<p><strong>ನವದೆಹಲಿ:</strong> ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ನಾಯಕ ಶುಭಮನ್ ಗಿಲ್ ಅವರ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯಲಿದೆ. ಆದರೆ, ನಾಯಕನ ಸ್ಥಾನ ತುಂಬುವ ಸಾಮರ್ಥ್ಯವು ಆ ತಂಡದಲ್ಲಿರುವ ಇತರ ಆಟಗಾರರಲ್ಲಿದೆ ಎಂದು ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಜಾಂಟಿ ರೋಡ್ಸ್ ಹೇಳಿದ್ದಾರೆ.</p><p>ದಕ್ಷಿಣ ಆಫ್ರಿಕಾ ವಿರುದ್ದದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯವು ಶನಿವಾರ ಗುವಾಹಟಿಯಲ್ಲಿ ಆರಂಭಗೊಳ್ಳಲಿದೆ. ಅದಕ್ಕೂ ಮುನ್ನವೇ ಮೊದಲ ಪಂದ್ಯದಲ್ಲಿ ಗಾಯಗೊಂಡಿದ್ದ ನಾಯಕ ಶುಭಮನ್ ಗಿಲ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ರಿಷಭ್ ಪಂತ್ ಅವರು ತಂಡವನ್ನು ಮುನ್ನಡೆಸಲಿದ್ದಾರೆ. </p><p>ಭಾರತದ ಮೀಸಲು ಆಟಗಾರರ ಸಾಮರ್ಥ್ಯ ಉತ್ತಮವಾಗಿದೆ. ತಂಡದಲ್ಲಿ ಒಳ್ಳೆಯ ಆಟಗಾರರಿದ್ದಾರೆ. ಯಾರೂ ತಂಡದಲ್ಲಿರಬೇಕು ಮತ್ತು ಪಂದ್ಯದಿಂದ ಯಾರೂ ಹೊರಗಿರಬೇಕು ಎನ್ನುವುದನ್ನು ಆಯ್ಕೆ ಮಾಡುವುದೇ ಅವರಿಗೆ ಸಮಸ್ಯೆಯಾಗಿದೆ. ನಾಯಕನ ಸ್ಥಾನಕ್ಕೂ ಭಾರತ ತಂಡದಲ್ಲಿ ಉತ್ತಮ ಆಯ್ಕೆಗಳಿವೆ ಎಂದು ಜಾಂಟಿ ರೋಡ್ಸ್ ಹೇಳಿದ್ದಾರೆ.</p><p>ಭಾರತ ತಂಡವು ಧೋನಿ, ವಿರಾಟ್, ರೋಹಿತ್ ಸೇರಿದಂತೆ ಅನೇಕ ಪ್ರಮುಖ ಆಟಗಾರರನ್ನು ಕ್ರಿಕೆಟ್ಗೆ ನೀಡಿದೆ. ಹೊಸ ಪ್ರತಿಭೆಗಳು ಕೂಡ ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಿಂದ ಕಾಯುತ್ತಿದ್ದಾರೆ, ಸಿಕ್ಕ ಅವಕಾಶವನ್ನು ಅವರು ಸರಿಯಾಗಿ ಬಳಸಿಕೊಂಡರೆ ಮಾತ್ರ ತಂಡದಲ್ಲಿ ಮುಂದುವರೆಯಲು ಸಾಧ್ಯ ಎಂದು ತಿಳಿಸಿದ್ದಾರೆ. </p><p>ಇತ್ತೀಚೆಗೆ ಮಹಿಳಾ ಏಕದಿನ ವಿಶ್ವಕಪ್ ವಿಜೇತರಾದ ಭಾರತ ತಂಡಕ್ಕೆ ಅಭಿನಂದನೆ ಸಲ್ಲಿಸಿದ ಜಾಂಟಿ ರೋಡ್ಸ್, ಭಾರತದಲ್ಲಿ ಮಹಿಳಾ ಕ್ರಿಕೆಟ್ ಕೂಡ ಜನಪ್ರಿಯವಾಗುತ್ತಿದೆ. ಪುರುಷರ ತಂಡಕ್ಕೆ ಸಿಕ್ಕ ಬೆಂಬಲವು ಮಹಿಳೆಯರಿಗೂ ಸಿಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ನಾಯಕ ಶುಭಮನ್ ಗಿಲ್ ಅವರ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯಲಿದೆ. ಆದರೆ, ನಾಯಕನ ಸ್ಥಾನ ತುಂಬುವ ಸಾಮರ್ಥ್ಯವು ಆ ತಂಡದಲ್ಲಿರುವ ಇತರ ಆಟಗಾರರಲ್ಲಿದೆ ಎಂದು ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಜಾಂಟಿ ರೋಡ್ಸ್ ಹೇಳಿದ್ದಾರೆ.</p><p>ದಕ್ಷಿಣ ಆಫ್ರಿಕಾ ವಿರುದ್ದದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯವು ಶನಿವಾರ ಗುವಾಹಟಿಯಲ್ಲಿ ಆರಂಭಗೊಳ್ಳಲಿದೆ. ಅದಕ್ಕೂ ಮುನ್ನವೇ ಮೊದಲ ಪಂದ್ಯದಲ್ಲಿ ಗಾಯಗೊಂಡಿದ್ದ ನಾಯಕ ಶುಭಮನ್ ಗಿಲ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ರಿಷಭ್ ಪಂತ್ ಅವರು ತಂಡವನ್ನು ಮುನ್ನಡೆಸಲಿದ್ದಾರೆ. </p><p>ಭಾರತದ ಮೀಸಲು ಆಟಗಾರರ ಸಾಮರ್ಥ್ಯ ಉತ್ತಮವಾಗಿದೆ. ತಂಡದಲ್ಲಿ ಒಳ್ಳೆಯ ಆಟಗಾರರಿದ್ದಾರೆ. ಯಾರೂ ತಂಡದಲ್ಲಿರಬೇಕು ಮತ್ತು ಪಂದ್ಯದಿಂದ ಯಾರೂ ಹೊರಗಿರಬೇಕು ಎನ್ನುವುದನ್ನು ಆಯ್ಕೆ ಮಾಡುವುದೇ ಅವರಿಗೆ ಸಮಸ್ಯೆಯಾಗಿದೆ. ನಾಯಕನ ಸ್ಥಾನಕ್ಕೂ ಭಾರತ ತಂಡದಲ್ಲಿ ಉತ್ತಮ ಆಯ್ಕೆಗಳಿವೆ ಎಂದು ಜಾಂಟಿ ರೋಡ್ಸ್ ಹೇಳಿದ್ದಾರೆ.</p><p>ಭಾರತ ತಂಡವು ಧೋನಿ, ವಿರಾಟ್, ರೋಹಿತ್ ಸೇರಿದಂತೆ ಅನೇಕ ಪ್ರಮುಖ ಆಟಗಾರರನ್ನು ಕ್ರಿಕೆಟ್ಗೆ ನೀಡಿದೆ. ಹೊಸ ಪ್ರತಿಭೆಗಳು ಕೂಡ ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಿಂದ ಕಾಯುತ್ತಿದ್ದಾರೆ, ಸಿಕ್ಕ ಅವಕಾಶವನ್ನು ಅವರು ಸರಿಯಾಗಿ ಬಳಸಿಕೊಂಡರೆ ಮಾತ್ರ ತಂಡದಲ್ಲಿ ಮುಂದುವರೆಯಲು ಸಾಧ್ಯ ಎಂದು ತಿಳಿಸಿದ್ದಾರೆ. </p><p>ಇತ್ತೀಚೆಗೆ ಮಹಿಳಾ ಏಕದಿನ ವಿಶ್ವಕಪ್ ವಿಜೇತರಾದ ಭಾರತ ತಂಡಕ್ಕೆ ಅಭಿನಂದನೆ ಸಲ್ಲಿಸಿದ ಜಾಂಟಿ ರೋಡ್ಸ್, ಭಾರತದಲ್ಲಿ ಮಹಿಳಾ ಕ್ರಿಕೆಟ್ ಕೂಡ ಜನಪ್ರಿಯವಾಗುತ್ತಿದೆ. ಪುರುಷರ ತಂಡಕ್ಕೆ ಸಿಕ್ಕ ಬೆಂಬಲವು ಮಹಿಳೆಯರಿಗೂ ಸಿಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>