದರು.</p>.<p>‘ಅವರು(ಕೆ.ಎಲ್. ರಾಹುಲ್) ಉತ್ತಮವಾಗಿ ತಂಡವನ್ನು ನಿರ್ವಹಿಸಿದ್ದಾರೆ ಎಂದು ನಾನು ಭಾವಿಸಿದ್ದೇನೆ’ಎಂದು ದ್ರಾವಿಡ್ ಹೇಳಿದರು. ‘ಸೋಲುತ್ತಿದ್ದ ತಂಡವನ್ನು ಮುನ್ನಡೆಸುವುದು ಸುಲಭವಲ್ಲ. ಅವರು ನಾಯಕನಾಗಿ ತಮ್ಮ ಪ್ರಯಾಣವನ್ನು ಪ್ರಾರಂಭಿಸುತ್ತಿದ್ದಾರೆ’ ಎಂದು ಹೇಳಿದರು.</p>.<p>‘ನಾಯಕತ್ವದ ಬಹುಪಾಲು ಭಾಗವು ನಿಮ್ಮ ಆಟಗಾರರ ಕೌಶಲ್ಯ ಮತ್ತು ಗುಣಮಟ್ಟವನ್ನು ಕಾರ್ಯಗತಗೊಳಿಸುವುದು. ಏಕದಿನ ತಂಡವಾಗಿ ನಾವು ಸ್ವಲ್ಪ ಹಿನ್ನಡೆ ಅನುಭವಿಸಿದ್ದೇವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>