ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟ್ವೆಂಟಿ–20 ವಿಶ್ವಕಪ್ ಟೂರ್ನಿಗೆ ಸಜ್ಜಾಗುತ್ತಿರುವ ಭಾರತ ಕಳೆದ ಪಂದ್ಯದಲ್ಲಿ ಪ್ರಯೋಗಗಳನ್ನು ಮಾಡಿತ್ತು. ಆದರೆ ಸಂಜು ಸ್ಯಾಮ್ಸನ್ ಮತ್ತು ಶಿವಂ ದುಬೆ, ಲಭಿಸಿದ ಅವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳುವಲ್ಲಿ ವಿಫಲರಾಗಿದ್ದರು. ಸಂಜು ಸ್ಯಾಮ್ಸನ್ ವೇಗದ ಬೌಲರ್ಗಳನ್ನು ಎದುರಿಸುವಲ್ಲಿ ಎಡವಿದ್ದರು. ದುಬೆ, ವೇಗಿಗಳು ಮತ್ತು ಸ್ಪಿನ್ನರ್ಗಳ ವಿರುದ್ಧ ಮಂಕಾಗಿದ್ದರು. ಸಂಜುಗೆ ಇನ್ನೊಂದು ಅವಕಾಶ ನೀಡಲು ತಂಡದ ಆಡಳಿತ ಮುಂದಾಗಲಿದೆ.