<p><strong>ಗುವಾಹಟಿ:</strong> ತವರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಸಮಬಲಗೊಳಿಸಲು ಅಂತಿಮ ಪಂದ್ಯದಲ್ಲಿ ಭಾರತ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. </p><p>ಶನಿವಾರದಿಂದ (ನ.22) ಗುವಾಹಟಿಯ ಬರ್ಸಾಪರ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಎರಡನೇ ಪಂದ್ಯವು ಭಾರತದ ಪಾಲಿಗೆ ನಿರ್ಣಾಯಕವೆನಿಸಿದೆ. </p><p>ಕೋಲ್ಕತದ ಐತಿಹಾಸಿಕ ಈಡನ್ ಗಾರ್ಡನ್ ಮೈದಾನದಲ್ಲಿ ಅವಕಾಶ ಕೈಚೆಲ್ಲಿದ ಭಾರತ 30 ರನ್ಗಳ ಅಂತರದ ಹೀನಾಯ ಸೋಲಿಗೆ ಶರಣಾಗಿತ್ತು. ಕೊನೆಯ ಇನಿಂಗ್ಸ್ನಲ್ಲಿ 124 ರನ್ ಬೆನ್ನಟ್ಟುವಲ್ಲಿ ವಿಫಲವಾಗಿತ್ತು. </p><p>ನಾಯಕ ಶುಭಮನ್ ಗಿಲ್ ಅವರ ಗಾಯದ ಸಮಸ್ಯೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ. ಅಂತಿಮ ಪಂದ್ಯದಲ್ಲಿ ಗಿಲ್ ಆಡುವುದು ಅನುಮಾನವೆನಿಸಿದೆ.</p><p>ಇದರೊಂದಿಗೆ ವಿಕೆಟ್ ಕೀಪರ್, ಎಡಗೈ ಬ್ಯಾಟರ್ ರಿಷಭ್ ಪಂತ್ ಭಾರತ ತಂಡವನ್ನು ಮುನ್ನಡೆಸುವುದು ಖಚಿತವೆನಿಸಿದೆ. ಆ ಮೂಲಕ ಭಾರತ ಟೆಸ್ಟ್ ಕ್ರಿಕೆಟ್ ತಂಡದ 38ನೇ ನಾಯಕರೆನಿಸಲಿದ್ದಾರೆ. </p><p>ಇನ್ನು ಗಿಲ್ ಸ್ಥಾನಕ್ಕೆ ಸಾಯಿ ಸುದರ್ಶನ್ ಹಾಗೂ ಕರ್ನಾಟಕದ ದೇವದತ್ತ ಪಡಿಕ್ಕಲ್ ನಡುವೆ ಪೈಪೋಟಿ ಏರ್ಪಟ್ಟಿದೆ. ಈಗಾಗಲೇ ಮೂರನೇ ಕ್ರಮಾಂಕದಲ್ಲಿ ಆಡಿರುವುದರಿಂದ ಸುದರ್ಶನ್ ಅವರನ್ನೇ ಪರಿಗಣಿಸುವ ಸಾಧ್ಯತೆ ಹೆಚ್ಚಿದೆ. </p><p>ಇನ್ನೊಂದು ವೇಳೆ ಮೊದಲ ಟೆಸ್ಟ್ನಂತೆ ಅಂತಿಮ ಪಂದ್ಯದಲ್ಲೂ ವಾಷಿಂಗ್ಟನ್ ಸುಂದರ್ ಮೂರನೇ ಕ್ರಮಾಂಕದಲ್ಲಿ ಕ್ರೀಸಿಗಿಳಿದರೆ ಸುದರ್ಶನ್ ಆರನೇ ಕ್ರಮಾಂಕದಲ್ಲಿ ಆಡಬೇಕಾಗುತ್ತದೆ. </p><p>ಮೊದಲ ಪಂದ್ಯದಲ್ಲಿ ಭಾರತ ನಾಲ್ವರು ಸ್ಪಿನ್ನರ್ ಹಾಗೂ ಇಬ್ಬರು ವೇಗಿಗಳ ರಣತಂತ್ರದೊಂದಿಗೆ ಕಣಕ್ಕಿಳಿದಿತ್ತು. ಇದರಲ್ಲಿ ಮೂವರು ಆಲ್ರೌಂಡರ್ ಒಳಗೊಂಡಿದ್ದರು. </p><p>ಇನ್ನು ಪಿಚ್ನಲ್ಲಿ ವೇಗಿಗಳಿಗೆ ನೆರವು ಸಿಗುವುದಾದರೆ ಅಕ್ಷರ್ ಪಟೇಲ್ ಬದಲಿಗೆ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಆಯ್ಕೆಗೆ ಪರಿಗಣಿಸುವ ಸಾಧ್ಯತೆಯಿದೆ. </p><p>ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಹಿನ್ನೆಲೆಯಲ್ಲಿ ಪ್ರತಿಯೊಂದು ಪಂದ್ಯದ ಫಲಿತಾಂಶವೂ ಹೆಚ್ಚು ಮಹತ್ವದೆನಿಸುತ್ತದೆ. ಈ ನಿಟ್ಟಿನಲ್ಲಿ ಸರಣಿ ಸಮಬಲಗೊಳಿಸುವ ಒತ್ತಡ ಭಾರತದ ಮೇಲಿದೆ. </p>.Syed Mushtaq Ali Trophy: ಕರ್ನಾಟಕ ತಂಡದಲ್ಲಿ ದೇವದತ್ತ, ನಾಯರ್.Ind vs SA | ಗುವಾಹಟಿ ಟೆಸ್ಟ್ಗೆ ದ.ಆಫ್ರಿಕಾ ಸಜ್ಜು: ವೇಗಿ ರಬಾಡ ಆಡ್ತಾರಾ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong> ತವರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಸಮಬಲಗೊಳಿಸಲು ಅಂತಿಮ ಪಂದ್ಯದಲ್ಲಿ ಭಾರತ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. </p><p>ಶನಿವಾರದಿಂದ (ನ.22) ಗುವಾಹಟಿಯ ಬರ್ಸಾಪರ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಎರಡನೇ ಪಂದ್ಯವು ಭಾರತದ ಪಾಲಿಗೆ ನಿರ್ಣಾಯಕವೆನಿಸಿದೆ. </p><p>ಕೋಲ್ಕತದ ಐತಿಹಾಸಿಕ ಈಡನ್ ಗಾರ್ಡನ್ ಮೈದಾನದಲ್ಲಿ ಅವಕಾಶ ಕೈಚೆಲ್ಲಿದ ಭಾರತ 30 ರನ್ಗಳ ಅಂತರದ ಹೀನಾಯ ಸೋಲಿಗೆ ಶರಣಾಗಿತ್ತು. ಕೊನೆಯ ಇನಿಂಗ್ಸ್ನಲ್ಲಿ 124 ರನ್ ಬೆನ್ನಟ್ಟುವಲ್ಲಿ ವಿಫಲವಾಗಿತ್ತು. </p><p>ನಾಯಕ ಶುಭಮನ್ ಗಿಲ್ ಅವರ ಗಾಯದ ಸಮಸ್ಯೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ. ಅಂತಿಮ ಪಂದ್ಯದಲ್ಲಿ ಗಿಲ್ ಆಡುವುದು ಅನುಮಾನವೆನಿಸಿದೆ.</p><p>ಇದರೊಂದಿಗೆ ವಿಕೆಟ್ ಕೀಪರ್, ಎಡಗೈ ಬ್ಯಾಟರ್ ರಿಷಭ್ ಪಂತ್ ಭಾರತ ತಂಡವನ್ನು ಮುನ್ನಡೆಸುವುದು ಖಚಿತವೆನಿಸಿದೆ. ಆ ಮೂಲಕ ಭಾರತ ಟೆಸ್ಟ್ ಕ್ರಿಕೆಟ್ ತಂಡದ 38ನೇ ನಾಯಕರೆನಿಸಲಿದ್ದಾರೆ. </p><p>ಇನ್ನು ಗಿಲ್ ಸ್ಥಾನಕ್ಕೆ ಸಾಯಿ ಸುದರ್ಶನ್ ಹಾಗೂ ಕರ್ನಾಟಕದ ದೇವದತ್ತ ಪಡಿಕ್ಕಲ್ ನಡುವೆ ಪೈಪೋಟಿ ಏರ್ಪಟ್ಟಿದೆ. ಈಗಾಗಲೇ ಮೂರನೇ ಕ್ರಮಾಂಕದಲ್ಲಿ ಆಡಿರುವುದರಿಂದ ಸುದರ್ಶನ್ ಅವರನ್ನೇ ಪರಿಗಣಿಸುವ ಸಾಧ್ಯತೆ ಹೆಚ್ಚಿದೆ. </p><p>ಇನ್ನೊಂದು ವೇಳೆ ಮೊದಲ ಟೆಸ್ಟ್ನಂತೆ ಅಂತಿಮ ಪಂದ್ಯದಲ್ಲೂ ವಾಷಿಂಗ್ಟನ್ ಸುಂದರ್ ಮೂರನೇ ಕ್ರಮಾಂಕದಲ್ಲಿ ಕ್ರೀಸಿಗಿಳಿದರೆ ಸುದರ್ಶನ್ ಆರನೇ ಕ್ರಮಾಂಕದಲ್ಲಿ ಆಡಬೇಕಾಗುತ್ತದೆ. </p><p>ಮೊದಲ ಪಂದ್ಯದಲ್ಲಿ ಭಾರತ ನಾಲ್ವರು ಸ್ಪಿನ್ನರ್ ಹಾಗೂ ಇಬ್ಬರು ವೇಗಿಗಳ ರಣತಂತ್ರದೊಂದಿಗೆ ಕಣಕ್ಕಿಳಿದಿತ್ತು. ಇದರಲ್ಲಿ ಮೂವರು ಆಲ್ರೌಂಡರ್ ಒಳಗೊಂಡಿದ್ದರು. </p><p>ಇನ್ನು ಪಿಚ್ನಲ್ಲಿ ವೇಗಿಗಳಿಗೆ ನೆರವು ಸಿಗುವುದಾದರೆ ಅಕ್ಷರ್ ಪಟೇಲ್ ಬದಲಿಗೆ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಆಯ್ಕೆಗೆ ಪರಿಗಣಿಸುವ ಸಾಧ್ಯತೆಯಿದೆ. </p><p>ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಹಿನ್ನೆಲೆಯಲ್ಲಿ ಪ್ರತಿಯೊಂದು ಪಂದ್ಯದ ಫಲಿತಾಂಶವೂ ಹೆಚ್ಚು ಮಹತ್ವದೆನಿಸುತ್ತದೆ. ಈ ನಿಟ್ಟಿನಲ್ಲಿ ಸರಣಿ ಸಮಬಲಗೊಳಿಸುವ ಒತ್ತಡ ಭಾರತದ ಮೇಲಿದೆ. </p>.Syed Mushtaq Ali Trophy: ಕರ್ನಾಟಕ ತಂಡದಲ್ಲಿ ದೇವದತ್ತ, ನಾಯರ್.Ind vs SA | ಗುವಾಹಟಿ ಟೆಸ್ಟ್ಗೆ ದ.ಆಫ್ರಿಕಾ ಸಜ್ಜು: ವೇಗಿ ರಬಾಡ ಆಡ್ತಾರಾ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>