ಸೆಂಚುರಿಯನ್: ಸೀಮಿತ ಓವರ್ಗಳ ತಂಡದ ನಾಯಕತ್ವದಿಂದ ವಿರಾಟ್ ಕೊಹ್ಲಿಯನ್ನು ಕೈಬಿಡುವ ಕುರಿತು ಬಿಸಿಸಿಐ ಅಧಿಕಾರಿಗಳು ಮತ್ತು ಆಯ್ಕೆಗಾರರೊಂದಿಗೆ ನಡೆಸಿದ ಮಾತುಕತೆಯ ವಿವರಗಳನ್ನು ಮಾಧ್ಯಮಗಳಿಗೆ ನೀಡಲು ಸಾಧ್ಯವಿಲ್ಲ ಎಂದು ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆಂತರಿಕ ಮಾತುಕತೆಯ ವಿವರಗಳನ್ನು ಮಾಧ್ಯಮಗಳಿಗೆ ನೀಡಲು ಸಾಧ್ಯವಿಲ್ಲ‘ ಎಂದರು.
‘ವಿರಾಟ್ ಕೊಹ್ಲಿ ನಾಯಕರಾಗಿ ಮತ್ತು ಆಟಗಾರರಾಗಿ ತಂಡಕ್ಕೆ ನೀಡಿರುವ ಕೊಡುಗೆಯು ಬಹಳ ದೊಡ್ಡದು. ಟೆಸ್ಟ್ ಕ್ರಿಕೆಟ್ನಲ್ಲಿ ಆಡಲು ಇಷ್ಟಪಡುವ ಆಟಗಾರರಲ್ಲಿ ವಿರಾಟ್ ಕೂಡ ಒಬ್ಬರು. ಅವರ ಸ್ಪರ್ಧಾತ್ಮಕ ಮನೋಭಾವ ಅಮೋಘವಾದದ್ದು’ ಎಂದರು.