‘ವಿಶ್ವಕಪ್ ಮುಂದೂಡುವ ವಿಚಾರದಲ್ಲಿ ತನ್ನ ನಿಲುವು ಪ್ರಕಟಿಸಲು ಐಸಿಸಿ ಏಕೆ ತಡಮಾಡುತ್ತಿದೆ ಎಂಬುದು ತಿಳಿಯುತ್ತಿಲ್ಲ. ಈ ವರ್ಷ ಐಪಿಎಲ್ ನಡೆಸಲೇಬೇಕೆಂದು ನಾವು ನಿರ್ಧರಿಸಿದ್ದೇವೆ. ಐಸಿಸಿ ತೀರ್ಮಾನವನ್ನು ನೋಡಿಕೊಂಡು ವೇಳಾಪಟ್ಟಿ ಅಂತಿಮಗೊಳಿಸಬೇಕೆಂದುಕೊಂಡಿದ್ದೇವೆ’ ಎಂದು ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್ ಸೋಮವಾರ ಹೇಳಿದ್ದಾರೆ.