<p>ನವದೆಹಲಿ: ಭಾರತದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಿಕೊಂಡಿರುವ ಐಪಿಎಲ್ ಫ್ರಾಂಚೈಸಿ ರಾಜಸ್ಥಾನ್ ರಾಯಲ್ಸ್, ₹7.5 ಕೋಟಿ ದೇಣಿಗೆಯನ್ನು ಘೋಷಿಸಿದೆ.</p>.<p>ದೇಶದಲ್ಲಿ ಕೋವಿಡ್-19 ಎರಡನೇ ಅಲೆ ಕ್ಷಿಪ್ರ ಗತಿಯಲ್ಲಿ ವ್ಯಾಪಿಸಿದ್ದು, ವೈದ್ಯಕೀಯ ತುರ್ತು ಪರಿಸ್ಥಿತಿ ಸೃಷ್ಟಿಯಾಗಿದೆ. ರೋಗಿಗಳಿಗೆ ಆಮ್ಲಜನಕದ ಪೂರೈಕೆ ಸೇರಿದಂತೆ ಚಿಕಿತ್ಸೆಯ ಮೂಲಸೌಕರ್ಯದ ಕೊರತೆ ಎದುರಾಗಿದೆ.</p>.<p>ಕೋವಿಡ್-19ನಿಂದ ಬಳಲುತ್ತಿರುವವರಿಗೆ ತಕ್ಷಣದ ನೆರವಿನ ಭಾಗವಾಗಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ತನ್ನ ಮಾಲೀಕರು, ಆಟಗಾರರು ಹಾಗೂ ಮ್ಯಾನೇಜ್ಮೆಂಟ್ನಿಂದ ₹7.5 ಕೋಟಿ ಬಿಡುಗಡೆ ಮಾಡುವುದಾಗಿ ಘೋಷಿಸುತ್ತೇವೆ. ಇದನ್ನು ರಾಜಸ್ಥಾನ್ ರಾಯಲ್ಸ್ ಫೌಂಡೇಷನ್ ಹಾಗೂ ಬ್ರಿಟಿಷ್ ಏಷ್ಯನ್ ಟ್ರಸ್ಟ್ ಮೂಖಾಂತರ ಜಾರಿಗೊಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.</p>.<p>ಬ್ರಿಟಿಷ್ ಏಷ್ಯನ್ ಟ್ರಸ್ಟ್ ಭಾರತದಲ್ಲಿ ಕೌಶಲ್ಯ ಹಾಗೂ ಶಿಕ್ಷಣ ಕ್ಷೇತ್ರ ಸೇರಿದಂತೆ ಅನೇಕ ಉಪಕ್ರಮಗಳಲ್ಲಿ ಭಾರತೀಯ ಸರ್ಕಾರದೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ.</p>.<p>ಟ್ರಸ್ಟ್ನ ಸಂಸ್ಥಾಪಕ ಪ್ರಿನ್ಸ್ ಚಾರ್ಲ್ಸ್, ಭಾರತಕ್ಕಾಗಿ ತುರ್ತು ಆಮ್ಲಜನಕ ಪೂರೈಸುವ ಮನವಿ ಮಾಡಿದ್ದರು. ಇದರಂತೆ ಭಾರತಕ್ಕೆ ಆಕ್ಸಿಜನ್ ಪೂರೈಸಲು ಅಭಿಯಾನ ಪ್ರಾರಂಭಿಸಿದೆ.</p>.<p>ರಾಜಸ್ಥಾನ್ ರಾಯಲ್ಸ್ ನೀಡುವ ದೇಣಿಗೆ ಹಣವು ದೇಶೆದೆಲ್ಲೆಡೆ ನೆರವಾಗಲಿದೆ. ಆದರೂ ರಾಜಸ್ಥಾನದ ಮೇಲೆ ಹೆಚ್ಚಿನ ಗಮನ ಕೇಂದ್ರಿಕರಿಸಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಭಾರತದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಿಕೊಂಡಿರುವ ಐಪಿಎಲ್ ಫ್ರಾಂಚೈಸಿ ರಾಜಸ್ಥಾನ್ ರಾಯಲ್ಸ್, ₹7.5 ಕೋಟಿ ದೇಣಿಗೆಯನ್ನು ಘೋಷಿಸಿದೆ.</p>.<p>ದೇಶದಲ್ಲಿ ಕೋವಿಡ್-19 ಎರಡನೇ ಅಲೆ ಕ್ಷಿಪ್ರ ಗತಿಯಲ್ಲಿ ವ್ಯಾಪಿಸಿದ್ದು, ವೈದ್ಯಕೀಯ ತುರ್ತು ಪರಿಸ್ಥಿತಿ ಸೃಷ್ಟಿಯಾಗಿದೆ. ರೋಗಿಗಳಿಗೆ ಆಮ್ಲಜನಕದ ಪೂರೈಕೆ ಸೇರಿದಂತೆ ಚಿಕಿತ್ಸೆಯ ಮೂಲಸೌಕರ್ಯದ ಕೊರತೆ ಎದುರಾಗಿದೆ.</p>.<p>ಕೋವಿಡ್-19ನಿಂದ ಬಳಲುತ್ತಿರುವವರಿಗೆ ತಕ್ಷಣದ ನೆರವಿನ ಭಾಗವಾಗಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ತನ್ನ ಮಾಲೀಕರು, ಆಟಗಾರರು ಹಾಗೂ ಮ್ಯಾನೇಜ್ಮೆಂಟ್ನಿಂದ ₹7.5 ಕೋಟಿ ಬಿಡುಗಡೆ ಮಾಡುವುದಾಗಿ ಘೋಷಿಸುತ್ತೇವೆ. ಇದನ್ನು ರಾಜಸ್ಥಾನ್ ರಾಯಲ್ಸ್ ಫೌಂಡೇಷನ್ ಹಾಗೂ ಬ್ರಿಟಿಷ್ ಏಷ್ಯನ್ ಟ್ರಸ್ಟ್ ಮೂಖಾಂತರ ಜಾರಿಗೊಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.</p>.<p>ಬ್ರಿಟಿಷ್ ಏಷ್ಯನ್ ಟ್ರಸ್ಟ್ ಭಾರತದಲ್ಲಿ ಕೌಶಲ್ಯ ಹಾಗೂ ಶಿಕ್ಷಣ ಕ್ಷೇತ್ರ ಸೇರಿದಂತೆ ಅನೇಕ ಉಪಕ್ರಮಗಳಲ್ಲಿ ಭಾರತೀಯ ಸರ್ಕಾರದೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ.</p>.<p>ಟ್ರಸ್ಟ್ನ ಸಂಸ್ಥಾಪಕ ಪ್ರಿನ್ಸ್ ಚಾರ್ಲ್ಸ್, ಭಾರತಕ್ಕಾಗಿ ತುರ್ತು ಆಮ್ಲಜನಕ ಪೂರೈಸುವ ಮನವಿ ಮಾಡಿದ್ದರು. ಇದರಂತೆ ಭಾರತಕ್ಕೆ ಆಕ್ಸಿಜನ್ ಪೂರೈಸಲು ಅಭಿಯಾನ ಪ್ರಾರಂಭಿಸಿದೆ.</p>.<p>ರಾಜಸ್ಥಾನ್ ರಾಯಲ್ಸ್ ನೀಡುವ ದೇಣಿಗೆ ಹಣವು ದೇಶೆದೆಲ್ಲೆಡೆ ನೆರವಾಗಲಿದೆ. ಆದರೂ ರಾಜಸ್ಥಾನದ ಮೇಲೆ ಹೆಚ್ಚಿನ ಗಮನ ಕೇಂದ್ರಿಕರಿಸಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>