<p><strong>ಬ್ರಿಜ್ಟೌನ್(ಬಾರ್ಬಡೋಸ್):</strong> ಟಿ–20 ವಿಶ್ವಕಪ್ ವಿಜೇತ ಭಾರತ ತಂಡ ಇಂದು ಸಂಜೆ ಬಾರ್ಬಡೋಸ್ನಿಂದ ಭಾರತಕ್ಕೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ.</p><p>ಕೆಟಗರಿ 4ರ ಭಾರಿ ಚಂಡಮಾರುತದ ಹಿನ್ನೆಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಮುಚ್ಚಲಾಗಿರುವ ವಿಮಾನ ನಿಲ್ದಾಣ 6 ರಿಂದ 12 ಗಂಟೆಗಳಲ್ಲಿ ತೆರೆಯುವ ಸಾಧ್ಯತೆ ಇದೆ ಎಂದು ಬಾರ್ಬಡೋಸ್ ಪ್ರಧಾನಿ ಮಿಯಾ ಮೋಟ್ಲಿ ಹೇಳಿದ್ದಾರೆ.</p><p>ಚಂಡಮಾರುತ ಬೆರಿಲ್ ಅಬ್ಬರದಿಂದಾಗಿ ರೋಹಿತ್ ಶರ್ಮಾ ನೇತೃತ್ವದ ಟಿ–20 ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯರು, ಸಹಾಯಕ ಸಿಬ್ಬಂದಿ, ಬಿಸಿಸಿಐ ಅಧಿಕಾರಿಗಳು ಮತ್ತು ಆಟಗಾರರ ಕುಟುಂಬ ಸದಸ್ಯರು ಬಾರ್ಬಡೋಸ್ನಲ್ಲೇ ಎರಡು ದಿನಗಳಿಂದ ಸಿಲುಕಿಕೊಂಡಿದ್ದಾರೆ.</p>. <p>ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್ಗಳಿಂದ ಮಣಿಸಿ ಭಾರತ ತಂಡ ಟ್ರೋಫಿ ಎತ್ತಿಹಿಡಿದಿತ್ತು.</p><p>‘ನಾವು ವಿಮಾನ ನಿಲ್ದಾಣ ತೆರೆಯುವ ಬಗ್ಗೆ ಕಾರ್ಯೋನ್ಮುಖರಾಗಿದ್ದೇವೆ. ವಿಮಾನ ನಿಲ್ದಾಣದ ಅಧಿಕಾರಿಗಳ ಜೊತೆ ಸಂಪರ್ಕದಲಿದ್ದೇವೆ. ಕೊನೆಯ ಹಂತದ ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ತುರ್ತು ಇರುವ ಕಾರಣ ನಾವು ಆದಷ್ಟು ಬೇಗ ವಿಮಾನಗಳ ಕಾರ್ಯಾಚರಣೆ ಆರಂಭಿಸಲಿದ್ದೇವೆ’ ಎಂದು ಮೋಟ್ಲಿ ಹೇಳಿದ್ದಾರೆ.</p><p>‘ಹಲವು ಮಂದಿ ತಮ್ಮ ದೇಶಗಳಿಗೆ ತೆರಳಲು ಕಾಯುತ್ತಿದ್ದಾರೆ. 6 ರಿಂದ 12 ಗಂಟೆ ಒಳಗೆ ನಿಲ್ದಾಣ ತೆರೆಯಬಹುದು ಎಂದು ನಾನು ಹೇಳಬಲ್ಲೆ’ ಎಂದು ಪ್ರಧಾನಿ ಹೇಳಿದ್ದಾರೆ.</p><p>ಮಾರಣಾಂತಿಕ ಮಾರುತಗಳು ಸೋಮವಾರವೂ ಬಾರ್ಬಡೋ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ರಿಜ್ಟೌನ್(ಬಾರ್ಬಡೋಸ್):</strong> ಟಿ–20 ವಿಶ್ವಕಪ್ ವಿಜೇತ ಭಾರತ ತಂಡ ಇಂದು ಸಂಜೆ ಬಾರ್ಬಡೋಸ್ನಿಂದ ಭಾರತಕ್ಕೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ.</p><p>ಕೆಟಗರಿ 4ರ ಭಾರಿ ಚಂಡಮಾರುತದ ಹಿನ್ನೆಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಮುಚ್ಚಲಾಗಿರುವ ವಿಮಾನ ನಿಲ್ದಾಣ 6 ರಿಂದ 12 ಗಂಟೆಗಳಲ್ಲಿ ತೆರೆಯುವ ಸಾಧ್ಯತೆ ಇದೆ ಎಂದು ಬಾರ್ಬಡೋಸ್ ಪ್ರಧಾನಿ ಮಿಯಾ ಮೋಟ್ಲಿ ಹೇಳಿದ್ದಾರೆ.</p><p>ಚಂಡಮಾರುತ ಬೆರಿಲ್ ಅಬ್ಬರದಿಂದಾಗಿ ರೋಹಿತ್ ಶರ್ಮಾ ನೇತೃತ್ವದ ಟಿ–20 ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯರು, ಸಹಾಯಕ ಸಿಬ್ಬಂದಿ, ಬಿಸಿಸಿಐ ಅಧಿಕಾರಿಗಳು ಮತ್ತು ಆಟಗಾರರ ಕುಟುಂಬ ಸದಸ್ಯರು ಬಾರ್ಬಡೋಸ್ನಲ್ಲೇ ಎರಡು ದಿನಗಳಿಂದ ಸಿಲುಕಿಕೊಂಡಿದ್ದಾರೆ.</p>. <p>ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್ಗಳಿಂದ ಮಣಿಸಿ ಭಾರತ ತಂಡ ಟ್ರೋಫಿ ಎತ್ತಿಹಿಡಿದಿತ್ತು.</p><p>‘ನಾವು ವಿಮಾನ ನಿಲ್ದಾಣ ತೆರೆಯುವ ಬಗ್ಗೆ ಕಾರ್ಯೋನ್ಮುಖರಾಗಿದ್ದೇವೆ. ವಿಮಾನ ನಿಲ್ದಾಣದ ಅಧಿಕಾರಿಗಳ ಜೊತೆ ಸಂಪರ್ಕದಲಿದ್ದೇವೆ. ಕೊನೆಯ ಹಂತದ ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ತುರ್ತು ಇರುವ ಕಾರಣ ನಾವು ಆದಷ್ಟು ಬೇಗ ವಿಮಾನಗಳ ಕಾರ್ಯಾಚರಣೆ ಆರಂಭಿಸಲಿದ್ದೇವೆ’ ಎಂದು ಮೋಟ್ಲಿ ಹೇಳಿದ್ದಾರೆ.</p><p>‘ಹಲವು ಮಂದಿ ತಮ್ಮ ದೇಶಗಳಿಗೆ ತೆರಳಲು ಕಾಯುತ್ತಿದ್ದಾರೆ. 6 ರಿಂದ 12 ಗಂಟೆ ಒಳಗೆ ನಿಲ್ದಾಣ ತೆರೆಯಬಹುದು ಎಂದು ನಾನು ಹೇಳಬಲ್ಲೆ’ ಎಂದು ಪ್ರಧಾನಿ ಹೇಳಿದ್ದಾರೆ.</p><p>ಮಾರಣಾಂತಿಕ ಮಾರುತಗಳು ಸೋಮವಾರವೂ ಬಾರ್ಬಡೋ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>