ಭಾರತ ತಂಡದೊಡನೆ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳಿರುವ ಯುವ ಆಟಗಾರರಿಗೆ ತಮ್ಮ ಸಾಮರ್ಥ್ಯ ಪ್ರದರ್ಶನಕ್ಕೆ ಈ ಪಂದ್ಯದಲ್ಲಿ ಅವಕಾಶ ದೊರಕಲಿದೆ.
ಮುಂದಿನ ವರ್ಷ ನಡೆಯುವ ಟಿ20 ವಿಶ್ವಕಪ್ಗೆ ಮೊದಲು ಭಾರತಕ್ಕೆ ಒಟ್ಟು ಐದು ಚುಟುಕು ಕ್ರಿಕೆಟ್ ಪಂದ್ಯಗಳಷ್ಟೇ ಆಡಲಿದೆ. ಹೀಗಾಗಿ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿರುವ ‘ಚಿಂತಕರ ಚಾವಡಿ’ಯ ಮುಂದೆ ಸವಾಲು ಇದೆ.
ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಇತ್ತೀಚೆಗೆ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಟಿ20 ಸರಣಿಯಲ್ಲಿ ಭಾರತ 4-1ರ ಅಂತರದ ಗೆಲುವು ದಾಖಲಿಸಿತ್ತು.