<p>ಬೆಂಗಳೂರು: ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವೆ ಅಂಗವಿಕಲರ (ಕಾಲಿನ ನ್ಯೂನತೆಯಿದ್ದವರ) ಐದು ಪಂದ್ಯಗಳ ಟಿ20 ಕ್ರಿಕೆಟ್ ಸರಣಿಯು ಕುಂಬಳಗೋಡಿನ ಕಿಣಿ ಸ್ಪೋರ್ಟ್ಸ್ ಅರೇನಾದಲ್ಲಿ ಮಂಗಳವಾರ ಆರಂಭವಾಗಲಿದೆ.</p>.<p>ಭಿನ್ನ ಸಾಮರ್ಥ್ಯದ ಭಾರತ ಕ್ರಿಕೆಟ್ ಮಂಡಳಿ (ಡಿಸಿಸಿಐ) ಮತ್ತು ವಿಲ್ಸ್ಪೋಕ್ ಸ್ಪೋರ್ಟ್ಸ್ ಅಂಡ್ ಎಂಟರ್ಟೈನ್ಮೆಂಟ್ ಸಂಸ್ಥೆಯ ಆಶ್ರಯದಲ್ಲಿ ಮೊದಲ ಬಾರಿಗೆ ಭಾರತ–ಲಂಕಾ ನಡುವೆ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಆಯೋಜಿಸಲಾಗಿದೆ. ಏಪ್ರಿಲ್ 29, 30, ಮೇ 2, 3 ಮತ್ತು 5ರಂದು ಬೆಳಿಗ್ಗೆ 9ರಿಂದ 12.30ರವರೆಗೆ ಪಂದ್ಯಗಳು ನಡೆಯಲಿವೆ.</p>.<p>‘ಕೊಲಂಬೊದಲ್ಲಿ ಜನವರಿಯಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ, ಶ್ರೀಲಂಕಾ, ಪಾಕಿಸ್ತಾನ ಸೇರಿದಂತೆ ಐದು ತಂಡಗಳು ಸೆಣಸಾಟ ನಡೆಸಿತ್ತು. ಈ ಟೂರ್ನಿಯಲ್ಲಿ ಭಾರತ ಚಾಂಪಿಯನ್ ಆಗಿತ್ತು. ಅದೇ ಆತ್ಮವಿಶ್ವಾಸದಲ್ಲಿ ಭಾರತ ತಂಡವು ಕಣಕ್ಕೆ ಇಳಿಯಲಿದ್ದು, ಸರಣಿ ಗೆಲ್ಲುವ ವಿಶ್ವಾಸವಿದೆ. ರಾಷ್ಟ್ರೀಯ ಜೆರ್ಸಿಯಲ್ಲಿ ಆಡುವುದೇ ಹೆಮ್ಮೆಯ ಕ್ಷಣ’ ಎಂದು ಭಾರತ ತಂಡದ ನಾಯಕ ರವೀಂದ್ರ ಸಾಂಟೆ ಸೋಮವಾರ ಮಾಧ್ಯಮ ಸಂವಾದದಲ್ಲಿ ತಿಳಿಸಿದರು.</p>.<p>‘ಉತ್ತಮ ತರಬೇತಿಯೊಂದಿಗೆ ನಮ್ಮ ತಂಡವು ಪ್ರಬಲ ಪೈಪೋಟಿ ನೀಡಲು ಸಜ್ಜಾಗಿದೆ. ಸರಣಿಯನ್ನು ಗೆಲ್ಲಲು ಪ್ರಯತ್ನಿಸುತ್ತೇವೆ’ ಎಂದು ಲಂಕಾ ತಂಡದ ನಾಯಕ ಪಿ.ಆರ್.ಶಾಂತೊ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವೆ ಅಂಗವಿಕಲರ (ಕಾಲಿನ ನ್ಯೂನತೆಯಿದ್ದವರ) ಐದು ಪಂದ್ಯಗಳ ಟಿ20 ಕ್ರಿಕೆಟ್ ಸರಣಿಯು ಕುಂಬಳಗೋಡಿನ ಕಿಣಿ ಸ್ಪೋರ್ಟ್ಸ್ ಅರೇನಾದಲ್ಲಿ ಮಂಗಳವಾರ ಆರಂಭವಾಗಲಿದೆ.</p>.<p>ಭಿನ್ನ ಸಾಮರ್ಥ್ಯದ ಭಾರತ ಕ್ರಿಕೆಟ್ ಮಂಡಳಿ (ಡಿಸಿಸಿಐ) ಮತ್ತು ವಿಲ್ಸ್ಪೋಕ್ ಸ್ಪೋರ್ಟ್ಸ್ ಅಂಡ್ ಎಂಟರ್ಟೈನ್ಮೆಂಟ್ ಸಂಸ್ಥೆಯ ಆಶ್ರಯದಲ್ಲಿ ಮೊದಲ ಬಾರಿಗೆ ಭಾರತ–ಲಂಕಾ ನಡುವೆ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಆಯೋಜಿಸಲಾಗಿದೆ. ಏಪ್ರಿಲ್ 29, 30, ಮೇ 2, 3 ಮತ್ತು 5ರಂದು ಬೆಳಿಗ್ಗೆ 9ರಿಂದ 12.30ರವರೆಗೆ ಪಂದ್ಯಗಳು ನಡೆಯಲಿವೆ.</p>.<p>‘ಕೊಲಂಬೊದಲ್ಲಿ ಜನವರಿಯಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ, ಶ್ರೀಲಂಕಾ, ಪಾಕಿಸ್ತಾನ ಸೇರಿದಂತೆ ಐದು ತಂಡಗಳು ಸೆಣಸಾಟ ನಡೆಸಿತ್ತು. ಈ ಟೂರ್ನಿಯಲ್ಲಿ ಭಾರತ ಚಾಂಪಿಯನ್ ಆಗಿತ್ತು. ಅದೇ ಆತ್ಮವಿಶ್ವಾಸದಲ್ಲಿ ಭಾರತ ತಂಡವು ಕಣಕ್ಕೆ ಇಳಿಯಲಿದ್ದು, ಸರಣಿ ಗೆಲ್ಲುವ ವಿಶ್ವಾಸವಿದೆ. ರಾಷ್ಟ್ರೀಯ ಜೆರ್ಸಿಯಲ್ಲಿ ಆಡುವುದೇ ಹೆಮ್ಮೆಯ ಕ್ಷಣ’ ಎಂದು ಭಾರತ ತಂಡದ ನಾಯಕ ರವೀಂದ್ರ ಸಾಂಟೆ ಸೋಮವಾರ ಮಾಧ್ಯಮ ಸಂವಾದದಲ್ಲಿ ತಿಳಿಸಿದರು.</p>.<p>‘ಉತ್ತಮ ತರಬೇತಿಯೊಂದಿಗೆ ನಮ್ಮ ತಂಡವು ಪ್ರಬಲ ಪೈಪೋಟಿ ನೀಡಲು ಸಜ್ಜಾಗಿದೆ. ಸರಣಿಯನ್ನು ಗೆಲ್ಲಲು ಪ್ರಯತ್ನಿಸುತ್ತೇವೆ’ ಎಂದು ಲಂಕಾ ತಂಡದ ನಾಯಕ ಪಿ.ಆರ್.ಶಾಂತೊ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>