<p><strong>ಬ್ರಿಜ್ಟೌನ್, ಬಾರ್ಬಾಡೋಸ್:</strong> ಬೆರಿಲ್ ಚಂಡಮಾರುತದ ಪರಿಣಾಮ ಬಾರ್ಬಾಡೋಸ್ನಲ್ಲಿಯೇ ಸಿಲುಕಿರುವ ಟಿ20 ವಿಶ್ವಕಪ್ ವಿಜೇತ ಭಾರತ ತಂಡ ಮಂಗಳವಾರ ಸಂಜೆ ಚಾರ್ಟರ್ ವಿಮಾನದಲ್ಲಿ ಸ್ವದೇಶಕ್ಕೆ ಪ್ರಯಾಣಿಸಲಿದೆ ಎಂದು ಬಾರ್ಬಾಡೋಸ್ ಪ್ರಧಾನಿ ಮಿಯಾ ಮೋಟ್ಲಿ ತಿಳಿಸಿದ್ದಾರೆ. </p>.<p>ಮುಂದಿನ 6ರಿಂದ 12 ಗಂಟೆಗಳ ಒಳಗಾಗಿ ವಿಮಾನ ನಿಲ್ದಾಣ ಕಾರ್ಯಾಚರಣೆಗೆ ಸಿದ್ಧವಾಗಲಿದೆ ಎಬ ನಿರೀಕ್ಷೆ ಹೊಂದಿರುವುದಾಗಿ ಅವರು ತಿಳಿಸಿದ್ದಾರೆ.</p>.<p>ದಕ್ಷಿಣ ಆಫ್ರಿಕಾ ವಿರುದ್ಧ ವಿಶ್ವಕಪ್ ಫೈನಲ್ ಪಂದ್ಯವನ್ನು ಏಳು ರನ್ಗಳಿಂದ ಗೆದ್ದ ನಂತರ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ, ಸಹಾಯಕ ಸಿಬ್ಬಂದಿ, ಬಿಸಿಸಿಐ ಅಧಿಕಾರಿಗಳು ಸೇರಿದಂತೆ ಆಟಗಾರರ ಕುಟುಂಬದ ಸದಸ್ಯರು ಬಾರ್ಬಾಡೋಸ್ನಲ್ಲಿಯೇ ಉಳಿದಿದ್ದಾರೆ. </p>.<p>ಬೆರಿಲ್ ಚಂಡಮಾರುತವು ಬಾರ್ಬಾಬಡೋಸ್ ಮತ್ತು ಸಮೀಪದ ದ್ವೀಪಗಳಿಗೆ ಸೋಮವಾರ ಅಪ್ಪಳಿಸಿದೆ. ಸುಮಾರು ಮೂರು ಲಕ್ಷ ಜನಸಂಖ್ಯೆಯಿರುವ ದೇಶ ಭಾನುವಾರ ಸಂಜೆಯಿಂದಲೇ ಸ್ತಬ್ದಗೊಂಡಿದೆ. ವಿಮಾನ ನಿಲ್ದಾಣ ಮುಚ್ಚಲಾಗಿದೆ.</p>.<p>‘ನಾನು ವಿಮಾನ ನಿಲ್ದಾಣ ಸಿಬ್ಬಂದಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ. ವಿಮಾನ ನಿಲ್ದಾಣದ ಕಾರ್ಯಾಚರಣೆಗೆ ಸಿಬ್ಬಂದಿಯು ಅಂತಿಮ ಹಂತದ ಪರಿಶೀಲನಾ ಕೆಲಸದಲ್ಲಿ ತೊಡಗಿದ್ದಾರೆ’ ಎಂದು ಪಿಟಿಐ ತಿಳಿಸಿದೆ.</p>.<p>ಭಾರತ ತಂಡದ ಸದಸ್ಯರು ಬ್ರಿಜ್ಟೌನ್ನಿಂದ ಸ್ಥಳೀಯ ಕಾಲಮಾನ ಮಂಗಳವಾರ ಸಂಜೆ 6 ಗಂಟೆ ಹೊರಟು, ಬುಧವಾರ ಸಂಜೆ 7.45ಕ್ಕೆ ದೆಹಲಿ ತಲುಪುವ ನಿರೀಕ್ಷೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ರಿಜ್ಟೌನ್, ಬಾರ್ಬಾಡೋಸ್:</strong> ಬೆರಿಲ್ ಚಂಡಮಾರುತದ ಪರಿಣಾಮ ಬಾರ್ಬಾಡೋಸ್ನಲ್ಲಿಯೇ ಸಿಲುಕಿರುವ ಟಿ20 ವಿಶ್ವಕಪ್ ವಿಜೇತ ಭಾರತ ತಂಡ ಮಂಗಳವಾರ ಸಂಜೆ ಚಾರ್ಟರ್ ವಿಮಾನದಲ್ಲಿ ಸ್ವದೇಶಕ್ಕೆ ಪ್ರಯಾಣಿಸಲಿದೆ ಎಂದು ಬಾರ್ಬಾಡೋಸ್ ಪ್ರಧಾನಿ ಮಿಯಾ ಮೋಟ್ಲಿ ತಿಳಿಸಿದ್ದಾರೆ. </p>.<p>ಮುಂದಿನ 6ರಿಂದ 12 ಗಂಟೆಗಳ ಒಳಗಾಗಿ ವಿಮಾನ ನಿಲ್ದಾಣ ಕಾರ್ಯಾಚರಣೆಗೆ ಸಿದ್ಧವಾಗಲಿದೆ ಎಬ ನಿರೀಕ್ಷೆ ಹೊಂದಿರುವುದಾಗಿ ಅವರು ತಿಳಿಸಿದ್ದಾರೆ.</p>.<p>ದಕ್ಷಿಣ ಆಫ್ರಿಕಾ ವಿರುದ್ಧ ವಿಶ್ವಕಪ್ ಫೈನಲ್ ಪಂದ್ಯವನ್ನು ಏಳು ರನ್ಗಳಿಂದ ಗೆದ್ದ ನಂತರ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ, ಸಹಾಯಕ ಸಿಬ್ಬಂದಿ, ಬಿಸಿಸಿಐ ಅಧಿಕಾರಿಗಳು ಸೇರಿದಂತೆ ಆಟಗಾರರ ಕುಟುಂಬದ ಸದಸ್ಯರು ಬಾರ್ಬಾಡೋಸ್ನಲ್ಲಿಯೇ ಉಳಿದಿದ್ದಾರೆ. </p>.<p>ಬೆರಿಲ್ ಚಂಡಮಾರುತವು ಬಾರ್ಬಾಬಡೋಸ್ ಮತ್ತು ಸಮೀಪದ ದ್ವೀಪಗಳಿಗೆ ಸೋಮವಾರ ಅಪ್ಪಳಿಸಿದೆ. ಸುಮಾರು ಮೂರು ಲಕ್ಷ ಜನಸಂಖ್ಯೆಯಿರುವ ದೇಶ ಭಾನುವಾರ ಸಂಜೆಯಿಂದಲೇ ಸ್ತಬ್ದಗೊಂಡಿದೆ. ವಿಮಾನ ನಿಲ್ದಾಣ ಮುಚ್ಚಲಾಗಿದೆ.</p>.<p>‘ನಾನು ವಿಮಾನ ನಿಲ್ದಾಣ ಸಿಬ್ಬಂದಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ. ವಿಮಾನ ನಿಲ್ದಾಣದ ಕಾರ್ಯಾಚರಣೆಗೆ ಸಿಬ್ಬಂದಿಯು ಅಂತಿಮ ಹಂತದ ಪರಿಶೀಲನಾ ಕೆಲಸದಲ್ಲಿ ತೊಡಗಿದ್ದಾರೆ’ ಎಂದು ಪಿಟಿಐ ತಿಳಿಸಿದೆ.</p>.<p>ಭಾರತ ತಂಡದ ಸದಸ್ಯರು ಬ್ರಿಜ್ಟೌನ್ನಿಂದ ಸ್ಥಳೀಯ ಕಾಲಮಾನ ಮಂಗಳವಾರ ಸಂಜೆ 6 ಗಂಟೆ ಹೊರಟು, ಬುಧವಾರ ಸಂಜೆ 7.45ಕ್ಕೆ ದೆಹಲಿ ತಲುಪುವ ನಿರೀಕ್ಷೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>