‘ಕೊರೊನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಏರುತ್ತಲೇ ಇವೆ. ಈ ಸಮಯದಲ್ಲಿ ಲಂಕಾ ಪ್ರವಾಸ ಕೈಗೊಳ್ಳುವುದು ಸೂಕ್ತವಲ್ಲ. ಆಟಗಾರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜೂನ್ ಮತ್ತು ಜುಲೈನಲ್ಲಿ ನಿಗದಿಯಾಗಿದ್ದ ಸರಣಿಗಳನ್ನು ಮುಂದಕ್ಕೆ ಹಾಕಿದ್ದೇವೆ’ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಖಜಾಂಚಿ ಅರುಣ್ ಸಿಂಗ್ ಧುಮಾಲ್ ತಿಳಿಸಿದ್ದಾರೆ.