<p><strong>ನವದೆಹಲಿ:</strong> ಆಸ್ಟ್ರೇಲಿಯಾದಲ್ಲಿ ನಿಗದಿಯಾಗಿರುವ ಟ್ವೆಂಟಿ–20 ವಿಶ್ವಕಪ್ ಮುಂದೂಡುವ ವಿಚಾರದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಇದುವರೆಗೂ ಸ್ಪಷ್ಟ ನಿಲುವು ತಳೆದಿಲ್ಲ. ಐಸಿಸಿಯ ಈ ವಿಳಂಬ ನೀತಿಯಿಂದಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ತಲೆಬಿಸಿ ಶುರುವಾಗಿದೆ.</p>.<p>ವಿಶ್ವಕಪ್ ನಿಗದಿಯಾಗಿದ್ದ ಅವಧಿಯಲ್ಲೇ (ಅಕ್ಟೋಬರ್–ನವೆಂಬರ್) ಐಪಿಎಲ್ 13ನೇ ಆವೃತ್ತಿಯನ್ನು ಆಯೋಜಿಸಲು ಬಿಸಿಸಿಐ ಸಿದ್ಧತೆ ನಡೆಸಿದೆ. ಜುಲೈ ತಿಂಗಳಲ್ಲಿ ವಿಶ್ವಕಪ್ ಭವಿಷ್ಯದ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಐಸಿಸಿ ಹೇಳಿತ್ತು. ಆದರೆ ಇನ್ನೂ ಸಭೆಯ ದಿನಾಂಕವನ್ನೇ ಪ್ರಕಟಿಸಿಲ್ಲ. ಹೀಗಾಗಿ ಬಿಸಿಸಿಗೆ ತಳಮಳ ಶುರುವಾಗಿದೆ.</p>.<p>‘ವಿಶ್ವಕಪ್ ಮುಂದೂಡುವ ವಿಚಾರದಲ್ಲಿ ತನ್ನ ನಿಲುವು ಪ್ರಕಟಿಸಲು ಐಸಿಸಿ ಏಕೆ ತಡಮಾಡುತ್ತಿದೆ ಎಂಬುದು ತಿಳಿಯುತ್ತಿಲ್ಲ. ಈ ವರ್ಷ ಐಪಿಎಲ್ ನಡೆಸಲೇಬೇಕೆಂದು ನಾವು ನಿರ್ಧರಿಸಿದ್ದೇವೆ. ಐಸಿಸಿ ತೀರ್ಮಾನವನ್ನು ನೋಡಿಕೊಂಡು ವೇಳಾಪಟ್ಟಿ ಅಂತಿಮಗೊಳಿಸಬೇಕೆಂದುಕೊಂಡಿದ್ದೇವೆ’ ಎಂದು ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್ ಸೋಮವಾರ ಹೇಳಿದ್ದಾರೆ.</p>.<p>‘ಪ್ರತಿನಿತ್ಯದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಭಾರತದಲ್ಲಿ ಲೀಗ್ ನಡೆಸಬೇಕೊ ಅಥವಾ ವಿದೇಶದಲ್ಲಿ ಆಯೋಜಿಸಬೇಕೊ ಎಂಬುದರ ಬಗ್ಗೆಯೂ ಚರ್ಚಿಸುತ್ತಿದ್ದೇವೆ. ಸದ್ಯಕ್ಕೆ ಎರಡು ಆಯ್ಕೆಗಳೂ ನಮ್ಮ ಮುಂದಿವೆ’ ಎಂದಿದ್ದಾರೆ.</p>.<p>‘ರಣಜಿ ಟ್ರೋಫಿ ಸೇರಿದಂತೆ ದೇಶಿಯ ಟೂರ್ನಿಗಳನ್ನು ನಡೆಸುವ ಆಲೋಚನೆ ಇದೆ. ಸೆಪ್ಟೆಂಬರ್ನಲ್ಲಿ ಕ್ರಿಕೆಟ್ ಚಟುವಟಿಕೆಗಳು ಗರಿಗೆದರುವ ನಿರೀಕ್ಷೆ ಇದೆ’ ಎಂದೂ ಅವರು ತಿಳಿಸಿದ್ದಾರೆ.</p>.<p>ಕೊರೊನಾ ಬಿಕ್ಕಟ್ಟಿನಿಂದಾಗಿ ಈ ಬಾರಿಯ ಐಪಿಎಲ್ ರದ್ದಾದರೆ ಬಿಸಿಸಿಐಗೆ ₹4,000 ಕೋಟಿಗಿಂತಲೂ ಅಧಿಕ ನಷ್ಟವಾಗಲಿದೆ ಎಂದು ಧುಮಾಲ್ ಅವರು ಈ ಹಿಂದೆ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಆಸ್ಟ್ರೇಲಿಯಾದಲ್ಲಿ ನಿಗದಿಯಾಗಿರುವ ಟ್ವೆಂಟಿ–20 ವಿಶ್ವಕಪ್ ಮುಂದೂಡುವ ವಿಚಾರದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಇದುವರೆಗೂ ಸ್ಪಷ್ಟ ನಿಲುವು ತಳೆದಿಲ್ಲ. ಐಸಿಸಿಯ ಈ ವಿಳಂಬ ನೀತಿಯಿಂದಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ತಲೆಬಿಸಿ ಶುರುವಾಗಿದೆ.</p>.<p>ವಿಶ್ವಕಪ್ ನಿಗದಿಯಾಗಿದ್ದ ಅವಧಿಯಲ್ಲೇ (ಅಕ್ಟೋಬರ್–ನವೆಂಬರ್) ಐಪಿಎಲ್ 13ನೇ ಆವೃತ್ತಿಯನ್ನು ಆಯೋಜಿಸಲು ಬಿಸಿಸಿಐ ಸಿದ್ಧತೆ ನಡೆಸಿದೆ. ಜುಲೈ ತಿಂಗಳಲ್ಲಿ ವಿಶ್ವಕಪ್ ಭವಿಷ್ಯದ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಐಸಿಸಿ ಹೇಳಿತ್ತು. ಆದರೆ ಇನ್ನೂ ಸಭೆಯ ದಿನಾಂಕವನ್ನೇ ಪ್ರಕಟಿಸಿಲ್ಲ. ಹೀಗಾಗಿ ಬಿಸಿಸಿಗೆ ತಳಮಳ ಶುರುವಾಗಿದೆ.</p>.<p>‘ವಿಶ್ವಕಪ್ ಮುಂದೂಡುವ ವಿಚಾರದಲ್ಲಿ ತನ್ನ ನಿಲುವು ಪ್ರಕಟಿಸಲು ಐಸಿಸಿ ಏಕೆ ತಡಮಾಡುತ್ತಿದೆ ಎಂಬುದು ತಿಳಿಯುತ್ತಿಲ್ಲ. ಈ ವರ್ಷ ಐಪಿಎಲ್ ನಡೆಸಲೇಬೇಕೆಂದು ನಾವು ನಿರ್ಧರಿಸಿದ್ದೇವೆ. ಐಸಿಸಿ ತೀರ್ಮಾನವನ್ನು ನೋಡಿಕೊಂಡು ವೇಳಾಪಟ್ಟಿ ಅಂತಿಮಗೊಳಿಸಬೇಕೆಂದುಕೊಂಡಿದ್ದೇವೆ’ ಎಂದು ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್ ಸೋಮವಾರ ಹೇಳಿದ್ದಾರೆ.</p>.<p>‘ಪ್ರತಿನಿತ್ಯದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಭಾರತದಲ್ಲಿ ಲೀಗ್ ನಡೆಸಬೇಕೊ ಅಥವಾ ವಿದೇಶದಲ್ಲಿ ಆಯೋಜಿಸಬೇಕೊ ಎಂಬುದರ ಬಗ್ಗೆಯೂ ಚರ್ಚಿಸುತ್ತಿದ್ದೇವೆ. ಸದ್ಯಕ್ಕೆ ಎರಡು ಆಯ್ಕೆಗಳೂ ನಮ್ಮ ಮುಂದಿವೆ’ ಎಂದಿದ್ದಾರೆ.</p>.<p>‘ರಣಜಿ ಟ್ರೋಫಿ ಸೇರಿದಂತೆ ದೇಶಿಯ ಟೂರ್ನಿಗಳನ್ನು ನಡೆಸುವ ಆಲೋಚನೆ ಇದೆ. ಸೆಪ್ಟೆಂಬರ್ನಲ್ಲಿ ಕ್ರಿಕೆಟ್ ಚಟುವಟಿಕೆಗಳು ಗರಿಗೆದರುವ ನಿರೀಕ್ಷೆ ಇದೆ’ ಎಂದೂ ಅವರು ತಿಳಿಸಿದ್ದಾರೆ.</p>.<p>ಕೊರೊನಾ ಬಿಕ್ಕಟ್ಟಿನಿಂದಾಗಿ ಈ ಬಾರಿಯ ಐಪಿಎಲ್ ರದ್ದಾದರೆ ಬಿಸಿಸಿಐಗೆ ₹4,000 ಕೋಟಿಗಿಂತಲೂ ಅಧಿಕ ನಷ್ಟವಾಗಲಿದೆ ಎಂದು ಧುಮಾಲ್ ಅವರು ಈ ಹಿಂದೆ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>