ಪಾರ್ಲ್, ದಕ್ಷಿಣ ಆಫ್ರಿಕಾ: ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ರೋಹಿತ್ ಶರ್ಮಾ ಅವರು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಕನ್ನಡಿಗ ಕೆ.ಎಲ್.ರಾಹುಲ್ ತಂಡವನ್ನು ಮುನ್ನಡೆಸುತ್ತಿದ್ದಾರೆ.
ವಿರಾಟ್ ಮೂರು ಮಾದರಿಯ ಕ್ರಿಕೆಟ್ ತಂಡಗಳ ನಾಯಕತ್ವದಿಂದ ಕೆಳಗಿಳಿದ ನಂತರ ಬ್ಯಾಟರ್ ಆಗಿ ಕಣಕ್ಕಿಳಿಯುತ್ತಿರುವ ಮೊದಲ ಪಂದ್ಯ ಇದು. ಆದ್ದರಿಂದಲೇ ಎಲ್ಲರ ಕುತೂಹಲದ ಕಣ್ಣುಗಳು ಅವರತ್ತ ನೆಟ್ಟಿವೆ.
ಈ ಪಂದ್ಯದ ಮೂಲಕ ವೆಂಕಟೇಶ್ ಅಯ್ಯರ್ ಏಕದಿನ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದಾರೆ.