<p><strong>ನವದೆಹಲಿ:</strong> ಪ್ರಧಾನಿ ನರೇಂದ್ರ ಮೋದಿ ಅವರನ್ನು ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ವಿಜೇತ ಭಾರತ ತಂಡದ ಆಟಗಾರ್ತಿಯರು ಇಂದು (ಬುಧವಾರ) ಭೇಟಿಯಾಗಿದ್ದಾರೆ. </p><p>ಪ್ರಧಾನಿ ನಿವಾಸದಲ್ಲಿ ನಡೆದ ಸಂವಾದದಲ್ಲಿ ಮಹಿಳಾ ಆಟಗಾರ್ತಿಯರನ್ನು ಅಭಿನಂದಿಸಿದ ಮೋದಿ, ಅದ್ಭುತ ಪ್ರದರ್ಶನಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. </p><p>ನವಿ ಮುಂಬೈಯಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್ ಅಂತರದಿಂದ ಮಣಿಸಿದ ಹರ್ಮನ್ಪ್ರೀತ್ ಕೌರ್ ಬಳಗವು ಚೊಚ್ಚಲ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿತ್ತು. </p><p>2017ರ ವಿಶ್ವಕಪ್ ಬಳಿಕ ಪ್ರಧಾನಿ ಅವರೊಂದಿಗಿನ ಭೇಟಿಯನ್ನು ನೆನಪಿಸಿಕೊಂಡ ನಾಯಕಿ ಹರ್ಮನ್, ಅಂದು ಟ್ರೋಫಿ ಇಲ್ಲದೆ ಬಂದಿದ್ದೆವು. ಆದರೆ ಟ್ರೋಫಿ ಗೆದ್ದ ಬಳಿಕ ಮತ್ತೆ ಭೇಟಿಯಾಗುವುದಾಗಿ ಆಶಿಸಿದ್ದೇವೆ ಎಂದು ತಿಳಿಸಿದ್ದಾರೆ. </p><p>ಪ್ರಧಾನಿ ಅವರ ಮಾತುಗಳು ಸದಾ ಸ್ಫೂರ್ತಿದಾಯಕವಾಗಿವೆ ಎಂದು ಉಪನಾಯಕಿ ಸ್ಮೃತಿ ಮಂದಾನ ಅಭಿಪ್ರಾಯಪಟ್ಟಿದ್ದಾರೆ. </p>.ವಿಶ್ವಕಪ್ ಗೆಲುವು: ಹಚ್ಚೆ ಹಾಕಿಸಿ ವಿಜಯವನ್ನು ಸಂಭ್ರಮಿಸಿದ ನಾಯಕಿ ಹರ್ಮನ್ಪ್ರೀತ್.ಐಸಿಸಿ ಟಿ20 ರ್ಯಾಂಕಿಂಗ್: ಅಭಿಷೇಕ್, ವರುಣ್ ಅಗ್ರಸ್ಥಾನ ಅಬಾಧಿತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪ್ರಧಾನಿ ನರೇಂದ್ರ ಮೋದಿ ಅವರನ್ನು ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ವಿಜೇತ ಭಾರತ ತಂಡದ ಆಟಗಾರ್ತಿಯರು ಇಂದು (ಬುಧವಾರ) ಭೇಟಿಯಾಗಿದ್ದಾರೆ. </p><p>ಪ್ರಧಾನಿ ನಿವಾಸದಲ್ಲಿ ನಡೆದ ಸಂವಾದದಲ್ಲಿ ಮಹಿಳಾ ಆಟಗಾರ್ತಿಯರನ್ನು ಅಭಿನಂದಿಸಿದ ಮೋದಿ, ಅದ್ಭುತ ಪ್ರದರ್ಶನಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. </p><p>ನವಿ ಮುಂಬೈಯಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್ ಅಂತರದಿಂದ ಮಣಿಸಿದ ಹರ್ಮನ್ಪ್ರೀತ್ ಕೌರ್ ಬಳಗವು ಚೊಚ್ಚಲ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿತ್ತು. </p><p>2017ರ ವಿಶ್ವಕಪ್ ಬಳಿಕ ಪ್ರಧಾನಿ ಅವರೊಂದಿಗಿನ ಭೇಟಿಯನ್ನು ನೆನಪಿಸಿಕೊಂಡ ನಾಯಕಿ ಹರ್ಮನ್, ಅಂದು ಟ್ರೋಫಿ ಇಲ್ಲದೆ ಬಂದಿದ್ದೆವು. ಆದರೆ ಟ್ರೋಫಿ ಗೆದ್ದ ಬಳಿಕ ಮತ್ತೆ ಭೇಟಿಯಾಗುವುದಾಗಿ ಆಶಿಸಿದ್ದೇವೆ ಎಂದು ತಿಳಿಸಿದ್ದಾರೆ. </p><p>ಪ್ರಧಾನಿ ಅವರ ಮಾತುಗಳು ಸದಾ ಸ್ಫೂರ್ತಿದಾಯಕವಾಗಿವೆ ಎಂದು ಉಪನಾಯಕಿ ಸ್ಮೃತಿ ಮಂದಾನ ಅಭಿಪ್ರಾಯಪಟ್ಟಿದ್ದಾರೆ. </p>.ವಿಶ್ವಕಪ್ ಗೆಲುವು: ಹಚ್ಚೆ ಹಾಕಿಸಿ ವಿಜಯವನ್ನು ಸಂಭ್ರಮಿಸಿದ ನಾಯಕಿ ಹರ್ಮನ್ಪ್ರೀತ್.ಐಸಿಸಿ ಟಿ20 ರ್ಯಾಂಕಿಂಗ್: ಅಭಿಷೇಕ್, ವರುಣ್ ಅಗ್ರಸ್ಥಾನ ಅಬಾಧಿತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>