<p><strong>ದುಬೈ</strong>: ಚಾಂಪಿಯನ್ಸ್ ಟ್ರೋಫಿಯಲ್ಲಿ ವೇಗಿ ಜಸ್ಪ್ರೀತ್ ಬೂಮ್ರಾ ಅನುಪಸ್ಥಿಯು ಭಾರತವನ್ನು ಬಲವಾಗಿ ಕಾಡಲಿದೆ ಎಂದು ಮಾಜಿ ಕ್ರಿಕೆಟಿಗ ಶಿಖರ್ ಧವನ್ ಹೇಳಿದ್ದಾರೆ. ಆದರೂ ಈಗಿನ ಫಾರ್ಮ್ ಗಮನಿಸಿದರೆ ಭಾರತಕ್ಕೆ ಟ್ರೋಫಿ ಗೆಲ್ಲುವ ಅವಕಾಶವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.</p><p> ನಾಳೆಯಿಂದ ಪಾಕಿಸ್ತಾನದ ಆತಿಥ್ಯದಲ್ಲಿ ಪಂದ್ಯಾವಳಿ ಆರಂಭವಾಗಲಿದ್ದು, ಗುರುವಾರ(ಫೆ.20) ದುಬೈನಲ್ಲಿ ನೆರೆಯ ಬಾಂಗ್ಲಾದೇಶದ ವಿರುದ್ಧ ಮೊದಲ ಪಂದ್ಯ ಆಡುವ ಮೂಲಕ ಭಾರತ ತಂಡ ತನ್ನ ಅಭಿಯಾನ ಆರಂಭಿಸಲಿದೆ.</p><p>ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಡಿದ್ದ ಬೂಮ್ರಾ ಬೆನ್ನಿನ ಗಾಯಕ್ಕೆ ತುತ್ತಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>‘ಜಸ್ಪ್ರೀತ್ ಬೂಮ್ರಾ ಭಾರತ ತಂಡದಲ್ಲಿ ಇಲ್ಲದಿರುವುದು ನನ್ನ ಕಳವಳವಾಗಿದೆ. ಅದೊಂದು ದೊಡ್ಡ ಪರಿಣಾಮ ಬೀರಲಿದೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಅದು ತಂಡಕ್ಕೆ ಬಹಳ ದೊಡ್ಡದಾಗಿ ಅನುಭವಕ್ಕೆ ಬರಲಿದೆ’ ಎಂದು ಐಸಿಸಿ ಅಂಕಣದಲ್ಲಿ ಧವನ್ ಬರೆದುಕೊಂಡಿದ್ದಾರೆ.</p><p>'ನನ್ನ ಪ್ರಕಾರ, ಬೂಮ್ರಾ ವಿಶ್ವದ ಅತ್ಯುತ್ತಮ ಬೌಲರ್. ಅವರ ನಿಖರ ಬೌಲಿಂಗ್ ದಾಳಿಗೆ ಪರ್ಯಾಯ ಹುಡುಕುವುದು ಕಷ್ಟ. ಅತ್ಯಂತ ಶಾಂತ ಸ್ವಭಾವದವರಾಗಿರುವ ಅವರು ಐಸಿಸಿ ಪಂದ್ಯಾವಳಿಯಲ್ಲಿ ನಿರ್ಣಾಯಕ ಪಾತ್ರ ನಿರ್ವಹಿಸಬಲ್ಲವರಾಗಿದ್ದಾರೆ’ಎಂದೂ ಹೇಳಿದ್ದಾರೆ.</p><p>‘ಇದೇ ಸಮಯದಲ್ಲಿ, ಹರ್ಷಿತ್ ರಾಣಾ ತಂಡಕ್ಕೆ ಬಂದಿರುವುದು ರೋಮಾಂಚನಕಾರಿ ಎಂದು ನಾನು ಭಾವಿಸುತ್ತೇನೆ. ಅವರ ಆಟದ ಮೇಲೆ ಗಮನ ಕೇಂದ್ರೀಕರಿಸಿದ್ದೇನೆ. ಅತ್ಯುತ್ತಮ ಪ್ರದರ್ಶನದ ನಿರೀಕ್ಷೆಯಲ್ಲಿದ್ದೇನೆ’ ಎಂದಿದ್ದಾರೆ.</p><p>‘ಮೈದಾನದಲ್ಲಿ ಹರ್ಷಿತ್ ನಡೆದುಕೊಳ್ಳುವ ರೀತಿ ನನಗೆ ಇಷ್ಟ. ಅವರು ಗೋ-ಗೆಟರ್ ರೀತಿ ಇದ್ದು, ಯಾವುದಕ್ಕೂ ಹೆದರುವುದಿಲ್ಲ. ಯಾವುದೇ ಸವಾಲುಗಳನ್ನು ಸ್ವೀಕರಿಸುತ್ತಾರೆ. ಅತ್ಯುತ್ತಮ ಫಾರ್ಮ್ನಲ್ಲಿರುವುದನ್ನು ಇಂಗ್ಲೆಂಡ್ ಸರಣಿಯಲ್ಲಿ ನೋಡಿದ್ದೇವೆ. ಈ ಅವಕಾಶವನ್ನು ಬಳಸಿಕೊಳ್ಳುತ್ತಾರೆ. ಹಾಗೆ ನೋಡಿದರೆ ರಾಣಾ ಭಾರತಕ್ಕೆ ನಿಜವಾದ ಎಕ್ಸ್-ಫ್ಯಾಕ್ಟರ್ ಅನ್ನು ಒದಗಿಸಬಹುದು ಎಂದು ನನಗೆ ಖಾತ್ರಿಯಿದೆ’ ಎಂದು ಧವನ್ ಅಭಿಪ್ರಾಯಪಟ್ಟಿದ್ದಾರೆ.</p><p>ಇತ್ತೀಚಿನ ಫಾರ್ಮ್ ಮತ್ತು ತಂಡದ ಬಲವನ್ನು ಗಮನಿಸಿದರೆ, ಭಾರತ ಚಾಂಪಿಯನ್ ಆಗುವ ಆಶಾವಾದ ಇಟ್ಟುಕೊಳ್ಳಬಹುದು. ಬ್ಯಾಟಿಂಗ್ ವಿಭಾಗದಲ್ಲಿ ಸಮತೋಲನ ಇದೆ. ಯುವಕರು ಮತ್ತು ಅನುಭವಿಗಳಿಂದ ತಂಡ ಸಮ್ಮಿಳಿತವಾಗಿದೆ. ಶುಭಮನ್ ಗಿಲ್ ಅತ್ಯಂತ ಸ್ಥಿರ ಪ್ರದರ್ಶನ ನೀಡುತ್ತಿದ್ದು, ಈ ಪಂದ್ಯಾವಳಿಯಲ್ಲಿ ಅತ್ಯಂತ ದೊಡ್ಡ ಪಾತ್ರ ನಿರ್ವಹಿಸಲಿದ್ದಾರೆ’ ಎಂದು ಧವನ್ ಅಭಿಪ್ರಾಯಪಟ್ಟಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದುಬೈ</strong>: ಚಾಂಪಿಯನ್ಸ್ ಟ್ರೋಫಿಯಲ್ಲಿ ವೇಗಿ ಜಸ್ಪ್ರೀತ್ ಬೂಮ್ರಾ ಅನುಪಸ್ಥಿಯು ಭಾರತವನ್ನು ಬಲವಾಗಿ ಕಾಡಲಿದೆ ಎಂದು ಮಾಜಿ ಕ್ರಿಕೆಟಿಗ ಶಿಖರ್ ಧವನ್ ಹೇಳಿದ್ದಾರೆ. ಆದರೂ ಈಗಿನ ಫಾರ್ಮ್ ಗಮನಿಸಿದರೆ ಭಾರತಕ್ಕೆ ಟ್ರೋಫಿ ಗೆಲ್ಲುವ ಅವಕಾಶವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.</p><p> ನಾಳೆಯಿಂದ ಪಾಕಿಸ್ತಾನದ ಆತಿಥ್ಯದಲ್ಲಿ ಪಂದ್ಯಾವಳಿ ಆರಂಭವಾಗಲಿದ್ದು, ಗುರುವಾರ(ಫೆ.20) ದುಬೈನಲ್ಲಿ ನೆರೆಯ ಬಾಂಗ್ಲಾದೇಶದ ವಿರುದ್ಧ ಮೊದಲ ಪಂದ್ಯ ಆಡುವ ಮೂಲಕ ಭಾರತ ತಂಡ ತನ್ನ ಅಭಿಯಾನ ಆರಂಭಿಸಲಿದೆ.</p><p>ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಡಿದ್ದ ಬೂಮ್ರಾ ಬೆನ್ನಿನ ಗಾಯಕ್ಕೆ ತುತ್ತಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>‘ಜಸ್ಪ್ರೀತ್ ಬೂಮ್ರಾ ಭಾರತ ತಂಡದಲ್ಲಿ ಇಲ್ಲದಿರುವುದು ನನ್ನ ಕಳವಳವಾಗಿದೆ. ಅದೊಂದು ದೊಡ್ಡ ಪರಿಣಾಮ ಬೀರಲಿದೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಅದು ತಂಡಕ್ಕೆ ಬಹಳ ದೊಡ್ಡದಾಗಿ ಅನುಭವಕ್ಕೆ ಬರಲಿದೆ’ ಎಂದು ಐಸಿಸಿ ಅಂಕಣದಲ್ಲಿ ಧವನ್ ಬರೆದುಕೊಂಡಿದ್ದಾರೆ.</p><p>'ನನ್ನ ಪ್ರಕಾರ, ಬೂಮ್ರಾ ವಿಶ್ವದ ಅತ್ಯುತ್ತಮ ಬೌಲರ್. ಅವರ ನಿಖರ ಬೌಲಿಂಗ್ ದಾಳಿಗೆ ಪರ್ಯಾಯ ಹುಡುಕುವುದು ಕಷ್ಟ. ಅತ್ಯಂತ ಶಾಂತ ಸ್ವಭಾವದವರಾಗಿರುವ ಅವರು ಐಸಿಸಿ ಪಂದ್ಯಾವಳಿಯಲ್ಲಿ ನಿರ್ಣಾಯಕ ಪಾತ್ರ ನಿರ್ವಹಿಸಬಲ್ಲವರಾಗಿದ್ದಾರೆ’ಎಂದೂ ಹೇಳಿದ್ದಾರೆ.</p><p>‘ಇದೇ ಸಮಯದಲ್ಲಿ, ಹರ್ಷಿತ್ ರಾಣಾ ತಂಡಕ್ಕೆ ಬಂದಿರುವುದು ರೋಮಾಂಚನಕಾರಿ ಎಂದು ನಾನು ಭಾವಿಸುತ್ತೇನೆ. ಅವರ ಆಟದ ಮೇಲೆ ಗಮನ ಕೇಂದ್ರೀಕರಿಸಿದ್ದೇನೆ. ಅತ್ಯುತ್ತಮ ಪ್ರದರ್ಶನದ ನಿರೀಕ್ಷೆಯಲ್ಲಿದ್ದೇನೆ’ ಎಂದಿದ್ದಾರೆ.</p><p>‘ಮೈದಾನದಲ್ಲಿ ಹರ್ಷಿತ್ ನಡೆದುಕೊಳ್ಳುವ ರೀತಿ ನನಗೆ ಇಷ್ಟ. ಅವರು ಗೋ-ಗೆಟರ್ ರೀತಿ ಇದ್ದು, ಯಾವುದಕ್ಕೂ ಹೆದರುವುದಿಲ್ಲ. ಯಾವುದೇ ಸವಾಲುಗಳನ್ನು ಸ್ವೀಕರಿಸುತ್ತಾರೆ. ಅತ್ಯುತ್ತಮ ಫಾರ್ಮ್ನಲ್ಲಿರುವುದನ್ನು ಇಂಗ್ಲೆಂಡ್ ಸರಣಿಯಲ್ಲಿ ನೋಡಿದ್ದೇವೆ. ಈ ಅವಕಾಶವನ್ನು ಬಳಸಿಕೊಳ್ಳುತ್ತಾರೆ. ಹಾಗೆ ನೋಡಿದರೆ ರಾಣಾ ಭಾರತಕ್ಕೆ ನಿಜವಾದ ಎಕ್ಸ್-ಫ್ಯಾಕ್ಟರ್ ಅನ್ನು ಒದಗಿಸಬಹುದು ಎಂದು ನನಗೆ ಖಾತ್ರಿಯಿದೆ’ ಎಂದು ಧವನ್ ಅಭಿಪ್ರಾಯಪಟ್ಟಿದ್ದಾರೆ.</p><p>ಇತ್ತೀಚಿನ ಫಾರ್ಮ್ ಮತ್ತು ತಂಡದ ಬಲವನ್ನು ಗಮನಿಸಿದರೆ, ಭಾರತ ಚಾಂಪಿಯನ್ ಆಗುವ ಆಶಾವಾದ ಇಟ್ಟುಕೊಳ್ಳಬಹುದು. ಬ್ಯಾಟಿಂಗ್ ವಿಭಾಗದಲ್ಲಿ ಸಮತೋಲನ ಇದೆ. ಯುವಕರು ಮತ್ತು ಅನುಭವಿಗಳಿಂದ ತಂಡ ಸಮ್ಮಿಳಿತವಾಗಿದೆ. ಶುಭಮನ್ ಗಿಲ್ ಅತ್ಯಂತ ಸ್ಥಿರ ಪ್ರದರ್ಶನ ನೀಡುತ್ತಿದ್ದು, ಈ ಪಂದ್ಯಾವಳಿಯಲ್ಲಿ ಅತ್ಯಂತ ದೊಡ್ಡ ಪಾತ್ರ ನಿರ್ವಹಿಸಲಿದ್ದಾರೆ’ ಎಂದು ಧವನ್ ಅಭಿಪ್ರಾಯಪಟ್ಟಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>