ಆಸ್ಟ್ರೇಲಿಯಾದಲ್ಲಿ ನಡೆದ ಟೆಸ್ಟ್ ಸರಣಿಯ ಸಂದರ್ಭದಲ್ಲಿ ಪ್ರಮುಖ ಬೌಲರ್ಗಳೆಲ್ಲ ಗಾಯಗೊಂಡು ಕಣಕ್ಕೆ ಇಳಿಯಲಾಗದ ಪರಿಸ್ಥಿತಿಯಲ್ಲಿ ಭಾರತ ತಂಡ ಯುವ ಬೌಲರ್ಗಳ ಮೇಲೆ ಭರವಸೆ ಇರಿಸಿ ಆಡಿಸಿತ್ತು. ಭುವನೇಶ್ವರ್ ಕುಮಾರ್ ಮತ್ತು ಇಶಾಂತ್ ಶರ್ಮಾ ಸರಣಿಗೆ ಮೊದಲೇ ಗಾಯಗೊಂಡಿದ್ದರು. ಸರಣಿಯ ನಡುವೆ ಮೊಹಮ್ಮದ್ ಶಮಿ, ಉಮೇಶ್ ಯಾದವ್ ಮತ್ತು ಜಸ್ಪ್ರೀತ್ ಬೂಮ್ರಾ ಅವರೂ ಗಾಯಗೊಂಡರು. ನೆಟ್ನಲ್ಲಿ ಬೌಲಿಂಗ್ ಮಾಡಲು ತೆರಳಿದ್ದ ವಾಷಿಂಗ್ಟನ್ ಸುಂದರ್ ಮತ್ತು ತಂಗರಸು ನಟರಾಜನ್ ಬ್ರಿಸ್ಬೇನ್ ಟೆಸ್ಟ್ನಲ್ಲಿ ಪದಾರ್ಪಣೆ ಮಾಡಿದ್ದರು.