ಪಲೇಕೆಲೆ: ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಿಂದ ಫಿಟ್ನೆಸ್ ಪ್ರಮಾಣಪತ್ರ ಪಡೆದಿರುವ ಕೆ.ಎಲ್. ರಾಹುಲ್ ಮುಂದಿನ ತಿಂಗಳು ನಡೆಯಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಆಡುವ ಭಾರತದ ಸಂಭಾವ್ಯ ತಂಡದಲ್ಲಿ ಸ್ಥಾನ ಪಡೆಯಲು ಸಿದ್ಧರಾಗಿದ್ದಾರೆ.
ಮಂಗಳವಾರ ಈ ಸಂಭಾವ್ಯ ತಂಡದ ಆಯ್ಕೆ ನಡೆಯಲಿದೆ. ಆದರೆ ಸಂಜು ಸ್ಯಾಮ್ಸನ್ ಮತ್ತು ಪ್ರಸಿದ್ಧ ಕೃಷ್ಣ ಅವರಿಗೆ ಈ ತಂಡದಲ್ಲಿ ಅವಕಾಶ ಸಿಗುವುದು ಖಚಿತವಿಲ್ಲ.
ಐಪಿಎಲ್ ಸಂದರ್ಭದಲ್ಲಿ ತೊಡೆಯ ಗಾಯದಿಂದ ಬಳಲಿದ್ದ ರಾಹುಲ್ ಶಸ್ತ್ರಚಿಕಿತ್ಸೆ ಪಡೆದಿದ್ದರು. ನಂತರ ಎನ್ಸಿಎನಲ್ಲಿ ಪುನಶ್ಚೇತನ ಶಿಬಿರದಲ್ಲಿದ್ದರು. ಏಷ್ಯಾ ಕಪ್ ಟೂರ್ನಿಯಲ್ಲಿ ಆಡುವ ತಂಡಕ್ಕೆ ಆಯ್ಕೆಯಾಗಿದ್ದರೂ, ಮೊದಲೆರಡು ಪಂದ್ಯಗಳಿಂದ ಅವರಿಗೆ ವಿಶ್ರಾಂತಿ ನೀಡಲಾಗಿದೆ.
ಸಂಭಾವ್ಯ ತಂಡ : ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್, ರವೀಂದ್ರ ಜಡೇಜ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಅಕ್ಷರ್ ಪಟೇಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.