<p><strong>ದುಬೈ:</strong> ಇಂಗ್ಲೆಂಡ್ ವಿರುದ್ಧ ಸಾಧಾರಣ ಪ್ರದರ್ಶನ ನೀಡಿದ ಕರುಣ್ ನಾಯರ್ ಅವರು ವೆಸ್ಟ್ ಇಂಡೀಸ್ ವಿರುದ್ಧ ಎರಡು ಟೆಸ್ಟ್ಗಳ ಕ್ರಿಕೆಟ್ ಸರಣಿಯಲ್ಲಿ ಆಡುವ ಭಾರತ ತಂಡದಲ್ಲಿ ಸ್ಥಾನ ಉಳಿಸಿಕೊಳ್ಳುವರೇ ಎಂಬ ಕುತೂಹಲವಿದೆ. ರಾಜ್ಯದ ಇನ್ನೊಬ್ಬ ಆಟಗಾರ ದೇವದತ್ತ ಪಡಿಕ್ಕಲ್ ಅವರೂ ರೇಸ್ನಲ್ಲಿದ್ದಾರೆ.</p>.<p>ಅಕ್ಟೋಬರ್ 2 ರಂದು ಅಹಮದಾಬಾದಿನಲ್ಲಿ ಆರಂಭವಾಗುವ ಎರಡು ಟೆಸ್ಟ್ಗಳ ಸರಣಿಗೆ 15 ಆಟಗಾರರ ಭಾರತ ತಂಡವನ್ನು ಆಯ್ಕೆ ಮಾಡಲು ಅಜಿತ್ ಅಗರಕರ್ ನೇತೃತ್ವದ ಆಯ್ಕೆ ಸಮಿತಿ ಈ ವಾರ ಸಭೆ ಸೇರಲಿದೆ. ಬುಧವಾರ ಅಥವಾ ಗುರುವಾರ ಆನ್ಲೈನ್ ಮೂಲಕ ಸಭೆ ನಡೆಯುವ ಸಾಧ್ಯತೆಯಿದೆ. ಭಾರತ ಮತ್ತು ಆಸ್ಟ್ರೇಲಿಯಾ ‘ಎ’ ತಂಡಗಳ ನಡುವೆ ಎರಡನೇ ‘ಟೆಸ್ಟ್’ ಪಂದ್ಯ ಆ ವೇಳೆಗೆ ಎರಡು ಅಥವಾ ಮೂರನೇ ದಿನದಾಟ ಕಾಣಲಿದೆ.</p>.<p>ಬ್ಯಾಟರ್ ಕರುಣ್ ಅವರಿಗೆ ಪಡಿಕ್ಕಲ್ ಮತ್ತು ನಿತೀಶ್ ರೆಡ್ಡಿ ಅವರಿಂದ ಪೈಪೋಟಿ ಎದುರಾಗಲಿದೆ. </p>.<p>ಇಂಗ್ಲೆಂಡ್ ವಿರುದ್ಧ ಸರಣಿಯ ಕೊನೆಯ ಟೆಸ್ಟ್ನಲ್ಲಿ ಕರುಣ್ ನಾಯರ್ ಮಹತ್ವದ ಅರ್ಧ ಶತಕ ಗಳಿಸಿದ್ದರು. ಅವರು ಇತರ ಇನಿಂಗ್ಸ್ಗಳಲ್ಲಿ ಉತ್ತಮ ಆರಂಭ ಮಾಡಿದ್ದರೂ ಅದನ್ನು ದೊಡ್ಡ ಮೊತ್ತವನ್ನಾಗಿ ಪರಿವರ್ತಿಸಲು ವಿಫಲರಾಗಿದ್ದರು. ಬೆರಳಿನ ಗಾಯದಿಂದಾಗಿ ಅವರು ದುಲೀಪ್ ಟ್ರೋಫಿಯಲ್ಲಿ ಆಡಿರಲಿಲ್ಲ.</p>.<h2>ಸಂಭವನೀಯ ತಂಡ (15): </h2><p>ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆ.ಎಲ್.ರಾಹುಲ್, ಸಾಯಿ ಸುದರ್ಶನ್, ಕರುಣ್ ನಾಯರ್/ ದೇವದತ್ತ ಪಡಿಕ್ಕಲ್, ಧ್ರುವ್ ಜುರೇಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಅಕ್ಷರ್ ಪಟೇಲ್, ನಾರಾಯಣ ಜಗದೀಶನ್ (ವಿಕೆಟ್ ಕೀಪರ್, ನಿತೀಶ್ ರೆಡ್ಡಿ ಮತ್ತು ಆಕಾಶ್ ದೀಪ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದುಬೈ:</strong> ಇಂಗ್ಲೆಂಡ್ ವಿರುದ್ಧ ಸಾಧಾರಣ ಪ್ರದರ್ಶನ ನೀಡಿದ ಕರುಣ್ ನಾಯರ್ ಅವರು ವೆಸ್ಟ್ ಇಂಡೀಸ್ ವಿರುದ್ಧ ಎರಡು ಟೆಸ್ಟ್ಗಳ ಕ್ರಿಕೆಟ್ ಸರಣಿಯಲ್ಲಿ ಆಡುವ ಭಾರತ ತಂಡದಲ್ಲಿ ಸ್ಥಾನ ಉಳಿಸಿಕೊಳ್ಳುವರೇ ಎಂಬ ಕುತೂಹಲವಿದೆ. ರಾಜ್ಯದ ಇನ್ನೊಬ್ಬ ಆಟಗಾರ ದೇವದತ್ತ ಪಡಿಕ್ಕಲ್ ಅವರೂ ರೇಸ್ನಲ್ಲಿದ್ದಾರೆ.</p>.<p>ಅಕ್ಟೋಬರ್ 2 ರಂದು ಅಹಮದಾಬಾದಿನಲ್ಲಿ ಆರಂಭವಾಗುವ ಎರಡು ಟೆಸ್ಟ್ಗಳ ಸರಣಿಗೆ 15 ಆಟಗಾರರ ಭಾರತ ತಂಡವನ್ನು ಆಯ್ಕೆ ಮಾಡಲು ಅಜಿತ್ ಅಗರಕರ್ ನೇತೃತ್ವದ ಆಯ್ಕೆ ಸಮಿತಿ ಈ ವಾರ ಸಭೆ ಸೇರಲಿದೆ. ಬುಧವಾರ ಅಥವಾ ಗುರುವಾರ ಆನ್ಲೈನ್ ಮೂಲಕ ಸಭೆ ನಡೆಯುವ ಸಾಧ್ಯತೆಯಿದೆ. ಭಾರತ ಮತ್ತು ಆಸ್ಟ್ರೇಲಿಯಾ ‘ಎ’ ತಂಡಗಳ ನಡುವೆ ಎರಡನೇ ‘ಟೆಸ್ಟ್’ ಪಂದ್ಯ ಆ ವೇಳೆಗೆ ಎರಡು ಅಥವಾ ಮೂರನೇ ದಿನದಾಟ ಕಾಣಲಿದೆ.</p>.<p>ಬ್ಯಾಟರ್ ಕರುಣ್ ಅವರಿಗೆ ಪಡಿಕ್ಕಲ್ ಮತ್ತು ನಿತೀಶ್ ರೆಡ್ಡಿ ಅವರಿಂದ ಪೈಪೋಟಿ ಎದುರಾಗಲಿದೆ. </p>.<p>ಇಂಗ್ಲೆಂಡ್ ವಿರುದ್ಧ ಸರಣಿಯ ಕೊನೆಯ ಟೆಸ್ಟ್ನಲ್ಲಿ ಕರುಣ್ ನಾಯರ್ ಮಹತ್ವದ ಅರ್ಧ ಶತಕ ಗಳಿಸಿದ್ದರು. ಅವರು ಇತರ ಇನಿಂಗ್ಸ್ಗಳಲ್ಲಿ ಉತ್ತಮ ಆರಂಭ ಮಾಡಿದ್ದರೂ ಅದನ್ನು ದೊಡ್ಡ ಮೊತ್ತವನ್ನಾಗಿ ಪರಿವರ್ತಿಸಲು ವಿಫಲರಾಗಿದ್ದರು. ಬೆರಳಿನ ಗಾಯದಿಂದಾಗಿ ಅವರು ದುಲೀಪ್ ಟ್ರೋಫಿಯಲ್ಲಿ ಆಡಿರಲಿಲ್ಲ.</p>.<h2>ಸಂಭವನೀಯ ತಂಡ (15): </h2><p>ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆ.ಎಲ್.ರಾಹುಲ್, ಸಾಯಿ ಸುದರ್ಶನ್, ಕರುಣ್ ನಾಯರ್/ ದೇವದತ್ತ ಪಡಿಕ್ಕಲ್, ಧ್ರುವ್ ಜುರೇಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಅಕ್ಷರ್ ಪಟೇಲ್, ನಾರಾಯಣ ಜಗದೀಶನ್ (ವಿಕೆಟ್ ಕೀಪರ್, ನಿತೀಶ್ ರೆಡ್ಡಿ ಮತ್ತು ಆಕಾಶ್ ದೀಪ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>