<p><strong>ಅಮಸ್ಟೆಲ್ವೀನ್</strong>: ಭಾರತ ಪುರುಷರ ಹಾಕಿ ತಂಡವು ಸೋಮವಾರ ನಡೆಯಲಿರುವ ಎಫ್ಐಎಚ್ ಪ್ರೊ ಲೀಗ್ ಹಾಕಿ ಟೂರ್ನಿಯ ಯುರೋಪಿಯನ್ ಲೆಗ್ ಪಂದ್ಯದಲ್ಲಿ ಪುಟಿದೇಳುವ ಛಲದಲ್ಲಿದೆ. </p>.<p>ಟೂರ್ನಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು 1–2ರಿಂದ ಒಲಿಂಪಿಕ್ಸ್ ಚಾಂಪಿಯನ್ ನೆದರ್ಲೆಂಡ್ಸ್ ವಿರುದ್ಧ ಸೋತಿತ್ತು. ಆ ಪಂದ್ಯದ ಆರಂಭಿಕ ಹಂತದಲ್ಲಿ ಭಾರತದ ಆಟಗಾರರು ಉತ್ತಮ ಆಟವಾಡಿದ್ದರು. ನಾಯಕ ಹರ್ಮನ್ಪ್ರೀತ್ ಸಿಂಗ್ ಅವರು ಪೆನಾಲ್ಟಿ ಕಾರ್ನರ್ ಅವಕಾಶದಲ್ಲಿ ಗೋಲು ಗಳಿಸಿದ್ದರು. ಅದರಿಂದಾಗಿ ತಂಡ ಮುನ್ನಡೆ ಸಾಧಿಸಿತ್ತು. </p>.<p>ದಿಟ್ಟ ತಿರುಗೇಟು ನೀಡಿದ ಡಚ್ ಪಡೆಯು ತಿಜಿಸ್ ವ್ಯಾನ್ ಡ್ಯಾಮ್ ಅವರ ಎರಡು ಗೋಲುಗಳು ಭಾರತದ ಕೈಯಿಂದ ಗೆಲುವನ್ನು ಕಿತ್ತುಕೊಂಡವು. </p>.<p>‘ನಾವು ಮೊದಲಾರ್ಧದಲ್ಲಿ ಉತ್ತಮವಾಗಿ ಆಡಿದ್ದೆವು. ಮೂರನೇ ಕ್ವಾರ್ಟರ್ನಲ್ಲಿ ಅಷ್ಟೊಂದು ಚೆನ್ನಾಗಿ ಆಡಲಾಗಲಿಲ್ಲ. ನಾಲ್ಕನೇ ಕ್ವಾರ್ಟರ್ನಲ್ಲಿ ಉತ್ತಮವಾಗಿ ಆಡಿದರೂ ಗೋಲು ಗಳಿಸಲು ಸಾಧ್ಯವಾಗಲಿಲ್ಲ’ ಎಂದು ಭಾರತ ತಂಡದ ಮುಖ್ಯ ಕೋಚ್ ಕ್ರೇಗ್ ಫುಲ್ಟನ್ ಅವರು ಪಂದ್ಯದ ನಂತರ ಹೇಳಿದ್ದರು. </p>.<p>ಟೂರ್ನಿಯಲ್ಲಿ ಇನ್ನೂ ಏಳು ಪಂದ್ಯಗಳು ಬಾಕಿಯಿವೆ. ಈ ಹಂತದಲ್ಲಿ ಭಾರತ ತಂಡವು 15 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. </p>.<p>ಮುಂದಿನ ವರ್ಷ ನಡೆಯಲಿರುವ ವಿಶ್ವಕಪ್ ಹಾಕಿ ಟೂರ್ನಿಯಲ್ಲಿ ಸ್ಥಾನ ಪಡೆಯುವ ಛಲದಲ್ಲಿರುವ ಭಾರತ ತಂಡವು ಇನ್ನೂ ಉಳಿದಿರುವ ಪಂದ್ಯಗಳಲ್ಲಿ ಗೆಲುವು ಸಾಧಿಸಿ ಅಂಕಗಳನ್ನು ಹೆಚ್ಚಿಸಿಕೊಳ್ಳಬೇಕಿದೆ.</p>.<p>ಈ ವರ್ಷಾರಂಭದಲ್ಲಿ ಭಾರತ ತಂಡವು ಭುವನೇಶ್ವರದಲ್ಲಿ ಪ್ರೊ ಲೀಗ್ನ ತವರು ಚರಣದ ಪಂದ್ಯಗಳನ್ನು ಆಡಿತ್ತು. ಅದರಲ್ಲಿ ನಡೆದ ಎಂಟು ಪಂದ್ಯಗಳಲ್ಲಿ 5ರಲ್ಲಿ ಗೆದ್ದಿತ್ತು. 15 ಅಂಕ ಗಳಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮಸ್ಟೆಲ್ವೀನ್</strong>: ಭಾರತ ಪುರುಷರ ಹಾಕಿ ತಂಡವು ಸೋಮವಾರ ನಡೆಯಲಿರುವ ಎಫ್ಐಎಚ್ ಪ್ರೊ ಲೀಗ್ ಹಾಕಿ ಟೂರ್ನಿಯ ಯುರೋಪಿಯನ್ ಲೆಗ್ ಪಂದ್ಯದಲ್ಲಿ ಪುಟಿದೇಳುವ ಛಲದಲ್ಲಿದೆ. </p>.<p>ಟೂರ್ನಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು 1–2ರಿಂದ ಒಲಿಂಪಿಕ್ಸ್ ಚಾಂಪಿಯನ್ ನೆದರ್ಲೆಂಡ್ಸ್ ವಿರುದ್ಧ ಸೋತಿತ್ತು. ಆ ಪಂದ್ಯದ ಆರಂಭಿಕ ಹಂತದಲ್ಲಿ ಭಾರತದ ಆಟಗಾರರು ಉತ್ತಮ ಆಟವಾಡಿದ್ದರು. ನಾಯಕ ಹರ್ಮನ್ಪ್ರೀತ್ ಸಿಂಗ್ ಅವರು ಪೆನಾಲ್ಟಿ ಕಾರ್ನರ್ ಅವಕಾಶದಲ್ಲಿ ಗೋಲು ಗಳಿಸಿದ್ದರು. ಅದರಿಂದಾಗಿ ತಂಡ ಮುನ್ನಡೆ ಸಾಧಿಸಿತ್ತು. </p>.<p>ದಿಟ್ಟ ತಿರುಗೇಟು ನೀಡಿದ ಡಚ್ ಪಡೆಯು ತಿಜಿಸ್ ವ್ಯಾನ್ ಡ್ಯಾಮ್ ಅವರ ಎರಡು ಗೋಲುಗಳು ಭಾರತದ ಕೈಯಿಂದ ಗೆಲುವನ್ನು ಕಿತ್ತುಕೊಂಡವು. </p>.<p>‘ನಾವು ಮೊದಲಾರ್ಧದಲ್ಲಿ ಉತ್ತಮವಾಗಿ ಆಡಿದ್ದೆವು. ಮೂರನೇ ಕ್ವಾರ್ಟರ್ನಲ್ಲಿ ಅಷ್ಟೊಂದು ಚೆನ್ನಾಗಿ ಆಡಲಾಗಲಿಲ್ಲ. ನಾಲ್ಕನೇ ಕ್ವಾರ್ಟರ್ನಲ್ಲಿ ಉತ್ತಮವಾಗಿ ಆಡಿದರೂ ಗೋಲು ಗಳಿಸಲು ಸಾಧ್ಯವಾಗಲಿಲ್ಲ’ ಎಂದು ಭಾರತ ತಂಡದ ಮುಖ್ಯ ಕೋಚ್ ಕ್ರೇಗ್ ಫುಲ್ಟನ್ ಅವರು ಪಂದ್ಯದ ನಂತರ ಹೇಳಿದ್ದರು. </p>.<p>ಟೂರ್ನಿಯಲ್ಲಿ ಇನ್ನೂ ಏಳು ಪಂದ್ಯಗಳು ಬಾಕಿಯಿವೆ. ಈ ಹಂತದಲ್ಲಿ ಭಾರತ ತಂಡವು 15 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. </p>.<p>ಮುಂದಿನ ವರ್ಷ ನಡೆಯಲಿರುವ ವಿಶ್ವಕಪ್ ಹಾಕಿ ಟೂರ್ನಿಯಲ್ಲಿ ಸ್ಥಾನ ಪಡೆಯುವ ಛಲದಲ್ಲಿರುವ ಭಾರತ ತಂಡವು ಇನ್ನೂ ಉಳಿದಿರುವ ಪಂದ್ಯಗಳಲ್ಲಿ ಗೆಲುವು ಸಾಧಿಸಿ ಅಂಕಗಳನ್ನು ಹೆಚ್ಚಿಸಿಕೊಳ್ಳಬೇಕಿದೆ.</p>.<p>ಈ ವರ್ಷಾರಂಭದಲ್ಲಿ ಭಾರತ ತಂಡವು ಭುವನೇಶ್ವರದಲ್ಲಿ ಪ್ರೊ ಲೀಗ್ನ ತವರು ಚರಣದ ಪಂದ್ಯಗಳನ್ನು ಆಡಿತ್ತು. ಅದರಲ್ಲಿ ನಡೆದ ಎಂಟು ಪಂದ್ಯಗಳಲ್ಲಿ 5ರಲ್ಲಿ ಗೆದ್ದಿತ್ತು. 15 ಅಂಕ ಗಳಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>