<p><strong>ಗುವಾಹಟಿ:</strong> 'ಒಂದೇ ಒಂದು ಪಂದ್ಯದಲ್ಲಿ ಮಾತ್ರ ನಾಯಕತ್ವ ವಹಿಸುವುದು ಉತ್ತಮ ಸನ್ನಿವೇಶವಲ್ಲ' ಎಂದು ಭಾರತ ಟೆಸ್ಟ್ ತಂಡದ ಉಸ್ತುವಾರಿ ನಾಯಕ ರಿಷಭ್ ಪಂತ್ ಅಭಿಪ್ರಾಯಪಟ್ಟಿದ್ದಾರೆ. </p><p>ಗುವಾಹಟಿಯಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವನ್ನು ಪಂತ್ ಮುನ್ನಡೆಸಲಿದ್ದಾರೆ. ಆ ಮೂಲಕ ಭಾರತ ಟೆಸ್ಟ್ ಕ್ರಿಕೆಟ್ ತಂಡದ 38ನೇ ನಾಯಕರೆನಿಸಲಿದ್ದಾರೆ. </p><p>ಕುತ್ತಿಗೆ ನೋವಿನಿಂದ ಇನ್ನಷ್ಟೇ ಚೇತರಿಸಿಕೊಳ್ಳಬೇಕಿರುವ ಶುಭಮನ್ ಗಿಲ್ ಅಂತಿಮ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. </p><p>ಗುವಾಹಟಿ ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಪಂತ್, 'ಒಂದೇ ಟೆಸ್ಟ್ನಲ್ಲಿ ನಾಯಕತ್ವ ವಹಿಸುವುದು ಅತ್ಯುತ್ತಮ ಸನ್ನಿವೇಶವಲ್ಲ. ಆದರೆ ಈ ಬಗ್ಗೆ ಅತಿಯಾಗಿ ಯೋಚಿಸಲು ಬಯಸುವುದಿಲ್ಲ. ಬಿಸಿಸಿಐ ಈ ಅವಕಾಶ ನೀಡಿದ್ದಕ್ಕಾಗಿ ಹೆಮ್ಮೆಪಟ್ಟುಕೊಳ್ಳುತ್ತೇನೆ. ದೇಶವನ್ನು ಮುನ್ನಡೆಸುವ ಅವಕಾಶ ಯಾವತ್ತೂ ಹೆಮ್ಮೆಯ ಕ್ಷಣ' ಎಂದು ಹೇಳಿದ್ದಾರೆ. </p><p>'ನಾಯಕತ್ವದ ಶೈಲಿಯ ಬಗ್ಗೆ ಕೇಳಿದಾಗ ಹಳೆ ಹಾಗೂ ಹೊಸತನದ ಮಿಶ್ರಣವಾಗಿರಲಿದೆ ಎಂದು ಹೇಳಿದ್ದಾರೆ. ಸಾಂಪ್ರದಾಯಿಕ ಜೊತೆಗೆ 'ಔಟ್ ಆಫ್ ಬಾಕ್ಸ್' ಚಿಂತನೆಯು ನೆರವಾಗಲಿದೆ. ಆದ್ದರಿಂದ ಇವರೆಡರ ನಡುವೆ ಸಮತೋಲನ ಕಾಪಾಡಿಕೊಳ್ಳುವುದು ಮುಖ್ಯವೆನಿಸುತ್ತದೆ' ಎಂದು ಹೇಳಿದ್ದಾರೆ.</p><p>'ಮುಕ್ತವಾಗಿ ಆಡಲು ಆಟಗಾರರಿಗೆ ಅವಕಾಶ ನೀಡುವುದು ನನ್ನ ಮೊದಲ ಆದ್ಯತೆ. ಓರ್ವ ಆಟಗಾರನಾಗಿ ನಾನು ಕೂಡ ಅದನ್ನೇ ಇಷ್ಟಪಡುತ್ತೇನೆ' ಎಂದು ಹೇಳಿದ್ದಾರೆ. </p><p>'ಶೇ 100ರಷ್ಟು ಸಮರ್ಪಣಾ ಮನೋಭಾವದಿಂದ ಆಡಲಿದ್ದೇನೆ. ಪಂದ್ಯದಲ್ಲಿ ಪ್ರತಿಯೊಂದು ಕ್ಷಣವನ್ನು ಆನಂದಿಸಲು ಬಯಸುತ್ತೇನೆ' ಎಂದಿದ್ದಾರೆ. </p><p>ಗಿಲ್ ಜೊತೆ ಮಾತನಾಡಿದ್ದೀರಾ ಎಂದು ಕೇಳಿದಾಗ, 'ನಾನು ಯಾವತ್ತೂ ಗಿಲ್ ಜೊತೆ ಮಾತನಾಡುತ್ತಿರುತ್ತೇನೆ' ಎಂದು ಹೇಳಿದ್ದಾರೆ. </p><p>ಏತನ್ಮಧ್ಯೆ ಎರಡು ಪಂದ್ಯಗಳ ಕಿರು ಸರಣಿಯಲ್ಲಿ ಪುಟಿದೇಳುವುದು ಕಷ್ಟಕರ ಎಂದು ಪಂತ್ ಒಪ್ಪಿಕೊಂಡಿದ್ದಾರೆ. ಆದರೂ ಅಂತಿಮ ಪಂದ್ಯವನ್ನು ಗೆದ್ದು ಸರಣಿ ಸಮಬಲಗೊಳಿಸುವ ನಿರೀಕ್ಷೆಯಲ್ಲಿದ್ದಾರೆ. </p><p>ಕೋಲ್ಕತ್ತದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲು ಅನುಭವಿಸಿರುವ ಭಾರತ, ಸರಣಿ ಸಮಬಲಗೊಳಿಸಲು ಈ ಪಂದ್ಯದಲ್ಲೇ ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ.</p>.IND vs SA Test | ಭಾರತ ತಂಡಕ್ಕೆ ಹಿನ್ನಡೆ: ಎರಡನೇ ಪಂದ್ಯಕ್ಕೆ ಗಿಲ್ ಅಲಭ್ಯ.IND vs SA: ಸರಣಿ ಸಮಬಲದತ್ತ ಭಾರತ ಚಿತ್ತ; ಚಾರಿತ್ರಿಕ ಸಾಧನೆಗಾಗಿ ತೆಂಬಾ ಪಡೆ ತವಕ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong> 'ಒಂದೇ ಒಂದು ಪಂದ್ಯದಲ್ಲಿ ಮಾತ್ರ ನಾಯಕತ್ವ ವಹಿಸುವುದು ಉತ್ತಮ ಸನ್ನಿವೇಶವಲ್ಲ' ಎಂದು ಭಾರತ ಟೆಸ್ಟ್ ತಂಡದ ಉಸ್ತುವಾರಿ ನಾಯಕ ರಿಷಭ್ ಪಂತ್ ಅಭಿಪ್ರಾಯಪಟ್ಟಿದ್ದಾರೆ. </p><p>ಗುವಾಹಟಿಯಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವನ್ನು ಪಂತ್ ಮುನ್ನಡೆಸಲಿದ್ದಾರೆ. ಆ ಮೂಲಕ ಭಾರತ ಟೆಸ್ಟ್ ಕ್ರಿಕೆಟ್ ತಂಡದ 38ನೇ ನಾಯಕರೆನಿಸಲಿದ್ದಾರೆ. </p><p>ಕುತ್ತಿಗೆ ನೋವಿನಿಂದ ಇನ್ನಷ್ಟೇ ಚೇತರಿಸಿಕೊಳ್ಳಬೇಕಿರುವ ಶುಭಮನ್ ಗಿಲ್ ಅಂತಿಮ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. </p><p>ಗುವಾಹಟಿ ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಪಂತ್, 'ಒಂದೇ ಟೆಸ್ಟ್ನಲ್ಲಿ ನಾಯಕತ್ವ ವಹಿಸುವುದು ಅತ್ಯುತ್ತಮ ಸನ್ನಿವೇಶವಲ್ಲ. ಆದರೆ ಈ ಬಗ್ಗೆ ಅತಿಯಾಗಿ ಯೋಚಿಸಲು ಬಯಸುವುದಿಲ್ಲ. ಬಿಸಿಸಿಐ ಈ ಅವಕಾಶ ನೀಡಿದ್ದಕ್ಕಾಗಿ ಹೆಮ್ಮೆಪಟ್ಟುಕೊಳ್ಳುತ್ತೇನೆ. ದೇಶವನ್ನು ಮುನ್ನಡೆಸುವ ಅವಕಾಶ ಯಾವತ್ತೂ ಹೆಮ್ಮೆಯ ಕ್ಷಣ' ಎಂದು ಹೇಳಿದ್ದಾರೆ. </p><p>'ನಾಯಕತ್ವದ ಶೈಲಿಯ ಬಗ್ಗೆ ಕೇಳಿದಾಗ ಹಳೆ ಹಾಗೂ ಹೊಸತನದ ಮಿಶ್ರಣವಾಗಿರಲಿದೆ ಎಂದು ಹೇಳಿದ್ದಾರೆ. ಸಾಂಪ್ರದಾಯಿಕ ಜೊತೆಗೆ 'ಔಟ್ ಆಫ್ ಬಾಕ್ಸ್' ಚಿಂತನೆಯು ನೆರವಾಗಲಿದೆ. ಆದ್ದರಿಂದ ಇವರೆಡರ ನಡುವೆ ಸಮತೋಲನ ಕಾಪಾಡಿಕೊಳ್ಳುವುದು ಮುಖ್ಯವೆನಿಸುತ್ತದೆ' ಎಂದು ಹೇಳಿದ್ದಾರೆ.</p><p>'ಮುಕ್ತವಾಗಿ ಆಡಲು ಆಟಗಾರರಿಗೆ ಅವಕಾಶ ನೀಡುವುದು ನನ್ನ ಮೊದಲ ಆದ್ಯತೆ. ಓರ್ವ ಆಟಗಾರನಾಗಿ ನಾನು ಕೂಡ ಅದನ್ನೇ ಇಷ್ಟಪಡುತ್ತೇನೆ' ಎಂದು ಹೇಳಿದ್ದಾರೆ. </p><p>'ಶೇ 100ರಷ್ಟು ಸಮರ್ಪಣಾ ಮನೋಭಾವದಿಂದ ಆಡಲಿದ್ದೇನೆ. ಪಂದ್ಯದಲ್ಲಿ ಪ್ರತಿಯೊಂದು ಕ್ಷಣವನ್ನು ಆನಂದಿಸಲು ಬಯಸುತ್ತೇನೆ' ಎಂದಿದ್ದಾರೆ. </p><p>ಗಿಲ್ ಜೊತೆ ಮಾತನಾಡಿದ್ದೀರಾ ಎಂದು ಕೇಳಿದಾಗ, 'ನಾನು ಯಾವತ್ತೂ ಗಿಲ್ ಜೊತೆ ಮಾತನಾಡುತ್ತಿರುತ್ತೇನೆ' ಎಂದು ಹೇಳಿದ್ದಾರೆ. </p><p>ಏತನ್ಮಧ್ಯೆ ಎರಡು ಪಂದ್ಯಗಳ ಕಿರು ಸರಣಿಯಲ್ಲಿ ಪುಟಿದೇಳುವುದು ಕಷ್ಟಕರ ಎಂದು ಪಂತ್ ಒಪ್ಪಿಕೊಂಡಿದ್ದಾರೆ. ಆದರೂ ಅಂತಿಮ ಪಂದ್ಯವನ್ನು ಗೆದ್ದು ಸರಣಿ ಸಮಬಲಗೊಳಿಸುವ ನಿರೀಕ್ಷೆಯಲ್ಲಿದ್ದಾರೆ. </p><p>ಕೋಲ್ಕತ್ತದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲು ಅನುಭವಿಸಿರುವ ಭಾರತ, ಸರಣಿ ಸಮಬಲಗೊಳಿಸಲು ಈ ಪಂದ್ಯದಲ್ಲೇ ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ.</p>.IND vs SA Test | ಭಾರತ ತಂಡಕ್ಕೆ ಹಿನ್ನಡೆ: ಎರಡನೇ ಪಂದ್ಯಕ್ಕೆ ಗಿಲ್ ಅಲಭ್ಯ.IND vs SA: ಸರಣಿ ಸಮಬಲದತ್ತ ಭಾರತ ಚಿತ್ತ; ಚಾರಿತ್ರಿಕ ಸಾಧನೆಗಾಗಿ ತೆಂಬಾ ಪಡೆ ತವಕ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>