ಈ ಬಗ್ಗೆ ಪ್ತತಿಕ್ರಿಯಿಸಿರುವ ಶ್ರೇಯಸ್ ಅಯ್ಯರ್, ಕೆಕೆಆರ್ನಂತಹ ಪ್ರತಿಷ್ಠಿತ ತಂಡವನ್ನು ಮುನ್ನಡೆಸುವ ಅವಕಾಶ ಸಿಕ್ಕಿರುವುದು ಅತ್ಯಂತ ಗೌರವದ ವಿಷಯ ಎಂದು ಭಾವಿಸುತ್ತೇನೆ. ಐಪಿಎಲ್, ಬೇರೆ ಬೇರೆ ದೇಶಗಳು ಮತ್ತು ವಿಭಿನ್ನ ಸಂಸ್ಕೃತಿ ಇರುವ ಅತ್ಯುತ್ತಮ ಆಟಗಾರರನ್ನು ಕರೆತರುತ್ತದೆ. ಅತ್ಯಂತ ಪ್ರತಿಭಾನ್ವಿತ ಆಟಗಾರರಿರುವ ಕೆಕೆಆರ್ ತಂಡವನ್ನು ಮುನ್ನಡೆಸಲು ಕಾತರನಾಗಿದ್ದೇನೆ’ ಎಂದು ಹೇಳಿದ್ದಾರೆ.