ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ.ಮೊಗಳ್ಳಿ ಗಣೇಶ್‌ಗೆ ಬೆಸಗರಹಳ್ಳಿ ರಾಮಣ್ಣ ಕಥಾ ಸಂಕಲನ ಪ್ರಶಸ್ತಿ

Last Updated 4 ಜೂನ್ 2018, 19:30 IST
ಅಕ್ಷರ ಗಾತ್ರ

ಮಂಡ್ಯ: ಡಾ. ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ ಕೊಡಮಾಡುವ 2017ನೇ ಸಾಲಿನ ಕಥಾಸಂಕಲನ ಪ್ರಶಸ್ತಿಗೆ ಡಾ.ಮೊಗಳ್ಳಿ ಗಣೇಶ್‌ ಅವರ ‘ದೇವರ ದಾರಿ’ ಕಥಾ ಸಂಕಲನ ಆಯ್ಕೆಯಾಗಿದೆ.‌

ಪ್ರಶಸ್ತಿ ₹ 25 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ. ಜೂನ್‌ 9ರಂದು ಸಂಜೆ 4 ಗಂಟೆಗೆ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಕಲಾಮಂದಿರದಲ್ಲಿ ಕವಿ ಪ್ರೊ.ಎಚ್‌.ಎಸ್‌.ಶಿವಪ್ರಕಾಶ್‌ ಅವರು ಪ್ರಶಸ್ತಿ ಪ್ರದಾನ ಮಾಡುವರು. 

ಕೃತಿ ಕುರಿತು ಡಾ.ಟಿ.ಎಸ್‌.ರಘುನಾಥ್‌ ಮಾತನಾಡುವರು. ಪ್ರತಿಷ್ಠಾನದ ಅಧ್ಯಕ್ಷ ಡಾ.ಕೆ.ಪುಟ್ಟಸ್ವಾಮಿ ಅಧ್ಯಕ್ಷತೆ ವಹಿಸುವರು. ಆಜೀವ ಸದಸ್ಯರಾದ ಡಿ.ಪಿ.ರಾಜಮ್ಮ ರಾಮಣ್ಣ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT