ದೋಸ್ತಿ ಸರ್ಕಾರದ ಬಹುಮುಖ್ಯ ಭಾಗವಾಗಿರುವ ಡಾ. ಪರಮೇಶ್ವರ, ಸರ್ಕಾರ ರಚನೆಯ ಬಗ್ಗೆ ಅತೃಪ್ತಿಯನ್ನು ಹೊರ ಹಾಕಿದ್ದು ವರದಿಯಾಗಿದೆ. ಕೆಪಿಸಿಸಿ ಅಧ್ಯಕ್ಷರಾಗಿರುವ ಪರಮೇಶ್ವರ, ದೋಸ್ತಿ ಸರ್ಕಾರ ರಚನೆಯಲ್ಲಿ ಮುಖ್ಯ ಪಾತ್ರ ವಹಿಸಿದ್ದರು.
ರಾಜ್ಯದಲ್ಲಿ ಕಾಂಗ್ರೆಸ್ಗೆ ಬಹುಮತ ಬಂದಿದ್ದರೂ ಅವರು ಉಪಮುಖ್ಯಮಂತ್ರಿ ಆಗುತ್ತಿರಲಿಲ್ಲವೇನೋ, ಯಾಕೆಂದರೆ ಆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬುದನ್ನು ಮೊದಲೇ ನಿರ್ಧರಿಸಲಾಗಿತ್ತು.
ಕೆಪಿಸಿಸಿಯ ಜವಾಬ್ದಾರಿಯುತ ಹುದ್ದೆಯಲ್ಲಿದ್ದು, ಪಕ್ಷವನ್ನು ಅಧಿಕಾರಕ್ಕೆ ತರಲಾಗದ್ದಕ್ಕೆ ನೈತಿಕ ಹೊಣೆ ಹೊತ್ತು ಎಸ್.ಆರ್. ಪಾಟೀಲ ಅವರು ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅದೇ ನೈತಿಕತೆ ಪರಮೇಶ್ವರ ಅವರಲ್ಲಿ ಕಾಣಿಸಲಿಲ್ಲ. ಲಭಿಸಿದ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುವ ಜಾಣ್ಮೆಯನ್ನಾದರೂ ತೋರಲಿ.