<p><strong>ನವದೆಹಲಿ:</strong> ಬಾಂಗ್ಲಾದೇಶದಲ್ಲಿ ಚುಟುಕು ಮತ್ತು ಏಕದಿನ ಕ್ರಿಕೆಟ್ ಸರಣಿಗಾಗಿ ನಿಗದಿಯಾಗಿದ್ದ ಭಾರತ ತಂಡದ ಪ್ರವಾಸ ಇದೀಗ ಮುಂದಕ್ಕೆ ಹೋಗುವ ಸಾಧ್ಯತೆಯಿದೆ. ಶೇಖ್ ಹಸೀನಾ ಪದಚ್ಯುತಿಯ ನಂತರ ಅಲ್ಲಿ ತಲೆದೋರಿದ್ದ ಆಂತರಿಕ ಸಂಘರ್ಷ ಇನ್ನೂ ಶಮನ ಆಗದಿರುವುದು ಬಿಸಿಸಿಐ ಕಳವಳಕ್ಕೆ ಕಾರಣ ಎನ್ನಲಾಗಿದೆ.</p>.<p>ಭಾರತ ತಂಡವು ಆಗಸ್ಟ್ 17ರಿಂದ 31ರ ವರೆಗಿನ ಪ್ರವಾಸದಲ್ಲಿ ತಲಾ ಮೂರು ಟಿ20 ಹಾಗೂ ಏಕದಿನ ಪಂದ್ಯಗಳನ್ನು ಆಡಬೇಕಾಗಿತ್ತು.</p>.<p>‘ನೆರೆಯ ದೇಶದಲ್ಲಿ ಅಶಾಂತಿಯ ವಾತಾವರಣ ಇನ್ನೂ ಮುಂದುವರಿದಿರುವುದರಿಂದ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಚಿಂತಿತವಾಗಿದೆ’ ಎಂದು ಮಂಡಳಿಯ ಮೂಲವೊಂದು ಪಿಟಿಐಗೆ ತಿಳಿಸಿದೆ</p>.<p>‘ಭಾರತ–ಬಾಂಗ್ಲಾದೇಶ ವೈಟ್ಬಾಲ್ ಸರಣಿ ರದ್ದಾಗಿಲ್ಲ. 2027ರ ನಡೆಯಲಿರುವ ಐಸಿಸಿ ವಿಶ್ವಕಪ್ ಟೂರ್ನಿಗೆ ಅರ್ಹತೆ ಪಡೆಯಲು ಈ ಸರಣಿಯ ಅಂಕಗಳು ಮಹತ್ವದ್ದಾಗಿವೆ. ಹೀಗಾಗಿ, ಸರಣಿ ಬಹು ಮಟ್ಟಿಗೆ 2026ರಲ್ಲಿ ನಡೆಯುವ ಸಾಧ್ಯತೆ ಇದೆ’ ಎಂದು ಅದು ತಿಳಿಸಿದೆ.</p>.<p>ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆದು, ಸ್ಥಿರ ಸರ್ಕಾರ ರಚನೆಯಾಗುವವರೆಗೆ ಪ್ರವಾಸ ಕೈಗೊಳ್ಳದಿರಲು ಬಿಸಿಸಿಐ ನಿರ್ಧರಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಬಾಂಗ್ಲಾದಲ್ಲಿ ಮುಂದಿನ ವರ್ಷದ ಆರಂಭದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಾಂಗ್ಲಾದೇಶದಲ್ಲಿ ಚುಟುಕು ಮತ್ತು ಏಕದಿನ ಕ್ರಿಕೆಟ್ ಸರಣಿಗಾಗಿ ನಿಗದಿಯಾಗಿದ್ದ ಭಾರತ ತಂಡದ ಪ್ರವಾಸ ಇದೀಗ ಮುಂದಕ್ಕೆ ಹೋಗುವ ಸಾಧ್ಯತೆಯಿದೆ. ಶೇಖ್ ಹಸೀನಾ ಪದಚ್ಯುತಿಯ ನಂತರ ಅಲ್ಲಿ ತಲೆದೋರಿದ್ದ ಆಂತರಿಕ ಸಂಘರ್ಷ ಇನ್ನೂ ಶಮನ ಆಗದಿರುವುದು ಬಿಸಿಸಿಐ ಕಳವಳಕ್ಕೆ ಕಾರಣ ಎನ್ನಲಾಗಿದೆ.</p>.<p>ಭಾರತ ತಂಡವು ಆಗಸ್ಟ್ 17ರಿಂದ 31ರ ವರೆಗಿನ ಪ್ರವಾಸದಲ್ಲಿ ತಲಾ ಮೂರು ಟಿ20 ಹಾಗೂ ಏಕದಿನ ಪಂದ್ಯಗಳನ್ನು ಆಡಬೇಕಾಗಿತ್ತು.</p>.<p>‘ನೆರೆಯ ದೇಶದಲ್ಲಿ ಅಶಾಂತಿಯ ವಾತಾವರಣ ಇನ್ನೂ ಮುಂದುವರಿದಿರುವುದರಿಂದ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಚಿಂತಿತವಾಗಿದೆ’ ಎಂದು ಮಂಡಳಿಯ ಮೂಲವೊಂದು ಪಿಟಿಐಗೆ ತಿಳಿಸಿದೆ</p>.<p>‘ಭಾರತ–ಬಾಂಗ್ಲಾದೇಶ ವೈಟ್ಬಾಲ್ ಸರಣಿ ರದ್ದಾಗಿಲ್ಲ. 2027ರ ನಡೆಯಲಿರುವ ಐಸಿಸಿ ವಿಶ್ವಕಪ್ ಟೂರ್ನಿಗೆ ಅರ್ಹತೆ ಪಡೆಯಲು ಈ ಸರಣಿಯ ಅಂಕಗಳು ಮಹತ್ವದ್ದಾಗಿವೆ. ಹೀಗಾಗಿ, ಸರಣಿ ಬಹು ಮಟ್ಟಿಗೆ 2026ರಲ್ಲಿ ನಡೆಯುವ ಸಾಧ್ಯತೆ ಇದೆ’ ಎಂದು ಅದು ತಿಳಿಸಿದೆ.</p>.<p>ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆದು, ಸ್ಥಿರ ಸರ್ಕಾರ ರಚನೆಯಾಗುವವರೆಗೆ ಪ್ರವಾಸ ಕೈಗೊಳ್ಳದಿರಲು ಬಿಸಿಸಿಐ ನಿರ್ಧರಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಬಾಂಗ್ಲಾದಲ್ಲಿ ಮುಂದಿನ ವರ್ಷದ ಆರಂಭದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>