<p><strong>ಬೆಂಗಳೂರು:</strong> ‘ವಿಧಾನಸಭೆ ಸಚಿವಾಲಯ ಕಾರ್ಯದರ್ಶಿ ಎಸ್.ಮೂರ್ತಿ ನೇತೃತ್ವದಲ್ಲಿ ತಮ್ಮ ಕಚೇರಿ ಬೀಗ ಮುರಿದು, ಅಕ್ರಮವಾಗಿ ಒಳ ಪ್ರವೇಶಿಸಿ ಕೆಲವು ಮಹತ್ವದ ದಾಖಲೆಗಳು, ಚೆಕ್ ಪುಸ್ತಕಗಳನ್ನು ಸಾಗಿಸಲಾಗಿದೆ’ ಎಂದು ಆರೋಪಿಸಿ ವಿಧಾನಸೌಧ ಪೊಲೀಸರಿಗೆ ಸಚಿವಾಲಯದ ಜಂಟಿ ಕಾರ್ಯದರ್ಶಿ ಶಶಿಕಲಾ ಭಟ್ ದೂರು ನೀಡಿದ್ದಾರೆ.</p>.<p>ತಾವು ಶನಿವಾರ ಒಂದು ದಿನ ರಜೆ ಹೋಗಿದ್ದಾಗ ಬೀಗ ಮುರಿಯಲಾಗಿದೆ ಎಂದು ಅವರು ದೂರಿನಲ್ಲಿ ವಿವರಿಸಿದ್ದಾರೆ. ಆದರೆ, ಶಶಿಕಲಾ ಭಟ್ ಅವರ ಕಚೇರಿ ಸ್ಥಳಾಂತರಿಸುವಂತೆ ವಿಧಾನಸಭೆಯ ಅಧ್ಯಕ್ಷ ರಮೇಶ್ ಕುಮಾರ್ ಆದೇಶಿಸಿದ್ದಾರೆ ಎಂದು ಗೊತ್ತಾಗಿದೆ.</p>.<p>‘ಬಡ್ತಿ ಮೀಸಲಾತಿ ಕುರಿತ ಸುಪ್ರೀಂ ಕೋರ್ಟ್ ತೀರ್ಪನ್ನು ವಿಧಾನಸಭೆ ಸಚಿವಾಲಯಕ್ಕೂ ವಿಸ್ತರಿಸುವಂತೆ ನಾವು ಒತ್ತಾಯಿಸುತ್ತಿದ್ದೇವೆ. ಈ ಬಗ್ಗೆ ಕೋರ್ಟ್ಗೂ ಅರ್ಜಿ ಸಲ್ಲಿಸಿದ್ದೇವೆ. ತೀರ್ಪು ಜಾರಿಯಾದರೆ ಮೂರ್ತಿ ಜಂಟಿ ಕಾರ್ಯದರ್ಶಿ ಹುದ್ದೆಗೆ ಹಿಂಬಡ್ತಿ ಪಡೆಯಲಿದ್ದಾರೆ. ಈ ಕಾರಣಕ್ಕೆ ನನ್ನ ವಿರುದ್ಧ ಹಗೆ ಸಾಧಿಸುತ್ತಿದ್ದಾರೆ’ ಎಂದು ಭಟ್ ದೂರಿನಲ್ಲಿ ವಿವರಿಸಿದ್ದಾರೆ.</p>.<p>ವಿಧಾನಸೌಧದ ಮೊದಲ ಮಹಡಿಯಲ್ಲಿರುವ 124ನೇ ಸಂಖ್ಯೆ ಕೊಠಡಿಯು ವಿಧಾನಸಭೆ ಸಚಿವಾಲಯದ ಜಂಟಿ ಕಾರ್ಯದರ್ಶಿಗಳಿಗೆ ಬಹಳ ಹಿಂದೆಯೇ ನಿಗದಿಯಾಗಿದೆ. ಹಿಂದಿದ್ದ ಅನೇಕರು ಇದೇ ಕೊಠಡಿಯನ್ನು ಬಳಸಿದ್ದಾರೆ. ಈಗ ವಿಧಾನಸಭೆ ಅಧ್ಯಕ್ಷರ ಆಪ್ತ ಕಾರ್ಯದರ್ಶಿಗೆ ಕೊಠಡಿ ಬಿಟ್ಟುಕೊಡುವಂತೆ ಕಾರ್ಯದರ್ಶಿ ಸೂಚಿಸಿದ್ದರು ಎನ್ನಲಾಗಿದೆ.</p>.<p>‘ಕಾರ್ಯದರ್ಶಿ ವರ್ತನೆಯನ್ನು ವಿಧಾನಸಭೆ ಅಧ್ಯಕ್ಷರ ಗಮನಕ್ಕೆ ತರಲು ಪ್ರಯತ್ನಿಸಿದೆ. ಅವರು ಸಿಗಲಿಲ್ಲ. ಅವರ ಆಪ್ತ ಕಾರ್ಯದರ್ಶಿಗೆ ಸುದ್ದಿ ಮುಟ್ಟಿಸಿದ್ದೇನೆ’ ಎಂದೂ ಶಶಿಕಲಾ ಭಟ್ ತಿಳಿಸಿದ್ದಾರೆ.</p>.<p>ಸಚಿವಾಲಯ ಕಾರ್ಯದರ್ಶಿ ಮೂರ್ತಿ ಪ್ರತಿಕ್ರಿಯೆಗೆ ಸಿಗಲಿಲ್ಲ. ಹಲವು ಸಲ ಅವರ ಮೊಬೈಲ್ಗೆ ಕರೆ ಮಾಡಿದರೂ ಸ್ವೀಕರಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ವಿಧಾನಸಭೆ ಸಚಿವಾಲಯ ಕಾರ್ಯದರ್ಶಿ ಎಸ್.ಮೂರ್ತಿ ನೇತೃತ್ವದಲ್ಲಿ ತಮ್ಮ ಕಚೇರಿ ಬೀಗ ಮುರಿದು, ಅಕ್ರಮವಾಗಿ ಒಳ ಪ್ರವೇಶಿಸಿ ಕೆಲವು ಮಹತ್ವದ ದಾಖಲೆಗಳು, ಚೆಕ್ ಪುಸ್ತಕಗಳನ್ನು ಸಾಗಿಸಲಾಗಿದೆ’ ಎಂದು ಆರೋಪಿಸಿ ವಿಧಾನಸೌಧ ಪೊಲೀಸರಿಗೆ ಸಚಿವಾಲಯದ ಜಂಟಿ ಕಾರ್ಯದರ್ಶಿ ಶಶಿಕಲಾ ಭಟ್ ದೂರು ನೀಡಿದ್ದಾರೆ.</p>.<p>ತಾವು ಶನಿವಾರ ಒಂದು ದಿನ ರಜೆ ಹೋಗಿದ್ದಾಗ ಬೀಗ ಮುರಿಯಲಾಗಿದೆ ಎಂದು ಅವರು ದೂರಿನಲ್ಲಿ ವಿವರಿಸಿದ್ದಾರೆ. ಆದರೆ, ಶಶಿಕಲಾ ಭಟ್ ಅವರ ಕಚೇರಿ ಸ್ಥಳಾಂತರಿಸುವಂತೆ ವಿಧಾನಸಭೆಯ ಅಧ್ಯಕ್ಷ ರಮೇಶ್ ಕುಮಾರ್ ಆದೇಶಿಸಿದ್ದಾರೆ ಎಂದು ಗೊತ್ತಾಗಿದೆ.</p>.<p>‘ಬಡ್ತಿ ಮೀಸಲಾತಿ ಕುರಿತ ಸುಪ್ರೀಂ ಕೋರ್ಟ್ ತೀರ್ಪನ್ನು ವಿಧಾನಸಭೆ ಸಚಿವಾಲಯಕ್ಕೂ ವಿಸ್ತರಿಸುವಂತೆ ನಾವು ಒತ್ತಾಯಿಸುತ್ತಿದ್ದೇವೆ. ಈ ಬಗ್ಗೆ ಕೋರ್ಟ್ಗೂ ಅರ್ಜಿ ಸಲ್ಲಿಸಿದ್ದೇವೆ. ತೀರ್ಪು ಜಾರಿಯಾದರೆ ಮೂರ್ತಿ ಜಂಟಿ ಕಾರ್ಯದರ್ಶಿ ಹುದ್ದೆಗೆ ಹಿಂಬಡ್ತಿ ಪಡೆಯಲಿದ್ದಾರೆ. ಈ ಕಾರಣಕ್ಕೆ ನನ್ನ ವಿರುದ್ಧ ಹಗೆ ಸಾಧಿಸುತ್ತಿದ್ದಾರೆ’ ಎಂದು ಭಟ್ ದೂರಿನಲ್ಲಿ ವಿವರಿಸಿದ್ದಾರೆ.</p>.<p>ವಿಧಾನಸೌಧದ ಮೊದಲ ಮಹಡಿಯಲ್ಲಿರುವ 124ನೇ ಸಂಖ್ಯೆ ಕೊಠಡಿಯು ವಿಧಾನಸಭೆ ಸಚಿವಾಲಯದ ಜಂಟಿ ಕಾರ್ಯದರ್ಶಿಗಳಿಗೆ ಬಹಳ ಹಿಂದೆಯೇ ನಿಗದಿಯಾಗಿದೆ. ಹಿಂದಿದ್ದ ಅನೇಕರು ಇದೇ ಕೊಠಡಿಯನ್ನು ಬಳಸಿದ್ದಾರೆ. ಈಗ ವಿಧಾನಸಭೆ ಅಧ್ಯಕ್ಷರ ಆಪ್ತ ಕಾರ್ಯದರ್ಶಿಗೆ ಕೊಠಡಿ ಬಿಟ್ಟುಕೊಡುವಂತೆ ಕಾರ್ಯದರ್ಶಿ ಸೂಚಿಸಿದ್ದರು ಎನ್ನಲಾಗಿದೆ.</p>.<p>‘ಕಾರ್ಯದರ್ಶಿ ವರ್ತನೆಯನ್ನು ವಿಧಾನಸಭೆ ಅಧ್ಯಕ್ಷರ ಗಮನಕ್ಕೆ ತರಲು ಪ್ರಯತ್ನಿಸಿದೆ. ಅವರು ಸಿಗಲಿಲ್ಲ. ಅವರ ಆಪ್ತ ಕಾರ್ಯದರ್ಶಿಗೆ ಸುದ್ದಿ ಮುಟ್ಟಿಸಿದ್ದೇನೆ’ ಎಂದೂ ಶಶಿಕಲಾ ಭಟ್ ತಿಳಿಸಿದ್ದಾರೆ.</p>.<p>ಸಚಿವಾಲಯ ಕಾರ್ಯದರ್ಶಿ ಮೂರ್ತಿ ಪ್ರತಿಕ್ರಿಯೆಗೆ ಸಿಗಲಿಲ್ಲ. ಹಲವು ಸಲ ಅವರ ಮೊಬೈಲ್ಗೆ ಕರೆ ಮಾಡಿದರೂ ಸ್ವೀಕರಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>