‘ಕೋವಿಡ್–19 ಪಿಡುಗಿನ ಕಾರಣ ಭಾರತ ಕ್ರಿಕೆಟ್ ತಂಡವು ಶ್ರೀಲಂಕಾ ಹಾಗೂ ಜಿಂಬಾಬ್ವೆ ಪ್ರವಾಸ ಕೈಗೊಳ್ಳುತ್ತಿಲ್ಲ. ಭಾರತ ತಂಡವು ಇದೇ 24ರಂದು ಶ್ರೀಲಂಕಾಕ್ಕೆ ತೆರಳಿ ಆ ತಂಡದ ಎದುರು ತಲಾ ಮೂರು ಏಕದಿನ ಹಾಗೂ ಟ್ವೆಂಟಿ–20 ಪಂದ್ಯಗಳನ್ನು ಆಡಬೇಕಿತ್ತು. ಜಿಂಬಾಬ್ವೆ ಎದುರು ಆಗಸ್ಟ್ 22ರಿಂದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಕಣಕ್ಕಿಳಿಯಬೇಕಿತ್ತು ’ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.