<p><strong>ಕೋಲ್ಕತ್ತ: </strong>ಭಾರತ ಕ್ರಿಕೆಟ್ ತಂಡವು ಇದೇ ತಿಂಗಳು ನಡೆಯಲಿರುವ ಸರಣಿಯಲ್ಲಿ ಆಡಲು ದಕ್ಷಿಣ ಆಫ್ರಿಕಾಕ್ಕೆ ತೆರಳುವುದು ಖಚಿತವಾಗಿದೆ.</p>.<p>ಶನಿವಾರ ನಡೆದ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಾರ್ಷಿಕ ಮಹಾಸಭೆಯಲ್ಲಿ ಈ ಕುರಿತು ನಡೆದ ಚರ್ಚೆಯಲ್ಲಿ ಭಾರತ ತಂಡದ ಪ್ರವಾಸಕ್ಕೆ ಹಸಿರು ನಿಶಾನೆ ನೀಡಲಾಯಿತು. ಆದರೆ, ಪ್ರವಾಸವು ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ ಸರಣಿಗಳು ಮಾತ್ರ ನಡೆಯಲಿವೆ. ಟಿ20 ಸರಣಿಯನ್ನು ಮುಂದೂಡಲಾಗಿದೆ.</p>.<p>‘ದಕ್ಷಿಣ ಆಫ್ರಿಕಾದಲ್ಲಿ ಓಮೈಕ್ರಾನ್ ಪ್ರಕರಣಗಳು ಹೆಚ್ಚಿವೆ. ಆದ್ದರಿಂದ ಕ್ರಿಕೆಟ್ ಸರಣಿ ಮುಂದೂಡುವ ಸಾಧ್ಯತೆ ಇತ್ತು. ಆದರೆ ಪರಿಸ್ಥಿತಿಯನ್ನು ಅವಲೋಕಿಸಿದ ನಂತರ ಭಾರತ ತಂಡಕ್ಕೆ ತೆರಳಲು ಅನುಮತಿ ನೀಡಲು ನಿರ್ಧರಿಸಲಾಗಿದೆ’ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದರು.</p>.<p>ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳಲಿರುವ ಭಾರತ ತಂಡದಲ್ಲಿ 20 ಆಟಗಾರರನ್ನು ಆಯ್ಕೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.</p>.<p><strong>ಎನ್ಸಿಎಗೆ ಲಕ್ಷಣ್ 13ರಂದು</strong></p>.<p>ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಇದೇ 13ರಂದು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಬೌಲಿಂಗ್ ಕೋಚ್ ಟ್ರಾಯ್ ಕೂಲಿ ಕೂಡ ಕಾರ್ಯಾರಂಭ ಮಾಡಲಿದ್ದಾರೆ.</p>.<p><strong>ಸಭೆಯ ನಿರ್ಣಯಗಳು</strong></p>.<p>* ಪಂದ್ಯದ ಅಧಿಕಾರಿಗಳು, ನೆರವು ಸಿಬ್ಬಂದಿಯ ನಿವೃತ್ತಿ ವಯೋಮಿತಿಯನ್ನು 65 ವರ್ಷಕ್ಕೆ ಹೆಚ್ಚಿಸುವುದು</p>.<p>* ಈಶಾನ್ಯ ರಾಜ್ಯಗಳು, ಬಿಹಾರ, ಪುದುಚರಿ ಮತ್ತು ಉತ್ತರಾಖಂಡ ರಾಜ್ಯ ಸಂಸ್ಥೆಗಳಿಗೆ ಒಳಾಂಗಣ ಸೌಲಭ್ಯಗಳ ಅಭಿವೃದ್ಧಿಗಾಗಿ ₹ 10 ಕೋಟಿ.</p>.<p>* ಬ್ರಿಜೇಶ್ ಪಟೇಲ್ ಮತ್ತು ಎಂಕೆಜೆ ಮಜುಮದಾರ್ ಅವರನ್ನು ಐಪಿಎಲ್ ಆಡಳಿತ ಸಮಿತಿಗೆ ನೇಮಕ ಮಾಡಲಾಗಿದೆ. ಮಾಜಿ ಸ್ಪಿನ್ನರ್ ಪ್ರಗ್ಯಾನ್ ಓಜಾ ಅವರನ್ನು ಭಾರತ ಕ್ರಿಕೆಟಿಗರ ಸಂಘದ ಪ್ರತಿನಿಧಿಯನ್ನಾಗಿ ನೇಮಕ ಮಾಡಲಾಗಿದೆ</p>.<p>* ಪ್ರವಾಸ, ವೇಳಾಪಟ್ಟಿ ಮತ್ತು ತಾಂತ್ರಿಕ ಸಮಿತಿ, ಅಂಪೈರ್ ಕಮಿಟಿ ಮತ್ತು ಅಂಗವಿಕಲರ ಕ್ರಿಕೆಟ್ ಸಮಿತಿ ಪ್ರಕಟಣೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ: </strong>ಭಾರತ ಕ್ರಿಕೆಟ್ ತಂಡವು ಇದೇ ತಿಂಗಳು ನಡೆಯಲಿರುವ ಸರಣಿಯಲ್ಲಿ ಆಡಲು ದಕ್ಷಿಣ ಆಫ್ರಿಕಾಕ್ಕೆ ತೆರಳುವುದು ಖಚಿತವಾಗಿದೆ.</p>.<p>ಶನಿವಾರ ನಡೆದ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಾರ್ಷಿಕ ಮಹಾಸಭೆಯಲ್ಲಿ ಈ ಕುರಿತು ನಡೆದ ಚರ್ಚೆಯಲ್ಲಿ ಭಾರತ ತಂಡದ ಪ್ರವಾಸಕ್ಕೆ ಹಸಿರು ನಿಶಾನೆ ನೀಡಲಾಯಿತು. ಆದರೆ, ಪ್ರವಾಸವು ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ ಸರಣಿಗಳು ಮಾತ್ರ ನಡೆಯಲಿವೆ. ಟಿ20 ಸರಣಿಯನ್ನು ಮುಂದೂಡಲಾಗಿದೆ.</p>.<p>‘ದಕ್ಷಿಣ ಆಫ್ರಿಕಾದಲ್ಲಿ ಓಮೈಕ್ರಾನ್ ಪ್ರಕರಣಗಳು ಹೆಚ್ಚಿವೆ. ಆದ್ದರಿಂದ ಕ್ರಿಕೆಟ್ ಸರಣಿ ಮುಂದೂಡುವ ಸಾಧ್ಯತೆ ಇತ್ತು. ಆದರೆ ಪರಿಸ್ಥಿತಿಯನ್ನು ಅವಲೋಕಿಸಿದ ನಂತರ ಭಾರತ ತಂಡಕ್ಕೆ ತೆರಳಲು ಅನುಮತಿ ನೀಡಲು ನಿರ್ಧರಿಸಲಾಗಿದೆ’ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದರು.</p>.<p>ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳಲಿರುವ ಭಾರತ ತಂಡದಲ್ಲಿ 20 ಆಟಗಾರರನ್ನು ಆಯ್ಕೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.</p>.<p><strong>ಎನ್ಸಿಎಗೆ ಲಕ್ಷಣ್ 13ರಂದು</strong></p>.<p>ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಇದೇ 13ರಂದು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಬೌಲಿಂಗ್ ಕೋಚ್ ಟ್ರಾಯ್ ಕೂಲಿ ಕೂಡ ಕಾರ್ಯಾರಂಭ ಮಾಡಲಿದ್ದಾರೆ.</p>.<p><strong>ಸಭೆಯ ನಿರ್ಣಯಗಳು</strong></p>.<p>* ಪಂದ್ಯದ ಅಧಿಕಾರಿಗಳು, ನೆರವು ಸಿಬ್ಬಂದಿಯ ನಿವೃತ್ತಿ ವಯೋಮಿತಿಯನ್ನು 65 ವರ್ಷಕ್ಕೆ ಹೆಚ್ಚಿಸುವುದು</p>.<p>* ಈಶಾನ್ಯ ರಾಜ್ಯಗಳು, ಬಿಹಾರ, ಪುದುಚರಿ ಮತ್ತು ಉತ್ತರಾಖಂಡ ರಾಜ್ಯ ಸಂಸ್ಥೆಗಳಿಗೆ ಒಳಾಂಗಣ ಸೌಲಭ್ಯಗಳ ಅಭಿವೃದ್ಧಿಗಾಗಿ ₹ 10 ಕೋಟಿ.</p>.<p>* ಬ್ರಿಜೇಶ್ ಪಟೇಲ್ ಮತ್ತು ಎಂಕೆಜೆ ಮಜುಮದಾರ್ ಅವರನ್ನು ಐಪಿಎಲ್ ಆಡಳಿತ ಸಮಿತಿಗೆ ನೇಮಕ ಮಾಡಲಾಗಿದೆ. ಮಾಜಿ ಸ್ಪಿನ್ನರ್ ಪ್ರಗ್ಯಾನ್ ಓಜಾ ಅವರನ್ನು ಭಾರತ ಕ್ರಿಕೆಟಿಗರ ಸಂಘದ ಪ್ರತಿನಿಧಿಯನ್ನಾಗಿ ನೇಮಕ ಮಾಡಲಾಗಿದೆ</p>.<p>* ಪ್ರವಾಸ, ವೇಳಾಪಟ್ಟಿ ಮತ್ತು ತಾಂತ್ರಿಕ ಸಮಿತಿ, ಅಂಪೈರ್ ಕಮಿಟಿ ಮತ್ತು ಅಂಗವಿಕಲರ ಕ್ರಿಕೆಟ್ ಸಮಿತಿ ಪ್ರಕಟಣೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>