ಮಂಗಳವಾರ ನ್ಯಾಷನ್ ಸ್ಪೋರ್ಟ್ಸ್ ಕ್ಲಬ್ ಆಫ್ ಇಂಡಿಯಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಕಾಶ್, ‘ರಾಜಕೀಯ ಮತ್ತು ಕ್ರೀಡೆಯನ್ನು ಬೆರೆಸಬಾರದು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಪಂದ್ಯವು ತನ್ನ ಪಾಡಿಗೆ ನಡೆಯಬೇಕು. ಆದರೂ ನಾನು ಈ ಕುರಿತು ಮಾತನಾಡಲು ಅಧಿಕೃತ ವ್ಯಕ್ತಿಯಲ್ಲ. ಇದು ನನ್ನ ವೈಯಕ್ತಿಕ ಅಭಿಪ್ರಾಯವಷ್ಟೇ’ ಎಂದಿದ್ದಾರೆ.