ದುಬೈ: ಈ ಬಾರಿಯ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ರೇಸ್ನಿಂದ ಹೊರಬಿದ್ದಿರುವ ಭಾರತ ಹಾಗೂ ಅಫ್ಗಾನಿಸ್ತಾನ ತಂಡಗಳು ಇಂದು ಸೂಪರ್–4 ಹಂತದ ಕೊನೇ ಪಂದ್ಯದಲ್ಲಿ ಸೆಣಸಾಟ ನಡೆಸುತ್ತಿವೆ.ಟಾಸ್ ಗೆದ್ದಿರುವ ಅಫ್ಗಾನಿಸ್ತಾನ ಪಡೆ ಬೌಲಿಂಗ್ ಆಯ್ದುಕೊಂಡಿದೆ.
ಉಭಯ ತಂಡಗಳುಸೂಪರ್–4 ಹಂತದಲ್ಲಿ ತಾವಾಡಿದ ಮೊದಲೆರಡು ಪಂದ್ಯಗಳಲ್ಲಿ ಶ್ರೀಲಂಕಾ ಮತ್ತು ಪಾಕಿಸ್ತಾನ ವಿರುದ್ಧ ಸೋಲು ಕಂಡಿವೆ.
ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೆ ತಂಡವನ್ನು ರೂಪಿಸುವತ್ತ ಚಿತ್ತ ನೆಟ್ಟಿರುವ ಭಾರತ ತಂಡಕ್ಕೆ ಈ ಪಂದ್ಯವೂ ಪ್ರಯೋಗಕ್ಕೆ ವೇದಿಕೆಯಾಗಿದೆ.
ಭಾರತ ಪರ ನಾಯಕ ರೋಹಿತ್ ಶರ್ಮಾ, ಅನುಭವಿ ಹಾರ್ದಿಕ್ ಪಾಂಡ್ಯಹಾಗೂ ಸ್ಪಿನ್ನರ್ ಯಜುವೇಂದ್ರ ಚಾಹಲ್ಗೆ ವಿಶ್ರಾಂತಿ ನೀಡಲಾಗಿದೆ. ರೋಹಿತ್ ಅನುಪಸ್ಥಿತಿಯಲ್ಲಿ ಕನ್ನಡಿಗ ಕೆ.ಎಲ್.ರಾಹುಲ್ ತಂಡ ಮುನ್ನಡೆಸಲಿದ್ದಾರೆ. ಪಾಂಡ್ಯ ಮತ್ತು ಚಾಹಲ್ ಬದಲು ಮಧ್ಯಮವೇಗಿ ದೀಪಕ್ ಚಾಹರ್ ಹಾಗೂ ಅಕ್ಷರ್ ಪಟೇಲ್ ಆಡಲಿದ್ದಾರೆ.