ಸೂರ್ಯಕುಮಾರ್ ನಾಯಕ...
ಯುವ ಪ್ರತಿಭಾನ್ವಿತ ಆಟಗಾರರಿಂದ ಕೂಡಿರುವ ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸುತ್ತಿದ್ದಾರೆ. ಆದರೆ ಪಂದ್ಯ ರದ್ದುಗೊಂಡ ಕಾರಣ ಯುವ ಆಟಗಾರರು ಅವಕಾಶ ವಂಚಿತರಾಗಿದ್ದಾರೆ.
ಇತ್ತೀಚೆಗೆ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಟಿ20 ಸರಣಿಯಲ್ಲಿ ಸೂರ್ಯ ನಾಯಕತ್ವದಲ್ಲೇ ಭಾರತ 4-1ರ ಅಂತರದ ಗೆಲುವು ಸಾಧಿಸಿತ್ತು.
ಅದೇ ಆತ್ಮವಿಶ್ವಾಸದೊಂದಿಗೆ ಭಾರತ ತಂಡ ದಕ್ಷಿಣ ಆಫ್ರಿಕಾ ಪರ್ಯಟನೆ ನಡೆಸಿದೆ. ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಋತುರಾಜ್ ಗಾಯಕವಾಡ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ, ರವಿ ಬಿಷ್ಣೋಯಿ, ಮುಕೇಶ್ ಕುಮಾರ್ ಮುಂತಾದ ಯುವ ಆಟಗಾರರು ತಂಡದಲ್ಲಿದ್ದಾರೆ.
ಮತ್ತೊಂದೆಡೆ ದಕ್ಷಿಣ ಆಫ್ರಿಕಾ ತಂಡವನ್ನು ಏಡನ್ ಮರ್ಕರಮ್ ಮುನ್ನಡೆಸುತ್ತಿದ್ದಾರೆ.