ಬೌಲರ್ಗಳ ಮೇಲೆ ವಿಶ್ವಾಸ: ಬೌಲರ್ಗಳ ಮೇಲೆ ಭಾರತ ತಂಡದ ನಾಯಕ ಈಗ ಪೂರ್ಣ ವಿಶ್ವಾಸ ಹೊಂದಿದ್ದಾರೆ. ದುಬೈನ ನಿಧಾನಗತಿಯ ಪಿಚ್ನಲ್ಲಿ ಎದುರಾಳಿ ಬ್ಯಾಟ್ಸ್ಮನ್ಗಳನ್ನು ಕಟ್ಟಿ ಹಾಕುವಲ್ಲಿ ಭಾರತದ ಬೌಲರ್ಗಳು ಯಶಸ್ವಿಯಾಗಿದ್ದಾರೆ. ಸ್ಪಿನ್ ಜೋಡಿ ಯಜುವೇಂದ್ರ ಚಾಹಲ್ ಮತ್ತು ಕುಲದೀಪ್ ಯಾದವ್ ಟೂರ್ನಿಯುದ್ದಕ್ಕೂ ಗಮನಾರ್ಹ ದಾಳಿ ಸಂಘಟಿಸಿದ್ದಾರೆ. ಮಂಗಳವಾರದ ಪಂದ್ಯದಲ್ಲಿ ದೀಪಕ್ ಚಾಹರ್, ಸಿದ್ಧಾರ್ಥ್ ಕೌಲ್ ಮತ್ತು ಖಲೀಲ್ ಅಹಮ್ಮದ್ ಅವರ ಪೈಕಿ ಇಬ್ಬರಿಗೆ ಅಂತಿಮ 11ರಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ.