ಗಾಯಗೊಂಡಿರುವ ಹಾರ್ದಿಕ್ ಪಾಂಡ್ಯ ಸ್ಥಾನ ತುಂಬಲು ಮುಂಬೈನ ಆಲ್ರೌಂಡರ್ ಶಿವಂ ದುಬೆಗೆ ಅವಕಾಶ ನೀಡುವ ಸಾಧ್ಯತೆ ಇದೆ. ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಈಚೆಗೆ ಕೇರಳ ಪರವಾಗಿ ದ್ವಿಶತಕ ಬಾರಿಸಿದ್ದ ಸಂಜು ಸ್ಯಾಮ್ಸನ್ ಅವರನ್ನು ಆಯ್ಕೆ ಸಮಿತಿ ದ್ವಿತೀಯ ಆದ್ಯತೆಯಾಗಿ ಪರಿಗಣಿಸಲಿದೆ. ಮನೀಷ್ ಪಾಂಡೆಗೆ ಮೊದಲ ಆದ್ಯತೆ ನೀಡುವ ಸಾಧ್ಯತೆ ಇದೆ. ಮಣಿಗಂಟಿನ ಸ್ಪಿನ್ನರ್ಗಳಾದ ಕುಲದೀಪ್ ಯಾದವ್ ಮತ್ತು ಯಜುವೇಂದ್ರ ಚಾಹಲ್ ಅವರನ್ನೂ ಆಯ್ಕೆಗೆ ಪರಿಗಣಿಸುವ ನಿರೀಕ್ಷೆ ಇದೆ.