<p><strong>ಸಿಡ್ನಿ: </strong>ಇಲ್ಲಿನ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲೂ ಟೀಮ್ ಇಂಡಿಯಾ ಬ್ಯಾಟರ್ಗಳ ವೈಫಲ್ಯ ಮುಂದುವರಿದಿದ್ದು, ಮೊದಲ ದಿನದಾಟದಲ್ಲೇ 72.2 ಓವರ್ಗಳಲ್ಲಿ ಕೇವಲ 185 ರನ್ಗಳಿಗೆ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡಿದೆ. </p><p>ಬೌನ್ಸರ್, ವೇಗಿ ಸ್ನೇಹಿ ಪಿಚ್ನಲ್ಲಿ ಭಾರತೀಯ ಬ್ಯಾಟರ್ಗಳು ದಿನವಿಡೀ ಪರದಾಡಿದರು. ತಂಡದ ಪರ ರಿಷಭ್ ಪಂತ್ ಗರಿಷ್ಠ 40 ರನ್ ಗಳಿಸಿದರು. </p><p>ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಭಾರತದ ಆರಂಭ ಉತ್ತಮವಾಗಿರಲಿಲ್ಲ. 17 ರನ್ ಗಳಿಸುವಷ್ಟರಲ್ಲಿ ಆರಂಭಿಕರಾದ ಯಶಸ್ವಿ ಜೈಸ್ವಾಲ್ (10) ಹಾಗೂ ಕೆ.ಎಲ್. ರಾಹುಲ್ (4) ವಿಕೆಟ್ಗಳನ್ನು ಕಳೆದುಕೊಂಡಿತು. </p><p>ತಂಡಕ್ಕೆ ಪುನರಾಗಮನ ಮಾಡಿಕೊಂಡಿರುವ ಶುಭಮನ್ ಗಿಲ್ (20) ಸಹ ಹೆಚ್ಚು ಹೊತ್ತು ನಿಲ್ಲಲಿಲ್ಲ. ಪರಿಣಾಮ ಊಟದ ವಿರಾಮದ ಹೊತ್ತಿಗೆ ಭಾರತ ಮೂರು ವಿಕೆಟ್ ನಷ್ಟಕ್ಕೆ 57 ರನ್ ಗಳಿಸಿ ಸಂಕಷ್ಟದಲ್ಲಿತ್ತು. </p><p>ಇಲ್ಲಿಂದ ಬಳಿಕವೂ ಪರಿಸ್ಥಿತಿ ಬದಲಾಗಲಿಲ್ಲ. ಭೋಜನ ವಿರಾಮದ ಬಳಿಕ ಭಾರತಕ್ಕೆ ವಿರಾಟ್ ಕೊಹ್ಲಿ (17) ವಿಕೆಟ್ ನಷ್ಟವಾಯಿತು. ಮಗದೊಮ್ಮೆ ಆಫ್ ಸ್ಟಂಪ್ ಆಚೆಗಿನ ಎಸೆತದಲ್ಲಿ ಕೊಹ್ಲಿ ಔಟ್ ಆದರು. </p><p>ಮತ್ತೊಂದೆಡೆ ದಿಟ್ಟ ಹೋರಾಟ ತೋರಿದ ರಿಷಭ್ ಪಂತ್ ಹಾಗೂ ರವೀಂದ್ರ ಜಡೇಜ ಎದುರಾಳಿಗಳಿಗೆ ಅಲ್ಪ ಹೊತ್ತು ಪ್ರತಿರೋಧ ಒಡ್ಡಿದರು. ಇವರಿಬ್ಬರು ಐದನೇ ವಿಕೆಟ್ಗೆ 48 ರನ್ಗಳ ಜೊತೆಯಾಟದಲ್ಲಿ ಭಾಗಿಯಾದರು. </p><p>ರಿಷಭ್ 90 ಎಸೆತಗಳಲ್ಲಿ 40 ಮತ್ತು ಜಡೇಜ 95 ಎಸೆತಗಳಲ್ಲಿ 26 ರನ್ ಗಳಿಸಿ ಔಟ್ ಆದರು. ಇನ್ನುಳಿದಂತೆ ನಾಯಕ ಜಸ್ಪ್ರೀತ್ ಬೂಮ್ರಾ 22, ವಾಷಿಂಗ್ಟನ್ ಸುಂದರ್ 14, ಪ್ರಸಿದ್ದ ಕೃಷ್ಣ 3 ರನ್ ಗಳಿಸಿ ನಿರ್ಗಮಿಸಿದರು. </p><p>ಕಳೆದ ಪಂದ್ಯದ ಶತಕವೀರ ನಿತೀಶ್ ಕುಮಾರ್ ರೆಡ್ಡಿಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. </p><p>ಆಸ್ಟ್ರೇಲಿಯಾದ ಪರ ಮಾರಕ ದಾಳಿ ಸಂಘಟಿಸಿದ ಸ್ಕಾಟ್ ಬೋಲ್ಯಾಂಡ್ ನಾಲ್ಕು, ಮಿಚೆಲ್ ಸ್ಟಾರ್ಕ್ ಮೂರು, ಪ್ಯಾಟ್ ಕಮಿನ್ಸ್ ಎರಡು ಮತ್ತು ನೇಥನ್ ಲಯನ್ ಒಂದು ವಿಕೆಟ್ ಗಳಿಸಿ ಮಿಂಚಿದರು. </p><p>ಈ ಪೈಕಿ ಬೋಲ್ಯಾಂಡ್ 20 ಓವರ್ಗಳಲ್ಲಿ ಕೇವಲ 31 ರನ್ ಮಾತ್ರ ಬಿಟ್ಟುಕೊಟ್ಟರು. ಇದರಲ್ಲಿ ಎಂಟು ಮೇಡನ್ ಓವರ್ ಸೇರಿತ್ತು. </p><p>ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-2ರ ಅಂತರದ ಹಿನ್ನಡೆಯಲ್ಲಿದೆ. ಟ್ರೋಫಿ ತನ್ನ ಬಳಿಯಲ್ಲಿಯೇ ಉಳಿಸಿಕೊಳ್ಳಲು ಮತ್ತು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ನಲ್ಲಿ ಫೈನಲ್ ಪ್ರವೇಶ ಸಾಧ್ಯತೆಯನ್ನು ಜೀವಂತವಾಗಿರಿಸಲು ಭಾರತ ಈ ಪಂದ್ಯದಲ್ಲಿ ಗೆಲಲ್ಲೇಬೇಕಾದ ಒತ್ತಡಕ್ಕೆ ಸಿಲುಕಿದೆ<strong>. </strong></p><p><strong>ಬೂಮ್ರಾ ಮಿಂಚು...</strong></p><p>ಬಳಿಕ ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ ಮೊದಲ ದಿನದಾಟಕ್ಕೆ ಮೂರು ಓವರ್ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 9 ರನ್ ಗಳಿಸಿದೆ. </p><p>ನಿಖರ ದಾಳಿ ಸಂಘಟಿಸಿದ ಜಸ್ಪ್ರೀತ್ ಬೂಮ್ರಾ, ಆಸೀಸ್ ಆರಂಭಿಕ ಬ್ಯಾಟರ್ ಉಸ್ಮಾನ್ ಖ್ವಾಜಾ (2) ವಿಕೆಟ್ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. </p>.ಆಸೀಸ್ ಬೌಲರ್ಗಳ ಮಾರಕ ದಾಳಿ; ರಿಷಭ್ಗೆ ಸತತ ಏಟು; ಕಡೆಗೂ ಔಟ್.ತಾವು ಎದುರಿಸಿದ ಮೊದಲ ಎಸೆತದಲ್ಲೇ ಬಚಾವ್ ಆದ ಕಿಂಗ್ ಕೊಹ್ಲಿ; ಔಟ್ Or ನಾಟೌಟ್?.<p><strong>ರೋಹಿತ್ ಇಲ್ಲ, ಬೂಮ್ರಾ ನಾಯಕ...</strong></p><p>ಈ ಮೊದಲು ಟಾಸ್ ಗೆದ್ದ ಟೀಮ್ ಇಂಡಿಯಾದ ಉಸ್ತುವಾರಿ ನಾಯಕ ಜಸ್ಪ್ರೀತ್ ಬೂಮ್ರಾ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. </p><p>ಈ ಪಂದ್ಯದಿಂದ ವಿಶ್ರಾಂತಿ ತೆಗೆದುಕೊಳ್ಳಲು ನಾಯಕ ರೋಹಿತ್ ಶರ್ಮಾ ನಿರ್ಧರಿಸಿದ್ದಾರೆ. ಇದರಿಂದಾಗಿ ತಂಡವನ್ನು ಬೂಮ್ರಾ ಮುನ್ನಡೆಸುತ್ತಿದ್ದಾರೆ. </p><p>ಭಾರತ ತಂಡದಲ್ಲಿ ಎರಡು ಬದಲಾವಣೆ ತರಲಾಗಿದೆ. ರೋಹಿತ್ ಶರ್ಮಾ ಸ್ಥಾನಕ್ಕೆ ಶುಭಮನ್ ಗಿಲ್ ಆಯ್ಕೆಯಾಗಿದ್ದಾರೆ. ಹಾಗೆಯೇ ಗಾಯಾಳು ಆಕಾಶ್ ದೀಪ್ ಸ್ಥಾನದಲ್ಲಿ ಕನ್ನಡಿಗ ಪ್ರಸಿದ್ಧ ಕೃಷ್ಣ ಕಾಣಿಸಿಕೊಂಡಿದ್ದಾರೆ. </p><p>ಅತ್ತ ಆಸ್ಟ್ರೇಲಿಯಾ ತಂಡದಲ್ಲಿ ಬ್ಯೂ ವೆಬ್ಸ್ಟರ್ ಪದಾರ್ಪಣೆ ಮಾಡಿದ್ದಾರೆ. </p><p>'ನಾಯಕ ರೋಹಿತ್ ಶರ್ಮಾ ವಿಶ್ರಾಂತಿ ಪಡೆಯಲು ನಿರ್ಧರಿಸಿದ್ದಾರೆ. ತಂಡದಲ್ಲಿ ಒಗ್ಗಟ್ಟಿದ್ದು, ಯಾವುದೇ ಸ್ವಾರ್ಥತೆ ಇಲ್ಲ' ಎಂದು ಟಾಸ್ ವೇಳೆಯಲ್ಲಿ ಜಸ್ಪ್ರೀತ್ ಬೂಮ್ರಾ ಪ್ರತಿಕ್ರಿಯಿಸಿದ್ದಾರೆ. </p>.IND vs AUS Test: ಭಾರತಕ್ಕೆ ಪುಟಿದೇಳುವ ಸವಾಲು.ರೋಹಿತ್ಗೆ ವಿಶ್ರಾಂತಿಯೋ ಅಥವಾ ಕೈಬಿಟ್ಟಿದ್ದೋ?; ಬೂಮ್ರಾ ಹೇಳಿದ್ದೇನು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಡ್ನಿ: </strong>ಇಲ್ಲಿನ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲೂ ಟೀಮ್ ಇಂಡಿಯಾ ಬ್ಯಾಟರ್ಗಳ ವೈಫಲ್ಯ ಮುಂದುವರಿದಿದ್ದು, ಮೊದಲ ದಿನದಾಟದಲ್ಲೇ 72.2 ಓವರ್ಗಳಲ್ಲಿ ಕೇವಲ 185 ರನ್ಗಳಿಗೆ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡಿದೆ. </p><p>ಬೌನ್ಸರ್, ವೇಗಿ ಸ್ನೇಹಿ ಪಿಚ್ನಲ್ಲಿ ಭಾರತೀಯ ಬ್ಯಾಟರ್ಗಳು ದಿನವಿಡೀ ಪರದಾಡಿದರು. ತಂಡದ ಪರ ರಿಷಭ್ ಪಂತ್ ಗರಿಷ್ಠ 40 ರನ್ ಗಳಿಸಿದರು. </p><p>ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಭಾರತದ ಆರಂಭ ಉತ್ತಮವಾಗಿರಲಿಲ್ಲ. 17 ರನ್ ಗಳಿಸುವಷ್ಟರಲ್ಲಿ ಆರಂಭಿಕರಾದ ಯಶಸ್ವಿ ಜೈಸ್ವಾಲ್ (10) ಹಾಗೂ ಕೆ.ಎಲ್. ರಾಹುಲ್ (4) ವಿಕೆಟ್ಗಳನ್ನು ಕಳೆದುಕೊಂಡಿತು. </p><p>ತಂಡಕ್ಕೆ ಪುನರಾಗಮನ ಮಾಡಿಕೊಂಡಿರುವ ಶುಭಮನ್ ಗಿಲ್ (20) ಸಹ ಹೆಚ್ಚು ಹೊತ್ತು ನಿಲ್ಲಲಿಲ್ಲ. ಪರಿಣಾಮ ಊಟದ ವಿರಾಮದ ಹೊತ್ತಿಗೆ ಭಾರತ ಮೂರು ವಿಕೆಟ್ ನಷ್ಟಕ್ಕೆ 57 ರನ್ ಗಳಿಸಿ ಸಂಕಷ್ಟದಲ್ಲಿತ್ತು. </p><p>ಇಲ್ಲಿಂದ ಬಳಿಕವೂ ಪರಿಸ್ಥಿತಿ ಬದಲಾಗಲಿಲ್ಲ. ಭೋಜನ ವಿರಾಮದ ಬಳಿಕ ಭಾರತಕ್ಕೆ ವಿರಾಟ್ ಕೊಹ್ಲಿ (17) ವಿಕೆಟ್ ನಷ್ಟವಾಯಿತು. ಮಗದೊಮ್ಮೆ ಆಫ್ ಸ್ಟಂಪ್ ಆಚೆಗಿನ ಎಸೆತದಲ್ಲಿ ಕೊಹ್ಲಿ ಔಟ್ ಆದರು. </p><p>ಮತ್ತೊಂದೆಡೆ ದಿಟ್ಟ ಹೋರಾಟ ತೋರಿದ ರಿಷಭ್ ಪಂತ್ ಹಾಗೂ ರವೀಂದ್ರ ಜಡೇಜ ಎದುರಾಳಿಗಳಿಗೆ ಅಲ್ಪ ಹೊತ್ತು ಪ್ರತಿರೋಧ ಒಡ್ಡಿದರು. ಇವರಿಬ್ಬರು ಐದನೇ ವಿಕೆಟ್ಗೆ 48 ರನ್ಗಳ ಜೊತೆಯಾಟದಲ್ಲಿ ಭಾಗಿಯಾದರು. </p><p>ರಿಷಭ್ 90 ಎಸೆತಗಳಲ್ಲಿ 40 ಮತ್ತು ಜಡೇಜ 95 ಎಸೆತಗಳಲ್ಲಿ 26 ರನ್ ಗಳಿಸಿ ಔಟ್ ಆದರು. ಇನ್ನುಳಿದಂತೆ ನಾಯಕ ಜಸ್ಪ್ರೀತ್ ಬೂಮ್ರಾ 22, ವಾಷಿಂಗ್ಟನ್ ಸುಂದರ್ 14, ಪ್ರಸಿದ್ದ ಕೃಷ್ಣ 3 ರನ್ ಗಳಿಸಿ ನಿರ್ಗಮಿಸಿದರು. </p><p>ಕಳೆದ ಪಂದ್ಯದ ಶತಕವೀರ ನಿತೀಶ್ ಕುಮಾರ್ ರೆಡ್ಡಿಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. </p><p>ಆಸ್ಟ್ರೇಲಿಯಾದ ಪರ ಮಾರಕ ದಾಳಿ ಸಂಘಟಿಸಿದ ಸ್ಕಾಟ್ ಬೋಲ್ಯಾಂಡ್ ನಾಲ್ಕು, ಮಿಚೆಲ್ ಸ್ಟಾರ್ಕ್ ಮೂರು, ಪ್ಯಾಟ್ ಕಮಿನ್ಸ್ ಎರಡು ಮತ್ತು ನೇಥನ್ ಲಯನ್ ಒಂದು ವಿಕೆಟ್ ಗಳಿಸಿ ಮಿಂಚಿದರು. </p><p>ಈ ಪೈಕಿ ಬೋಲ್ಯಾಂಡ್ 20 ಓವರ್ಗಳಲ್ಲಿ ಕೇವಲ 31 ರನ್ ಮಾತ್ರ ಬಿಟ್ಟುಕೊಟ್ಟರು. ಇದರಲ್ಲಿ ಎಂಟು ಮೇಡನ್ ಓವರ್ ಸೇರಿತ್ತು. </p><p>ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-2ರ ಅಂತರದ ಹಿನ್ನಡೆಯಲ್ಲಿದೆ. ಟ್ರೋಫಿ ತನ್ನ ಬಳಿಯಲ್ಲಿಯೇ ಉಳಿಸಿಕೊಳ್ಳಲು ಮತ್ತು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ನಲ್ಲಿ ಫೈನಲ್ ಪ್ರವೇಶ ಸಾಧ್ಯತೆಯನ್ನು ಜೀವಂತವಾಗಿರಿಸಲು ಭಾರತ ಈ ಪಂದ್ಯದಲ್ಲಿ ಗೆಲಲ್ಲೇಬೇಕಾದ ಒತ್ತಡಕ್ಕೆ ಸಿಲುಕಿದೆ<strong>. </strong></p><p><strong>ಬೂಮ್ರಾ ಮಿಂಚು...</strong></p><p>ಬಳಿಕ ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ ಮೊದಲ ದಿನದಾಟಕ್ಕೆ ಮೂರು ಓವರ್ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 9 ರನ್ ಗಳಿಸಿದೆ. </p><p>ನಿಖರ ದಾಳಿ ಸಂಘಟಿಸಿದ ಜಸ್ಪ್ರೀತ್ ಬೂಮ್ರಾ, ಆಸೀಸ್ ಆರಂಭಿಕ ಬ್ಯಾಟರ್ ಉಸ್ಮಾನ್ ಖ್ವಾಜಾ (2) ವಿಕೆಟ್ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. </p>.ಆಸೀಸ್ ಬೌಲರ್ಗಳ ಮಾರಕ ದಾಳಿ; ರಿಷಭ್ಗೆ ಸತತ ಏಟು; ಕಡೆಗೂ ಔಟ್.ತಾವು ಎದುರಿಸಿದ ಮೊದಲ ಎಸೆತದಲ್ಲೇ ಬಚಾವ್ ಆದ ಕಿಂಗ್ ಕೊಹ್ಲಿ; ಔಟ್ Or ನಾಟೌಟ್?.<p><strong>ರೋಹಿತ್ ಇಲ್ಲ, ಬೂಮ್ರಾ ನಾಯಕ...</strong></p><p>ಈ ಮೊದಲು ಟಾಸ್ ಗೆದ್ದ ಟೀಮ್ ಇಂಡಿಯಾದ ಉಸ್ತುವಾರಿ ನಾಯಕ ಜಸ್ಪ್ರೀತ್ ಬೂಮ್ರಾ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. </p><p>ಈ ಪಂದ್ಯದಿಂದ ವಿಶ್ರಾಂತಿ ತೆಗೆದುಕೊಳ್ಳಲು ನಾಯಕ ರೋಹಿತ್ ಶರ್ಮಾ ನಿರ್ಧರಿಸಿದ್ದಾರೆ. ಇದರಿಂದಾಗಿ ತಂಡವನ್ನು ಬೂಮ್ರಾ ಮುನ್ನಡೆಸುತ್ತಿದ್ದಾರೆ. </p><p>ಭಾರತ ತಂಡದಲ್ಲಿ ಎರಡು ಬದಲಾವಣೆ ತರಲಾಗಿದೆ. ರೋಹಿತ್ ಶರ್ಮಾ ಸ್ಥಾನಕ್ಕೆ ಶುಭಮನ್ ಗಿಲ್ ಆಯ್ಕೆಯಾಗಿದ್ದಾರೆ. ಹಾಗೆಯೇ ಗಾಯಾಳು ಆಕಾಶ್ ದೀಪ್ ಸ್ಥಾನದಲ್ಲಿ ಕನ್ನಡಿಗ ಪ್ರಸಿದ್ಧ ಕೃಷ್ಣ ಕಾಣಿಸಿಕೊಂಡಿದ್ದಾರೆ. </p><p>ಅತ್ತ ಆಸ್ಟ್ರೇಲಿಯಾ ತಂಡದಲ್ಲಿ ಬ್ಯೂ ವೆಬ್ಸ್ಟರ್ ಪದಾರ್ಪಣೆ ಮಾಡಿದ್ದಾರೆ. </p><p>'ನಾಯಕ ರೋಹಿತ್ ಶರ್ಮಾ ವಿಶ್ರಾಂತಿ ಪಡೆಯಲು ನಿರ್ಧರಿಸಿದ್ದಾರೆ. ತಂಡದಲ್ಲಿ ಒಗ್ಗಟ್ಟಿದ್ದು, ಯಾವುದೇ ಸ್ವಾರ್ಥತೆ ಇಲ್ಲ' ಎಂದು ಟಾಸ್ ವೇಳೆಯಲ್ಲಿ ಜಸ್ಪ್ರೀತ್ ಬೂಮ್ರಾ ಪ್ರತಿಕ್ರಿಯಿಸಿದ್ದಾರೆ. </p>.IND vs AUS Test: ಭಾರತಕ್ಕೆ ಪುಟಿದೇಳುವ ಸವಾಲು.ರೋಹಿತ್ಗೆ ವಿಶ್ರಾಂತಿಯೋ ಅಥವಾ ಕೈಬಿಟ್ಟಿದ್ದೋ?; ಬೂಮ್ರಾ ಹೇಳಿದ್ದೇನು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>