ಮಂಗಳೂರು: ಮಂಗಳವಾರ ಸುರಿದ ಮಳೆಯಿಂದ ತತ್ತರಿಸಿದ ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಮಳೆ ಬಿಡುವು ನೀಡಿದ್ದು, ಜನಜೀವನ ಸಹಜ ಸ್ಥಿತಿಗೆ ಮರಳಿದೆ. ವಾಹನಗಳ ಸಂಚಾರ, ಜನಜೀವನ ಎಂದಿನಂತ್ತಿತ್ತು.
ಬುಧವಾರ ಮಳೆ ಬಿಡುವು ಕೊಟ್ಟ ಕಾರಣ ಪರಿಹಾರ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳಲು ಸಾಧ್ಯವಾಯಿತು. ಬೆಳಿಗ್ಗೆಯಿಂದಲೇ ಮಹಾನಗರ ಪಾಲಿಕೆ ಸಿಬ್ಬಂದಿ ಚರಂಡಿಯಲ್ಲಿ ತುಂಬಿದ್ದ ಹೂಳು ತೆರವುಗೊಳಿಸಿದರು. ಕೆಲವೆಡೆ ಮನೆಗಳಿಗೆ ನುಗ್ಗಿದ್ದ ನೀರನ್ನು ಹೊರಕ್ಕೆ ಹಾಕುವ ಕೆಲಸದಲ್ಲಿ ಜನರು ನಿರತರಾಗಿದ್ದರು.
ಮುಂಜಾಗ್ರತಾ ಕ್ರಮವಾಗಿ ಶಾಲೆ, ಪದವಿಪೂರ್ವ ಕಾಲೇಜುಗಳು ರಜೆ ಘೋಷಿಸಿದ್ದು, ಮಕ್ಕಳು ಮನೆಯಲ್ಲಿಯೇ ಉಳಿದಿದ್ದರು.