<p><strong>ನವದೆಹಲಿ:</strong> ಆಗಸ್ಟ್ನಲ್ಲಿ ನಿಗದಿಯಾಗಿದ್ದ ಭಾರತ ಕ್ರಿಕೆಟ್ ತಂಡದ ಜಿಂಬಾಬ್ವೆ ಪ್ರವಾಸವನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ)ಶುಕ್ರವಾರ ಕೋವಿಡ್–19 ಭೀತಿಯ ಹಿನ್ನೆಲೆಯಲ್ಲಿ ರದ್ದು ಮಾಡಿದೆ.</p>.<p>ಶ್ರೀಲಂಕಾ ಕ್ರಿಕೆಟ್ ಮಂಡಳಿಯು ಭಾರತ ವಿರುದ್ಧದ ಸೀಮಿತ ಓವರುಗಳ ಸರಣಿಯನ್ನು ಗುರುವಾರ ಅನಿರ್ದಿಷ್ಟಾವಧಿಗೆ ಮುಂದೂಡಿತ್ತು. ಹೀಗಾಗಿ ಜಿಂಬಾಬ್ವೆ ಪ್ರವಾಸದ ಮೇಲೂ ಕರಿನೆರಳು ಮೂಡಿತ್ತು.</p>.<p>‘ಕೋವಿಡ್–19 ಪಿಡುಗಿನ ಕಾರಣ ಭಾರತ ಕ್ರಿಕೆಟ್ ತಂಡವು ಶ್ರೀಲಂಕಾ ಹಾಗೂ ಜಿಂಬಾಬ್ವೆ ಪ್ರವಾಸ ಕೈಗೊಳ್ಳುತ್ತಿಲ್ಲ. ಭಾರತ ತಂಡವು ಇದೇ 24ರಂದು ಶ್ರೀಲಂಕಾಕ್ಕೆ ತೆರಳಿ ಆ ತಂಡದ ಎದುರು ತಲಾ ಮೂರು ಏಕದಿನ ಹಾಗೂ ಟ್ವೆಂಟಿ–20 ಪಂದ್ಯಗಳನ್ನು ಆಡಬೇಕಿತ್ತು. ಜಿಂಬಾಬ್ವೆ ಎದುರು ಆಗಸ್ಟ್ 22ರಿಂದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಕಣಕ್ಕಿಳಿಯಬೇಕಿತ್ತು ’ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.</p>.<p>ಭಾರತದಲ್ಲಿ ಸದ್ಯ ಕೊರೊನಾ ವೈರಾಣು ಸೋಂಕು ಪ್ರಕರಣಗಳ ಸಂಖ್ಯೆ ಮೂರು ಲಕ್ಷಕ್ಕೆ ಸಮೀಪಿಸಿದೆ.</p>.<p>ಭಾರತದ ಆಟಗಾರರು ಇನ್ನೂ ತರಬೇತಿ ಆರಂಭಿಸಿಲ್ಲ. ಜುಲೈಗಿಂತ ಮೊದಲು ಶಿಬಿರ ಆರಂಭವಾಗುವ ಸಾಧ್ಯತೆಯೂ ಇಲ್ಲ. ಪಂದ್ಯಕ್ಕೆ ಸಿದ್ಧವಾಗಲು ಆಟಗಾರರಿಗೆ ಇನ್ನೂ ಆರು ವಾರಗಳ ಅಗತ್ಯವಿದೆ ಎಂಬುದು ತಂಡದ ನೆರವು ಸಿಬ್ಬಂದಿಯ ಅಭಿಮತ.</p>.<p>‘ವಾತಾವರಣ ಸಂಪೂರ್ಣ ಸುರಕ್ಷಿತ ಎಂದೆನಿಸಿದಾಗ ಮಾತ್ರ ಗುತ್ತಿಗೆ ಹೊಂದಿದ ಆಟಗಾರರ ಹೊರಾಂಗಣ ತರಬೇತಿ ಶಿಬಿರಕ್ಕೆ ಅವಕಾಶ ನೀಡಲಾಗುವುದು’ ಎಂದು ಶಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಆಗಸ್ಟ್ನಲ್ಲಿ ನಿಗದಿಯಾಗಿದ್ದ ಭಾರತ ಕ್ರಿಕೆಟ್ ತಂಡದ ಜಿಂಬಾಬ್ವೆ ಪ್ರವಾಸವನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ)ಶುಕ್ರವಾರ ಕೋವಿಡ್–19 ಭೀತಿಯ ಹಿನ್ನೆಲೆಯಲ್ಲಿ ರದ್ದು ಮಾಡಿದೆ.</p>.<p>ಶ್ರೀಲಂಕಾ ಕ್ರಿಕೆಟ್ ಮಂಡಳಿಯು ಭಾರತ ವಿರುದ್ಧದ ಸೀಮಿತ ಓವರುಗಳ ಸರಣಿಯನ್ನು ಗುರುವಾರ ಅನಿರ್ದಿಷ್ಟಾವಧಿಗೆ ಮುಂದೂಡಿತ್ತು. ಹೀಗಾಗಿ ಜಿಂಬಾಬ್ವೆ ಪ್ರವಾಸದ ಮೇಲೂ ಕರಿನೆರಳು ಮೂಡಿತ್ತು.</p>.<p>‘ಕೋವಿಡ್–19 ಪಿಡುಗಿನ ಕಾರಣ ಭಾರತ ಕ್ರಿಕೆಟ್ ತಂಡವು ಶ್ರೀಲಂಕಾ ಹಾಗೂ ಜಿಂಬಾಬ್ವೆ ಪ್ರವಾಸ ಕೈಗೊಳ್ಳುತ್ತಿಲ್ಲ. ಭಾರತ ತಂಡವು ಇದೇ 24ರಂದು ಶ್ರೀಲಂಕಾಕ್ಕೆ ತೆರಳಿ ಆ ತಂಡದ ಎದುರು ತಲಾ ಮೂರು ಏಕದಿನ ಹಾಗೂ ಟ್ವೆಂಟಿ–20 ಪಂದ್ಯಗಳನ್ನು ಆಡಬೇಕಿತ್ತು. ಜಿಂಬಾಬ್ವೆ ಎದುರು ಆಗಸ್ಟ್ 22ರಿಂದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಕಣಕ್ಕಿಳಿಯಬೇಕಿತ್ತು ’ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.</p>.<p>ಭಾರತದಲ್ಲಿ ಸದ್ಯ ಕೊರೊನಾ ವೈರಾಣು ಸೋಂಕು ಪ್ರಕರಣಗಳ ಸಂಖ್ಯೆ ಮೂರು ಲಕ್ಷಕ್ಕೆ ಸಮೀಪಿಸಿದೆ.</p>.<p>ಭಾರತದ ಆಟಗಾರರು ಇನ್ನೂ ತರಬೇತಿ ಆರಂಭಿಸಿಲ್ಲ. ಜುಲೈಗಿಂತ ಮೊದಲು ಶಿಬಿರ ಆರಂಭವಾಗುವ ಸಾಧ್ಯತೆಯೂ ಇಲ್ಲ. ಪಂದ್ಯಕ್ಕೆ ಸಿದ್ಧವಾಗಲು ಆಟಗಾರರಿಗೆ ಇನ್ನೂ ಆರು ವಾರಗಳ ಅಗತ್ಯವಿದೆ ಎಂಬುದು ತಂಡದ ನೆರವು ಸಿಬ್ಬಂದಿಯ ಅಭಿಮತ.</p>.<p>‘ವಾತಾವರಣ ಸಂಪೂರ್ಣ ಸುರಕ್ಷಿತ ಎಂದೆನಿಸಿದಾಗ ಮಾತ್ರ ಗುತ್ತಿಗೆ ಹೊಂದಿದ ಆಟಗಾರರ ಹೊರಾಂಗಣ ತರಬೇತಿ ಶಿಬಿರಕ್ಕೆ ಅವಕಾಶ ನೀಡಲಾಗುವುದು’ ಎಂದು ಶಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>