ಕೋಲ್ಕತ್ತ: ಭಾರತದ ಕ್ರಿಕೆಟ್ ಇಂದು ಅಪಾಯದಂಚಿನಲ್ಲಿದೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಜೊಹ್ರಿ ವಿರುದ್ಧ ಕೇಳಿಬಂದ ಲೈಂಗಿಕ ದೌರ್ಜನ್ಯ ಆರೋಪದ ಸೂಕ್ತ ತನಿಖೆ ಮಾಡುವಲ್ಲಿ ಆಡಳಿತ ವಿಫಲವಾಗಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಬಂಗಾಳ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಸೌರವ್ ಗಂಗೂಲಿ ಕಳವಳ ವ್ಯಕ್ತಪಡಿಸಿದ್ದಾರೆ.