<p><strong>ಕೋಲ್ಕತ್ತ:</strong> 'ಗಾಯದ ಬಳಿಕ ತಂಡಕ್ಕೆ ಪುನರಾಗಮನ ಮಾಡುವುದು ಅಷ್ಟು ಸುಲಭದ ವಿಷಯವಲ್ಲ' ಎಂದು ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್, ಬ್ಯಾಟರ್ ರಿಷಭ್ ಪಂತ್ ಹೇಳಿದ್ದಾರೆ. </p><p>ಕಳೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ವೇಳೆ ಗಾಯಕ್ಕೊಳಗಾಗಿದ್ದ ಪಂತ್, ನಾಲ್ಕು ತಿಂಗಳ ಸುದೀರ್ಘ ವಿಶ್ರಾಂತಿಯ ಬಳಿಕ ತಂಡಕ್ಕೆ ಮರಳಿದ್ದಾರೆ. </p><p>ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ನಿಭಾಯಿಸಲಿದ್ದಾರೆ. </p><p>ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ 'ಎ' ತಂಡದ ವಿರುದ್ಧ ನಡೆದ ಸರಣಿಯಲ್ಲಿ ಭಾರತ 'ಎ' ತಂಡವನ್ನು ಮುನ್ನಡೆಸಿದ್ದ ಪಂತ್ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದರು. </p><p>'ಸ್ಪರ್ಧಾತ್ಮಕ ಕ್ರಿಕೆಟ್ಗೆ ಮತ್ತೆ ಮರಳುತ್ತಿರುವುದು ಖುಷಿ ತಂದಿದೆ. ಏಕೆಂದರೆ ಗಾಯದ ಬಳಿಕ ತಂಡಕ್ಕೆ ಮರಳುವುದು ಸುಲಭವಲ್ಲ. ದೇವರು ನನ್ನಲ್ಲಿ ದಯೆ ತೋರಿದ್ದಾನೆ. ದೇವರ ಆಶೀರ್ವಾದ ಸದಾ ಇದೆ' ಎಂದು ಬಿಸಿಸಿಐ ಪೋಸ್ಟ್ ಮಾಡಿದ ವಿಡಿಯೊದಲ್ಲಿ ತಿಳಿಸಿದ್ದಾರೆ. </p><p>'ಅದಕ್ಕಾಗಿಯೇ ಪ್ರತಿ ಸಲವೂ ಮೈದಾನಕ್ಕಿಳಿದಾಗ ಆಕಾಶಕ್ಕೆ ನೋಡಿ ದೇವರಿಗೆ, ನನ್ನ ಕುಟುಂಬದವರಿಗೆ, ಎಲ್ಲರಿಗೂ ಧನ್ಯವಾದ ವ್ಯಕ್ತಪಡಿಸುತ್ತೇನೆ. ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ' ಎಂದು ಭೀಕರ ಕಾರು ಅಪಘಾತದಿಂದ ಪವಾಡ ಸದೃಶ್ಯ ಪಾರಾಗಿದ್ದ ಪಂತ್ ನುಡಿದಿದ್ದಾರೆ. </p><p>'ಭವಿಷ್ಯದ ಬಗ್ಗೆ ಅನಗತ್ಯ ಚಿಂತೆಗೆ ಈಡಾಗುವ ಬದಲು ಪುನಶ್ಚೇತನದ ಸಮಯದಲ್ಲಿ ಉತ್ತಮ ಮನಸ್ಥಿತಿಯಲ್ಲಿರಲು ಪ್ರಯತ್ನಿಸಿದ್ದೇನೆ. ನನ್ನಿಂದ ನಿಯಂತ್ರಿಸಲು ಸಾಧ್ಯವಾದ ವಿಷಯಗಳ ಬಗ್ಗೆ ಮಾತ್ರ ಗಮನ ಹರಿಸುತ್ತಿದ್ದೆ' ಎಂದು ಪಂತ್ ವಿವರಿಸಿದ್ದಾರೆ. </p><p>'ಕಠಿಣ ಪರಿಸ್ಥಿತಿಯಿಂದ ತುಂಬಾ ಪಾಠ ಕಲಿಯಲು ಸಾಧ್ಯ. ಪ್ರತಿ ಕ್ಷಣವನ್ನು ಆನಂದಿಸಲು ಪ್ರಯತ್ನಿಸುತ್ತೇನೆ. ಮೈದಾನದಲ್ಲಿ ಶೇ 100ರಷ್ಟು ಅರ್ಪಣಾ ಮನೋಭಾವದಿಂದ ಆಡಲು ಯತ್ನಿಸುತ್ತೇನೆ' ಎಂದು 28 ವರ್ಷದ ಪಂತ್ ಹೇಳಿದ್ದಾರೆ. </p>.ಭದ್ರತಾ ಆತಂಕ: ತ್ರಿಕೋನ ಟಿ20 ಸರಣಿಯ ವೇಳಾಪಟ್ಟಿ ಮರುನಿಗದಿಪಡಿಸಿದ ಪಿಸಿಬಿ.IND vs SA Test Cricket: ಪಂತ್ ನೆರಳಿನಿಂದ ಹೊರಬಂದ ಜುರೆಲ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> 'ಗಾಯದ ಬಳಿಕ ತಂಡಕ್ಕೆ ಪುನರಾಗಮನ ಮಾಡುವುದು ಅಷ್ಟು ಸುಲಭದ ವಿಷಯವಲ್ಲ' ಎಂದು ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್, ಬ್ಯಾಟರ್ ರಿಷಭ್ ಪಂತ್ ಹೇಳಿದ್ದಾರೆ. </p><p>ಕಳೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ವೇಳೆ ಗಾಯಕ್ಕೊಳಗಾಗಿದ್ದ ಪಂತ್, ನಾಲ್ಕು ತಿಂಗಳ ಸುದೀರ್ಘ ವಿಶ್ರಾಂತಿಯ ಬಳಿಕ ತಂಡಕ್ಕೆ ಮರಳಿದ್ದಾರೆ. </p><p>ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ನಿಭಾಯಿಸಲಿದ್ದಾರೆ. </p><p>ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ 'ಎ' ತಂಡದ ವಿರುದ್ಧ ನಡೆದ ಸರಣಿಯಲ್ಲಿ ಭಾರತ 'ಎ' ತಂಡವನ್ನು ಮುನ್ನಡೆಸಿದ್ದ ಪಂತ್ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದರು. </p><p>'ಸ್ಪರ್ಧಾತ್ಮಕ ಕ್ರಿಕೆಟ್ಗೆ ಮತ್ತೆ ಮರಳುತ್ತಿರುವುದು ಖುಷಿ ತಂದಿದೆ. ಏಕೆಂದರೆ ಗಾಯದ ಬಳಿಕ ತಂಡಕ್ಕೆ ಮರಳುವುದು ಸುಲಭವಲ್ಲ. ದೇವರು ನನ್ನಲ್ಲಿ ದಯೆ ತೋರಿದ್ದಾನೆ. ದೇವರ ಆಶೀರ್ವಾದ ಸದಾ ಇದೆ' ಎಂದು ಬಿಸಿಸಿಐ ಪೋಸ್ಟ್ ಮಾಡಿದ ವಿಡಿಯೊದಲ್ಲಿ ತಿಳಿಸಿದ್ದಾರೆ. </p><p>'ಅದಕ್ಕಾಗಿಯೇ ಪ್ರತಿ ಸಲವೂ ಮೈದಾನಕ್ಕಿಳಿದಾಗ ಆಕಾಶಕ್ಕೆ ನೋಡಿ ದೇವರಿಗೆ, ನನ್ನ ಕುಟುಂಬದವರಿಗೆ, ಎಲ್ಲರಿಗೂ ಧನ್ಯವಾದ ವ್ಯಕ್ತಪಡಿಸುತ್ತೇನೆ. ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ' ಎಂದು ಭೀಕರ ಕಾರು ಅಪಘಾತದಿಂದ ಪವಾಡ ಸದೃಶ್ಯ ಪಾರಾಗಿದ್ದ ಪಂತ್ ನುಡಿದಿದ್ದಾರೆ. </p><p>'ಭವಿಷ್ಯದ ಬಗ್ಗೆ ಅನಗತ್ಯ ಚಿಂತೆಗೆ ಈಡಾಗುವ ಬದಲು ಪುನಶ್ಚೇತನದ ಸಮಯದಲ್ಲಿ ಉತ್ತಮ ಮನಸ್ಥಿತಿಯಲ್ಲಿರಲು ಪ್ರಯತ್ನಿಸಿದ್ದೇನೆ. ನನ್ನಿಂದ ನಿಯಂತ್ರಿಸಲು ಸಾಧ್ಯವಾದ ವಿಷಯಗಳ ಬಗ್ಗೆ ಮಾತ್ರ ಗಮನ ಹರಿಸುತ್ತಿದ್ದೆ' ಎಂದು ಪಂತ್ ವಿವರಿಸಿದ್ದಾರೆ. </p><p>'ಕಠಿಣ ಪರಿಸ್ಥಿತಿಯಿಂದ ತುಂಬಾ ಪಾಠ ಕಲಿಯಲು ಸಾಧ್ಯ. ಪ್ರತಿ ಕ್ಷಣವನ್ನು ಆನಂದಿಸಲು ಪ್ರಯತ್ನಿಸುತ್ತೇನೆ. ಮೈದಾನದಲ್ಲಿ ಶೇ 100ರಷ್ಟು ಅರ್ಪಣಾ ಮನೋಭಾವದಿಂದ ಆಡಲು ಯತ್ನಿಸುತ್ತೇನೆ' ಎಂದು 28 ವರ್ಷದ ಪಂತ್ ಹೇಳಿದ್ದಾರೆ. </p>.ಭದ್ರತಾ ಆತಂಕ: ತ್ರಿಕೋನ ಟಿ20 ಸರಣಿಯ ವೇಳಾಪಟ್ಟಿ ಮರುನಿಗದಿಪಡಿಸಿದ ಪಿಸಿಬಿ.IND vs SA Test Cricket: ಪಂತ್ ನೆರಳಿನಿಂದ ಹೊರಬಂದ ಜುರೆಲ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>