<p><strong>ಲಾಹೋರ್</strong>: ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ನಡುವೆ ಪಾಕಿಸ್ತಾನದ ಕ್ರಿಕೆಟ್ ಮಂಡಳಿಯು(ಪಿಸಿಬಿ) ಪಾಕಿಸ್ತಾನ ಸೂಪರ್ ಲೀಗ್ನ ಇನ್ನುಳಿದ ಪಂದ್ಯಗಳನ್ನು ಯುಎಇಗೆ ಶಿಫ್ಟ್ ಮಾಡುವ ನಿರ್ದಾರವನ್ನ ಶುಕ್ರವಾರ ಕೈಗೊಂಡಿದೆ.</p><p>ಲಾಹೋರ್ ಸೇರಿದಂತೆ ವಿವಿಧ ನಗರಗಳ ಮೇಲೆ ಭಾರತದ ಪ್ರತಿ ದಾಳಿ ಬೆನ್ನಲ್ಲೇ ವಿದೇಶಿ ಆಟಗಾರರು ಆತಂಕ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪಿಸಿಬಿ ಈ ನಿರ್ಧಾರ ಕೈಗೊಂಡಿದೆ.</p><p>ರಾವಲ್ಪಿಂಡಿ, ಲಾಹೋರ್ ಮತ್ತು ಮುಲ್ತಾನ್ನಲ್ಲಿ ನಡೆಯಬೇಕಿದ್ದ ಸರಣಿಯ ಉಳಿದ 8 ಪಂದ್ಯಗಳನ್ನು ಯುಎಇಗೆ ಶಿಫ್ಟ್ ಮಾಡಲಾಗಿದೆ ಎಂದು ಪಿಸಿಬಿ ತಿಳಿಸಿದೆ.</p><p>ಇತ್ತೀಚೆಗೆ ಪಾಕಿಸ್ತಾನದೊಳಗೆ ನಡೆದ ದಾಳಿಯಲ್ಲಿ ಭಾರತವು ಪಿಎಸ್ಎಲ್ ಅನ್ನು ಅಡ್ಡಿಪಡಿಸಲು ರಾವಲ್ಪಿಂಡಿ ಕ್ರಿಕೆಟ್ ಕ್ರೀಡಾಂಗಣವನ್ನು ಗುರಿಯಾಗಿಸಿಕೊಂಡಿತ್ತು ಎಂದು ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಆರೋಪಿಸಿದ್ದಾರೆ.</p><p>ದೇಶೀಯ ಮತ್ತು ವಿದೇಶಿ ಕ್ರಿಕೆಟಿಗರ ಕಳವಳಗಳನ್ನು ಸೂಕ್ತವಾಗಿ ಪರಿಹರಿಸಲು ಯುಎಇಗೆ ಪಂದ್ಯಗಳ ಸ್ಥಳಾಂತರ ಮಾಡಲಾಗಿದೆ ಎಂದು ಪಿಸಿಬಿ ಮುಖ್ಯಸ್ಥರು ಹೇಳಿದ್ದಾರೆ.</p><p>ಗುರುವಾರದಂದು ಪಿಸಿಬಿ, ರಾವಲ್ಪಿಂಡಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪೇಶಾವರ್ ಝಲ್ಮಿ ಮತ್ತು ಕರಾಚಿ ಕಿಂಗ್ಸ್ ನಡುವಿನ ನಿಗದಿತ ಪಂದ್ಯವನ್ನು ರದ್ದುಗೊಳಿಸಿತ್ತು.</p><p>ಭದ್ರತಾ ಕಾರಣಗಳಿಂದಾಗಿ ಇಂಗ್ಲೆಂಡ್ ಕ್ರಿಕೆಟ್ ಆಟಗಾರರು ಲೀಗ್ನಿಂದ ಹೊರಹೋಗುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ಬ್ರಿಟನ್ ಮಾಧ್ಯಮಗಳಲ್ಲಿನ ವರದಿಗಳು ತಿಳಿಸಿವೆ.</p> .ಪಾಕ್ನಿಂದ ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಮಾಹಿತಿ: ರಿಪೋರ್ಟ್ ಮಾಡಲು PIB ಮನವಿ.ಬೆಳಗಿನ ಜಾವ ಜಮ್ಮುವಿನಲ್ಲಿ ಸ್ಫೋಟದ ಸದ್ದು: ಭಯಭೀತರಾದ ನಿವಾಸಿಗಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಾಹೋರ್</strong>: ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ನಡುವೆ ಪಾಕಿಸ್ತಾನದ ಕ್ರಿಕೆಟ್ ಮಂಡಳಿಯು(ಪಿಸಿಬಿ) ಪಾಕಿಸ್ತಾನ ಸೂಪರ್ ಲೀಗ್ನ ಇನ್ನುಳಿದ ಪಂದ್ಯಗಳನ್ನು ಯುಎಇಗೆ ಶಿಫ್ಟ್ ಮಾಡುವ ನಿರ್ದಾರವನ್ನ ಶುಕ್ರವಾರ ಕೈಗೊಂಡಿದೆ.</p><p>ಲಾಹೋರ್ ಸೇರಿದಂತೆ ವಿವಿಧ ನಗರಗಳ ಮೇಲೆ ಭಾರತದ ಪ್ರತಿ ದಾಳಿ ಬೆನ್ನಲ್ಲೇ ವಿದೇಶಿ ಆಟಗಾರರು ಆತಂಕ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪಿಸಿಬಿ ಈ ನಿರ್ಧಾರ ಕೈಗೊಂಡಿದೆ.</p><p>ರಾವಲ್ಪಿಂಡಿ, ಲಾಹೋರ್ ಮತ್ತು ಮುಲ್ತಾನ್ನಲ್ಲಿ ನಡೆಯಬೇಕಿದ್ದ ಸರಣಿಯ ಉಳಿದ 8 ಪಂದ್ಯಗಳನ್ನು ಯುಎಇಗೆ ಶಿಫ್ಟ್ ಮಾಡಲಾಗಿದೆ ಎಂದು ಪಿಸಿಬಿ ತಿಳಿಸಿದೆ.</p><p>ಇತ್ತೀಚೆಗೆ ಪಾಕಿಸ್ತಾನದೊಳಗೆ ನಡೆದ ದಾಳಿಯಲ್ಲಿ ಭಾರತವು ಪಿಎಸ್ಎಲ್ ಅನ್ನು ಅಡ್ಡಿಪಡಿಸಲು ರಾವಲ್ಪಿಂಡಿ ಕ್ರಿಕೆಟ್ ಕ್ರೀಡಾಂಗಣವನ್ನು ಗುರಿಯಾಗಿಸಿಕೊಂಡಿತ್ತು ಎಂದು ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಆರೋಪಿಸಿದ್ದಾರೆ.</p><p>ದೇಶೀಯ ಮತ್ತು ವಿದೇಶಿ ಕ್ರಿಕೆಟಿಗರ ಕಳವಳಗಳನ್ನು ಸೂಕ್ತವಾಗಿ ಪರಿಹರಿಸಲು ಯುಎಇಗೆ ಪಂದ್ಯಗಳ ಸ್ಥಳಾಂತರ ಮಾಡಲಾಗಿದೆ ಎಂದು ಪಿಸಿಬಿ ಮುಖ್ಯಸ್ಥರು ಹೇಳಿದ್ದಾರೆ.</p><p>ಗುರುವಾರದಂದು ಪಿಸಿಬಿ, ರಾವಲ್ಪಿಂಡಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪೇಶಾವರ್ ಝಲ್ಮಿ ಮತ್ತು ಕರಾಚಿ ಕಿಂಗ್ಸ್ ನಡುವಿನ ನಿಗದಿತ ಪಂದ್ಯವನ್ನು ರದ್ದುಗೊಳಿಸಿತ್ತು.</p><p>ಭದ್ರತಾ ಕಾರಣಗಳಿಂದಾಗಿ ಇಂಗ್ಲೆಂಡ್ ಕ್ರಿಕೆಟ್ ಆಟಗಾರರು ಲೀಗ್ನಿಂದ ಹೊರಹೋಗುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ಬ್ರಿಟನ್ ಮಾಧ್ಯಮಗಳಲ್ಲಿನ ವರದಿಗಳು ತಿಳಿಸಿವೆ.</p> .ಪಾಕ್ನಿಂದ ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಮಾಹಿತಿ: ರಿಪೋರ್ಟ್ ಮಾಡಲು PIB ಮನವಿ.ಬೆಳಗಿನ ಜಾವ ಜಮ್ಮುವಿನಲ್ಲಿ ಸ್ಫೋಟದ ಸದ್ದು: ಭಯಭೀತರಾದ ನಿವಾಸಿಗಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>